ದೆಹಲಿ ವಿವಿಗೆ ಮೋದಿ ಭೇಟಿ ಹಿನ್ನೆಲೆ: ವಿದ್ಯಾರ್ಥಿಗಳಿಗೆ ಕಪ್ಪು ಬಟ್ಟೆ ಧರಿಸದಂತೆ ಸೂಚನೆ

Date:

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್ 30) ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಕಾರಣ ಕೆಲವು ದೆಹಲಿ ವಿಶ್ವವಿದ್ಯಾಲಯ ಕಾಲೇಜುಗಳು ವಿದ್ಯಾರ್ಥಿಗಳಿಗೆ ಕಪ್ಪು ಉಡುಪು ಧರಿಸುವಂತಿಲ್ಲ ಎಂದು ಸೂಚನೆ ನೀಡಿವೆ.

ಕಾರ್ಯಕ್ರಮದ ಅಂಗವಾಗಿ ಹಿಂದೂ ಕಾಲೇಜು, ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜು ಮತ್ತು ಜಾಕಿರ್ ಹುಸೇನ್ ಕಾಲೇಜುಗಳು ಕಾರ್ಯಕ್ರಮದ ನೇರ ಪ್ರಸಾರಕ್ಕೆ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಹಾಜರಾಗುವುದನ್ನು ಕಡ್ಡಾಯಗೊಳಿಸಿವೆ. ಕಾರ್ಯಕ್ರಮದ ಸಮಯದಲ್ಲಿ ಎಲ್ಲ ವಿದ್ಯಾರ್ಥಿಗಳ ಹಾಜರಾತಿಯು ಕಡ್ಡಾಯಗೊಳಿಸಲಾಗಿದೆ.

ವಿದ್ಯಾರ್ಥಿಗಳು ಗುರುತಿನ ಚೀಟಿ ತರಬೇಕು, ಆ ದಿನ ಕಪ್ಪು ಬಟ್ಟೆಯನ್ನು ಧರಿಸಬಾರದು ಎಂಬುದನ್ನು ಒಳಗೊಂಡು ಹಲವು ಸೂಚನೆಗಳನ್ನು ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜ್ಯಪಾಲರ ಭೇಟಿ: ರಾಜೀನಾಮೆ ಸಾಧ್ಯತೆ 

ವಿಶ್ವವಿದ್ಯಾನಿಲಯದ ನಿರ್ದೇಶನಗಳ ಪ್ರಕಾರ, ವಿವಿಯ ವಿವಿಧೋದ್ದೇಶ ಸಭಾಂಗಣದಲ್ಲಿ ಭೌತಿಕವಾಗಿ ಹಾಜರಿರುವ ಹೊಸದಾಗಿ ನೇಮಕಗೊಂಡ ಶಿಕ್ಷಕರನ್ನು ಹೊರತುಪಡಿಸಿ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಕಾಲೇಜಿನ ಗ್ರಂಥಾಲಯದಲ್ಲಿ ಶತಮಾನೋತ್ಸವ ಆಚರಣೆಗಳ ಸಮರ್ಪಣೆ ಕಾರ್ಯವನ್ನು ವೀಕ್ಷಿಸಲು ಕಡ್ಡಾಯವಾಗಿ ಹಾಜರಿರಬೇಕು ಎಂದು ಜಾಕಿರ್ ಹುಸೇನ್ ದೆಹಲಿ ಕಾಲೇಜು ತನ್ನ ಆದೇಶದಲ್ಲಿ ತಿಳಿಸಿದೆ.

ವಿವಿಯ ಹಲವಾರು ಇತರ ಕಾಲೇಜುಗಳ ಪ್ರಾಂಶುಪಾಲರು ಶತಮಾನೋತ್ಸವಕ್ಕೆ ಹಾಜರಾಗಲು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ವಿನಂತಿ ಮಾಡಿದ್ದಾರೆ. ಆದರೆ ದೆಹಲಿ ವಿಶ್ವವಿದ್ಯಾನಿಲಯ ಆಡಳಿತವು ಹಾಜರಾತಿಯನ್ನು ಕಡ್ಡಾಯಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗದವರು ಅದನ್ನು ನೇರ ಪ್ರಸಾರದ ಮೂಲಕ ನೋಡಲು ವ್ಯವಸ್ಥೆ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...