ಕಾರ್ ಇಲ್ಲ, ಕಚೇರಿ ಇಲ್ಲ, ಕೆಲಸ ಮಾಡಬೇಕು: ನೂತನ ಕಾರ್ಯಾಧ್ಯಕ್ಷರಿಗೆ ಡಿಕೆಶಿ ಸೂಚನೆ

Date:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ನೂತನವಾಗಿ ಆಯ್ಕೆಗೊಂಡ ಐವರು ಕಾರ್ಯಾಧ್ಯಕ್ಷರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ , ಡಿಸಿಎಂರಿಂದ ಕಾಂಗ್ರೆಸ್ ಬಾವುಟ ಪಡೆಯುವ ಮೂಲಕ ತನ್ವೀರ್ ಸೇಠ್, ವಿನಯ್ ಕುಲಕರ್ಣಿ, ಜಿ ಸಿ ಚಂದ್ರಶೇಖರ್, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅಧಿಕಾರ ಸ್ವೀಕರಿಸಿದರು.

ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌, “ನಿಮಗೆ ಸುತ್ತಾಡಲು ಕಾರು ಕೊಡುವುದಿಲ್ಲ. ಕಚೇರಿಯಲ್ಲಿ ರೂಮ್‌ ಕೊಡಲ್ಲ. ಆದರೆ, ಕೆಲಸ ಮಾಡಬೇಕು” ಎಂದು ತಾಕೀತು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮದೆ ಕಾರು ಬಳಸಿಕೊಂಡು ರಾಜ್ಯಾದ್ಯಂತ ಸುತ್ತಾಡಬೇಕು. ಹಿಂದಿನ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ‌, ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಆರ್‌ ಧ್ರುವನಾರಾಯಣ್ ಅವರನ್ನು ನೆನಸಿಕೊಳ್ಳಬೇಕು. ಅವರದ್ದೇ ಆದ ರೀತಿಯಲ್ಲಿ ಪಕ್ಷಕ್ಕೆ ಕೊಡುಗೆ ಕೊಟ್ಟಿದ್ದಾರೆ” ಎಂದು ನೆನಪಿಸಿದರು.

“ಎಂ ಬಿ ಪಾಟೀಲ್ ಅವರು ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ನಾನು ಸಹ ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೇನೆ. ಎನ್‌ಎಸ್‌ಯುಐಯಿಂದ ಬಂದವರು ನಾವು. ನನಗೆ ಎನ್‌ಎಸ್‌ಯುಐನಲ್ಲಿ ಟಿಕೆಟ್ ಕೊಟ್ಟಿರಲಿಲ್ಲ. ಯಾರು ಅಂತ ಈಗ ಹೇಳುವುದು ಬೇಡ. ನಾವು ಹಾಗೂ ಹೀಗೂ ಮಾಡಿ ಬೆಳೆದಿದ್ದೇವೆ” ಎಂದರು.

“ವಿಸಿಟಿಂಗ್ ಕಾರ್ಡ್ ಇಟ್ಟುಕೊಂಡು ಓಡಾಡಿದರೆ ಆಗಲ್ಲ. ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು ಕೆಲಸ ಮಾಡಬೇಕು. ಕೆಲಸ ‌ಮಾಡಿಲ್ಲ ಎಂದರೆ ಚುನಾವಣೆ ನಂತರ ನೀವು ಮಾಜಿಗಳು ಆಗುತ್ತೀರಿ. ನಾನು ಎಷ್ಟು ದಿನ ಇರುತ್ತೇನೊ ಬಿಡುತ್ತೇನೋ ಗೊತ್ತಿಲ್ಲ. ನೀವು ಕೆಲಸ ‌ಮಾಡಬೇಕು” ಎಂದು ಸೂಚಿಸಿದರು.

“ಆರು ಬಾರಿ ಶಾಸಕರಾಗಿರುವ ತನ್ವೀರ್ ಸೇಠ್ ಅವರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಿರುವುದು ಹೆಮ್ಮೆಯ ವಿಚಾರ. ಜಿ.ಸಿ ಚಂದ್ರಶೇಖರ್ ಅವರು ವಿದ್ಯಾರ್ಥಿ ನಾಯಕತ್ವದಿಂದ ರಾಜ್ಯಸಭೆಗೆ ಪ್ರವೇಶ ಮಾಡಿದ್ದು, ವಿನಯ್ ಕುಲಕರ್ಣಿ ಅವರು ಯುವ ನಾಯಕತ್ವದಿಂದ ಸಚಿವರಾಗಿದ್ದು, ಮಂಜುನಾಥ ಭಂಡಾರಿ ಅವರು ವಿದ್ಯಾರ್ಥಿ ನಾಯಕರಾಗಿ ಶಾಸಕರಾಗಿದ್ದು, ಇವರ ಜತೆಗೆ ವಸಂತ ಕುಮಾರ್ ಅವರು ಕೂಡ ಯುವ ನಾಯಕತ್ವದಿಂದ ಬೆಳೆದು ಬಂದಿದ್ದು, ಇವರುಗಳು ಪಕ್ಷದ ಕಾರ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಪ್ರಚಾರಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ ಅವರು ಆಯ್ಕೆಯಾಗಿದ್ದು, ಇವು ಪವಿತ್ರ ಕೆಲಸವಾಗಿದ್ದು, ನಿಮ್ಮ ಅವಧಿಯಲ್ಲಿ ನೀವು ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...