ಯಾವುದೇ ರಾಜ್ಯದ ಮೇಲೆ ಯಾವ ಭಾಷೆಯನ್ನೂ ಹೇರಿಕೆ ಮಾಡುವುದಿಲ್ಲ: ಕೇಂದ್ರ ಸರ್ಕಾರ

Date:

ಕೇಂದ್ರ ಸರ್ಕಾರ ತ್ರಿಭಾಷಾ ನೀತಿಯ ಮೂಲಕ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ನಿರಂತರವಾಗಿ ದಕ್ಷಿಣ ಭಾರತದ ರಾಜ್ಯಗಳು ಆರೋಪಿಸುತ್ತಿದೆ. ತಮಿಳುನಾಡು ಸರ್ಕಾರವಂತೂ ಕೇಂದ್ರದ ವಿರುದ್ಧವಾಗಿ ಭಾಷಾ ಸಮರವನ್ನು ಘೋಷಿಸಿದೆ. ಈ ನಡುವೆ ಕೇಂದ್ರ ಸರ್ಕಾರವು “ಯಾವುದೇ ರಾಜ್ಯದ ಮೇಲೆ ಯಾವ ಭಾಷೆಯನ್ನೂ ಹೇರಿಕೆ ಮಾಡುವುದಿಲ್ಲ” ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ಹೇಳಿದೆ.

ಈ ಬಗ್ಗೆ ಲಿಖಿತ ಪ್ರತಿಕ್ರಿಯೆ ನೀಡಿದ ಡಾ ಸುಕಾಂತ ಮಜುಮ್ದಾರ್, “ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ಬರುವ ತ್ರಿಭಾಷಾ ಸೂತ್ರವನ್ನು ಸಾಂವಿಧಾನಿಕ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಜಾರಿಗೆ ತರಲಾಗುವುದು. ಯಾವುದೇ ರಾಜ್ಯದ ಮೇಲೆ ಯಾವ ಭಾಷೆಯನ್ನೂ ಹೇರಿಕೆ ಮಾಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಿಂದಿ ದಿವಸ | ಭಾಷಾ ಹೇರಿಕೆ ವಿರುದ್ಧ ಇಂದು ಪ್ರತಿಭಟನೆ: ‘ಕರಾಳ ದಿನ’ ಆಚರಣೆಗೆ ಕರವೇ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಕ್ಕಳು ಕಲಿಯಬೇಕಾದ ಮೂರು ಭಾಷೆಗಳು ರಾಜ್ಯದ, ಆ ಪ್ರದೇಶಕ್ಕೆ ತಕ್ಕುದಾದ ಆಯ್ಕೆಯಾಗಿರುತ್ತದೆ. ಖಂಡಿತವಾಗಿಯೂ ವಿದ್ಯಾರ್ಥಿಗಳೇ ಅದನ್ನು ಆಯ್ಕೆ ಮಾಡಬಹುದು. ಮೂರು ಭಾಷೆಯ ಪೈಕಿ ಎರಡು ಭಾಷೆಯಾದರೂ ಭಾರತದ್ದಾಗಿರುತ್ತದೆ” ಎಂದು ಸಿಪಿಐಎಂ ನಾಯಕ ಡಾ ಜಾನ್ ಬ್ರಿಟ್ಟಾಸ್ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಕೇಂದ್ರ ಸರ್ಕಾರ ಹೇಳಿದೆ.

ಕೇಂದ್ರ ಸರ್ಕಾರವು ವಿದ್ಯಾಭ್ಯಾಸ, ರಾಜಕೀಯ ಮೊದಲಾದ ಕಡೆಗಳಲ್ಲಿ ಮಾಡುತ್ತಿರುವ ಭಾಷಾ ಹೇರಿಕೆಯನ್ನು ದಕ್ಷಿಣ ಭಾರತದ ರಾಜ್ಯಗಳು ಅದರಲ್ಲೂ ಮುಖ್ಯವಾಗಿ ತಮಿಳುನಾಡು ಖಂಡಿಸುತ್ತಾ ಬಂದಿದೆ. ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಕಲಿಸಲಾಗುತ್ತಿದೆ. ಆದರೆ ಉತ್ತರ ಭಾರತದ ರಾಜ್ಯಗಳಲ್ಲಿ ಮಾತ್ರ ಈ ತ್ರಿಭಾಷಾ ಸೂತ್ರ ನಿಯಮ ಪ್ರಕಾರವಾಗಿ ಜಾರಿಯಾಗಿಲ್ಲ. ಉತ್ತರ ಭಾರತದಲ್ಲಿ ಬಹುತೇಕರು ಸಂಸ್ಕೃತವನ್ನೇ ಮೂರನೇ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಉತ್ತರ ಭಾರತದ ಹಿಂದಿಯನ್ನು ದಕ್ಷಿಣ ಭಾರತದಲ್ಲಿ ಕಲಿಸುವಂತೆ ದಕ್ಷಿಣ ಭಾರತದ ಭಾಷೆಗಳನ್ನು ಉತ್ತರ ಭಾರತದಲ್ಲಿ ಪಠ್ಯವನ್ನಾಗಿಸಿಲ್ಲ.

ತ್ರಿಭಾಷಾ ಸೂತ್ರವನ್ನು ನಿಯಮ ಪ್ರಕಾರವಾಗಿ ಜಾರಿಗೆ ತರದಿರುವುದೇ ಹಿಂದಿ ಹೇರಿಕೆಯ ಆರೋಪ ಹುಟ್ಟಲು ಕಾರಣವಾಗದೆ. ಹಾಗೆಯೇ ದಕ್ಷಿಣ ಭಾರತದ ಸಚಿವರುಗಳಿಗೆ, ಶಾಸಕರುಗಳಿಗೆ ಇಂಗ್ಲೀಷ್ ಬದಲಾಗಿ ಹಿಂದಿಯಲ್ಲಿ ಸುತ್ತೋಲೆ ಕಳುಹಿಸುವುದು ಭಾಷಾ ಹೇರಿಕೆಯನ್ನು ಸಾಬೀತುಪಡಿಸುತ್ತದೆ. ಒಂದು ದೇಶ, ಒಂದು ಚುನಾವಣೆ ಎಂಬಂತೆ ದೇಶದ ವೈವಿಧ್ಯತೆಯನ್ನು ಬದಿಗೊತ್ತಿ ಒಂದು ಭಾಷೆ, ಒಂದು ಧರ್ಮ, ಓರ್ವನೇ ನಾಯಕ ಎಂಬ ಸರ್ವಾಧಿಕಾರದತ್ತ ದೇಶವನ್ನು ಕೊಂಡೊಯ್ಯುವುದು ಬಿಜೆಪಿ ಸರ್ಕಾರದ ಹುನ್ನಾರ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...