ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಚರ್ಚೆ: ಮೋದಿ ವಿರುದ್ಧ ರಾಹುಲ್‌ ವಾಗ್ದಾಳಿ; ನಾಳೆ ಪ್ರಧಾನಿ ಉತ್ತರ

Date:

ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಮಂಗಳವಾರದಿಂದ ಲೋಕಸಭೆಯಲ್ಲಿ ಚರ್ಚೆ ಆರಂಭವಾಗಿದೆ. ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಚರ್ಚೆಯ ಕುರಿತು ಉತ್ತರ ನೀಡಲಿದ್ದು, ಬಳಿಕ ಮತದಾನ ನಡೆಯಲಿದೆ.

ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡದಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಲೋಕಸಭೆಗೆ ಎಳೆದು ತರುವ ಸಲುವಾಗಿಯೇ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಅವಿಶ್ವಾಸ ನಿರ್ಣಯ ಮಂಡಿಸಿದೆ.

ಅವಿಶ್ವಾಸ ನಿರ್ಣಯದ ಬಗ್ಗೆ ನಡೆದ ಚರ್ಚೆಯಲ್ಲಿ ಇಂದು (ಆಗಸ್ಟ್ 09) ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ಅವರು ಮಣಿಪುರಕ್ಕೆ ಹೋಗಿಲ್ಲ, ಏಕೆಂದರೆ ಅವರು ಅದನ್ನು ಭಾರತದ ಭಾಗವೆಂದು ಪರಿಗಣಿಸುವುದಿಲ್ಲ. ನೀವು ಮಣಿಪುರವನ್ನು ವಿಭಜಿಸಿದ್ದೀರಿ. ಮಣಿಪುರವು ಭಾರತದ ಒಂದು ಹೃದಯದ ಧ್ವನಿ. ನೀವು ಆ ಧ್ವನಿಯನ್ನು ಕೊಂದಿದ್ದೀರಿ. ನೀವು ದೇಶದ್ರೋಹಿಗಳು. ನನ್ನ ತಾಯಿ ಇಲ್ಲಿ ಕುಳಿತಿದ್ದಾರೆ. ಇನ್ನೊಬ್ಬರು ತಾಯಿ ಭಾರತ ಮಾತೆ. ನೀವು ಅವಳನ್ನು ಮಣಿಪುರದಲ್ಲಿ ಕೊಂದಿದ್ದೀರಿ. ಅದಕ್ಕಾಗಿಯೇ ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡುವುದಿಲ್ಲ. ನೀವು ಭಾರತ ಮಾತೆಯ ರಕ್ಷಕರಲ್ಲ, ಅವಳ ಹಂತಕರು” ಎಂದು ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಣಿಪುರದಿಂದ ‘ಈ ದಿನ’ ಪ್ರತ್ಯಕ್ಷ ವರದಿ | ಬಿಜೆಪಿ ಆರಂಭಿಸಿರುವ ’ಮೈತೇಯಿ ಗರ್ಭಿಣಿಯರ ಶಿಬಿರ’ದಲ್ಲಿ…

“ನೀವು ಎಲ್ಲೆಡೆ ಸೀಮೆಎಣ್ಣೆ ಎರಚಿದ್ದೀರಿ, ನೀವು ಮಣಿಪುರಕ್ಕೆ ಬೆಂಕಿ ಹಚ್ಚಿದ್ದೀರಿ. ಈಗ ಹರಿಯಾಣದಲ್ಲಿ ಅದೇ ಪ್ರಯತ್ನ ಮಾಡುತ್ತಿದ್ದೀರಿ. ಪ್ರಧಾನಿ ಮೋದಿಯವರು ಭಾರತದ ಜನರ ಮಾತು ಕೇಳದಿದ್ದರೆ, ಅವರು ಯಾರ ಮಾತು ಆಲಿಸುತ್ತಾರೆ?’ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು.

ಮಣಿಪುರದಲ್ಲಿ ಮಗನನ್ನು ಗುಂಡಿನ ದಾಳಿಯಿಂದ ಕಳೆದುಕೊಂಡ ಮಹಿಳೆಯೊಂದಿಗೆ ತಾನು ನಡೆಸಿದ್ದ ಸಂಭಾಷಣೆಯನ್ನು ನೆನಪಿಸಿಕೊಂಡ ರಾಹುಲ್ ಗಾಂಧಿ, ‘ಇಡೀ ರಾತ್ರಿ, ನಾನು ನನ್ನ ಮಗನ ಶವದೊಂದಿಗೆ ಮಲಗಿದ್ದೆ, ನಾನು ಹೆದರಿ ನನ್ನ ಮನೆಯಿಂದ ಹೊರಬಂದೆ’ ಎಂದು ಆ ಮಹಿಳೆ ತನ್ನ ಬಳಿ ಹೇಳಿದ ಕರುಣಾಜನಕ ಕಥೆಯನ್ನು ಸದನದಲ್ಲಿ ವಿವರಿಸಿದರು.

ಪ್ರಧಾನಿ ಉತ್ತರದ ನಂತರ ಅವಿಶ್ವಾನ ನಿರ್ಣಯದ ಮತ

ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ದಲ್ಲಿ ಅವಿಶ್ವಾಸ ನಿರ್ಣಯ ಗೆಲ್ಲುವಷ್ಟು ಮತಗಳಿಲ್ಲ. ಆದರೂ ಅವಿಶ್ವಾಸ ನಿಲುವಳಿ ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಲೋಕಸಭೆಗೆ ಎಳೆದು ತರವುದಕ್ಕಾಗಿಯೇ ನಿರ್ಣಯ ಮಂಡಿಸಲಾಗಿದೆ. ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ನರೇಂದ್ರ ಮೋದಿ ಈವರೆಗೂ ಸಂಸತ್ತಿನಲ್ಲಿ ಹೇಳಿಕೆ ನೀಡಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅವರು ಭಾಷಣ ಮಾಡಲೇಬೇಕಾಗುತ್ತದೆ. ಮೋದಿ ಅವರನ್ನು ಹೇಗಾದರೂ ಮಾಡಿ ಸಂಸತ್ತಿನಲ್ಲಿ ಭಾಷಣ ಮಾಡಿಸಬೇಕೆಂದು ವಿಪಕ್ಷಗಳು ಈ ನಿಲುವಳಿ ಮಂಡಿಸಿವೆ. ಮೋದಿ ಗುರುವಾರ ಸದನದಲ್ಲಿ ಮಾತನಾಡಲಿದ್ದು, ಮಣಿಪುರ ವಿಷಯವನ್ನೂ ಪ್ರಸ್ತಾಪಿಸಲಿದ್ದಾರೆ.

ಇದು 2018ರ ಜು.20ರ ನಂತರ ಲೋಕಸಭೆ ಕಾಣಲಿರುವ ಮೊದಲ ಅವಿಶ್ವಾಸ ನಿಲುವಳಿಯಾಗಿದೆ. ಆಗ ನಿರ್ಣಯ ಮತಕ್ಕೆ ಹಾಕಿದಾಗ ಎನ್‌ಡಿಎಗೆ 325 ಹಾಗೂ ವಿಪಕ್ಷಗಳಿಗೆ ಕೇವಲ 126 ಮತ ಬಿದ್ದಿದ್ದವು.

ಅವಿಶ್ವಾಸ ನಿರ್ಣಯಕ್ಕೆ ಸದನದ ಬಲಾಬಲ

ಲೋಕಸಭೆ ಒಟ್ಟು ಬಲಾಬಲ: 543

ಈಗಿರುವ ಸ್ಥಾನ: 540

ಬಹುಮತಕ್ಕೆ: 271

ಎನ್‌ಡಿಎ: 330

ಇಂಡಿಯಾ ಕೂಟ: 140

ಇತರರು: 60

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...