ರಾಜ್ಯಸಭೆಗೆ ನಿತೀಶ್‌: ಬಿಜೆಪಿಯಿಂದ ಬಿಹಾರ ‘ಸಿಎಂ’ ಭಾರತೀಯ ಮಡುರೋ ಆಗಿದ್ದಾರೆ; ವಿಪಕ್ಷಗಳ ಟೀಕೆ

Date:

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಅವರ ನಿರ್ವಹಿಸುತ್ತಿದ್ದ ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿ ಕಸಿದುಕೊಳ್ಳಲು ಈ ತಂತ್ರ ಹೆಡೆದಿದೆ. ನಿತೀಶ್‌ರನ್ನು ಭಾರತೀಯ ಮಡುರೋ ಮಾಡಿದೆ ಎಂದು ವಿಪಕ್ಷಗಳು ಆರೋಪಿಸಿವೆ.

ನಿತೀಶ್‌ ರಾಜ್ಯಸಭೆಗೆ ಪ್ರವೇಶಿಸುವ ಕುರಿತು ಪ್ರತಿಕ್ರಿಯಿಸಿರುವ ಅಲ್ಲಿನ ಪ್ರಮುಖ ವಿಪಕ್ಷ ರಾಷ್ಟ್ರೀಯ ಜನತಾ ದಳ (RJD), “ಬಿಹಾರದಲ್ಲಿ ಬಿಜೆಪಿ ರಾಜಕೀಯ ಅಪಹರಣ ನಡೆಸಿದೆ. ಜೆಡಿಯು ಮತದಾರರು ತಾನು ವಂಚನೆಗೆ ಒಳಗಾಗುತ್ತಿದ್ದೇವೆಂದು ಭಾವಿಸುತ್ತಿದ್ದಾರೆ” ಎಂದು ಹೇಳಿದೆ.

ಆರ್‌ಜೆಡಿಯ ರಾಜ್ಯಸಭಾ ಸಂಸದ ಮನೋಜ್ ಕುಮಾರ್ ಝಾ ಮಾತನಾಡಿ, “ನಿತೀಶ್ ಕುಮಾರ್ ಅವರು ಒಬ್ಬ ‘ತಾತ್ಕಾಲಿಕ ಮುಖ್ಯಮಂತ್ರಿ’ಯೆಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿಯೇ ಹೇಳಿದ್ದರು. ಆದರೆ, ನಿತೀಶ್‌ ಮುಖ್ಯಮಂತ್ರಿ ಹುದ್ದೆಯು ತೀರಾ ತಾತ್ಕಾಲಿಕವಾಯಿತು. ನಾನು ನಿತೀಶ್‌ ಅವರ ‘ಎಕ್ಸ್‌’ ಖಾತೆಯ ಪೋಸ್ಟ್ ಓದಿದೆ. ಅದನ್ನು ನಿತೀಶ್ ಅವರ ಪೋಸ್ಟ್ ಎಂದು ಕರೆಯಬೇಡಿ. ಅದರ ಪ್ರತಿಯೊಂದು ಪದವನ್ನೂ ದೆಹಲಿಯಲ್ಲಿ ರಚಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“21 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಈಗ ರಾಜ್ಯಸಭೆಗೆ ಬರಲು ಬಯಸುತ್ತಿದ್ದಾರೆ. ಇದು ಬಾಲಿಶವಾದುದು. ಕನಿಷ್ಠಪಕ್ಷ ಒಂದು ಸಮರ್ಥವಾದ ಕಾರಣವನ್ನಾದರೂ ನೀಡಬೇಕು” ಎಂದು ಝಾ ಹೇಳಿದ್ದಾರೆ. ಬಿಜೆಪಿಯ ಒತ್ತಡಕ್ಕೆ ಮಣಿದು ನಿತೀಶ್‌ ರಾಜ್ಯಸಭೆಗೆ ಹೋಗುತ್ತಿದ್ದಾರೆ ಎಂದು ಅವರು ಪರೋಕ್ಷವಾಗಿ ಪ್ರತಿಪಾದಿಸಿದ್ದಾರೆ.

ನಿತೀಶ್ ಅವರನ್ನು ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರಿಗೆ ಹೋಲಿಸಿದ ಝಾ, “ಇಲ್ಲಿ ಸಂಭವಿಸಿರುವುದು ವೆನೆಜುವೆಲಾದಲ್ಲಿ ಮಡುರೊ ಅವರಿಗೆ ಸಂಭವಿಸಿದ್ದನ್ನೇ ಹೋಲುತ್ತದೆ. ಸಮ್ಮತಿಯೊಂದಿಗೆ ನಡೆದ ಅಪಹರಣವಿದು. ನಿತೀಶ್‌ ಅವರ ಮೂಲ ಮತದಾರರು ತಾವು ವಂಚನೆಗೊಳಗಾಗಿದ್ದೇವೆಂದು ಭಾವಿಸುತ್ತಿದ್ದಾರೆ. ಇದು ಕ್ರಮವು ಬಿಹಾರದಲ್ಲಿ ಯಾರಿಗೂ ಹಿಡಿಸುವುದಿಲ್ಲ” ಎಂದು ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ 2024ರ ಚುನಾವಣಾ ಗೆಲುವಿನ ನಂತರ ಶಿವಸೇನಾ ಮುಖ್ಯಸ್ಥ ಏಕನಾಥ್ ಶಿಂಧೆ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಹೊರದಬ್ಬಿ, ಅವರನ್ನು ಉಪಮುಖ್ಯಮಂತ್ರಿ ಮಾಡಲು ಬಿಜೆಪಿ ಒಂದು ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ, ಅಂತಹ ತಂತ್ರ ಬಿಹಾರದಲ್ಲಿ ಫಲಿಸುವುದಿಲ್ಲ. ಬಿಹಾರವು ಮಹಾರಾಷ್ಟ್ರದಂತಲ್ಲ. ಇಲ್ಲಿ ನಿತೀಶ್ ಕುಮಾರ್ ಅವರನ್ನು ಕೆಳಸ್ಥಾನಕ್ಕೆ ಇಳಿಸಲು ಸಾಧ್ಯವಿಲ್ಲ ಎಂಬುದು ಬಿಜೆಪಿಗೆ ತಿಳಿದಿತ್ತು. ಆದ್ದರಿಂದ, ಅವರು ತಮ್ಮ ಕಾರ್ಯತಂತ್ರವನ್ನು ಬದಲಿಸಿದರು. ಅವರು ನಿತೀಶ್ ಅವರನ್ನು ‘ದೇಶಿ ಮಡುರೊ’ ಮಾಡಿದ್ದಾರೆ, ರಾಜ್ಯಸಭೆಗೆ ದೂಡಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

ಈ ಲೇಖನ ಓದಿದ್ದೀರಾ?: ಕಡೆಗೂ ಫಲಿಸಿತು ಬಿಜೆಪಿ ಹುನ್ನಾರ; ಬಿಹಾರ ಸಿಎಂ ಹುದ್ದೆ ಯಾರಿಗೆ?

ಆರ್‌ಜೆಡಿ ನಾಯಕ ಮೃತ್ಯುಂಜಯ್ ತಿವಾರಿ ಮಾತನಾಡಿ, “ಬಿಜೆಪಿ ಇಷ್ಟು ಬೇಗ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಜೆಡಿಯುನಲ್ಲಿರುವ ಅನೇಕರು ಬಿಜೆಪಿಯೊಂದಿಗೆ ಶಾಮೀಲಾಗಿದ್ದಾರೆ. ಆದರೆ ಅನೇಕರು ನಿತೀಶ್ ಕುಮಾರ್ ಅವರೇ ಮುಂದುವರಿಯಬೇಕೆಂದು ಬಯಸುತ್ತಾರೆ. ಇದೊಂದು ದೊಡ್ಡ ರಾಜಕೀಯ ಅಪಹರಣ. ತನ್ನ ಮಿತ್ರಪಕ್ಷಗಳ ಬಗ್ಗೆ ಬಿಜೆಪಿಯ ಧೋರಣೆ ಏನೆಂಬುದು ಈಗ ನಿಧಾನವಾಗಿ ಸ್ಪಷ್ಟವಾಗುತ್ತಿದೆ” ಎಂದು ಹೇಳಿದ್ದಾರೆ.

ಸಂಸತ್ತಿನ ಎರಡೂ ಸದನಗಳು ಮತ್ತು ರಾಜ್ಯ ಶಾಸಕಾಂಗದ ಎರಡೂ ಸದನಗಳ ಸದಸ್ಯನಾಗಬೇಕೆಂಬ ಆಸೆ ತಮಗೆ ದೀರ್ಘಕಾಲದಿಂದ ಇತ್ತು ಎಂದು ನಿತೀಶ್ ಕುಮಾರ್ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಅವರು ಈಗಾಗಲೇ ಲೋಕಸಭಾ ಸಂಸದರಾಗಿ, ಶಾಸಕರಾಗಿ ಮತ್ತು ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದು, ರಾಜ್ಯಸಭೆಯ ಸದಸ್ಯರಾಗುವುದು ಬಾಕಿ ಇತ್ತು. ಈಗ ಅವರು ನಾಲ್ಕೂ ಸದನಗಳ ಸದಸ್ಯತ್ವದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಾರೆ ಎಂದು ಬಿಜೆಪಿ ಮತ್ತು ಜೆಡಿಯು ಹೇಳಿಕೊಂಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...