ಯಾವ ಸಚಿವರೂ ನಮ್ಮ ಬಳಿ ಕಮಿಷನ್ ಕೇಳಿಲ್ಲ : ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಸ್ಪಷ್ಟನೆ

Date:

  • ನಮ್ಮ ಕಾಮಗಾರಿಗಳಿಗೆ ‘ಹಣದ ಭಾಗ್ಯ’ ಕರುಣಿಸಿ ಎಂದು ಮನವಿ ಮಾಡಿದ ಕೆಂಪಣ್ಣ
  • ಆಗಸ್ಟ್ 31ರೊಳಗೆ ಸರ್ಕಾರ ಹಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಗಡುವು

‘ಯಾವ ಸಚಿವರೂ ನಮ್ಮ ಬಳಿ ಕಮಿಷನ್ ಕೇಳಿಲ್ಲ. ನಮಗೆ ರಾಜ್ಯಾದ್ಯಂತ ಮಾಹಿತಿ ಬಂದಿದೆ‌. ಯಾವುದೇ ಗುತ್ತಿಗೆದಾರರು ಬಂದು ನನ್ನ ಬಳಿ ದೂರು ಹೇಳಿಲ್ಲ’ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ನಮಗೆ ರಾಜ್ಯಾದ್ಯಂತ ಮಾಹಿತಿ ಬಂದಿದೆ‌. ಯಾವುದೇ ಗುತ್ತಿಗೆದಾರರು ಬಂದು ನನ್ನ ಬಳಿ ದೂರು ಹೇಳಿಲ್ಲ. ನಮ್ಮ ಪರಿಸ್ಥಿತಿ ಸದ್ಯ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಸರ್ಕಾರ ಎಲ್ಲರಿಗೂ ಭಾಗ್ಯಗಳನ್ನು ಕೊಡುತ್ತಿದೆ. ನಾವು ಈಗಾಗಲೇ ಮುಗಿಸಿರುವ ಕಾಮಗಾರಿಗಳಿಗೆ ‘ಹಣದ ಭಾಗ್ಯ’ ಕರುಣಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

kempanna 1

ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ. ಏಳು ತಿಂಗಳಿಂದ ಹಣ ಬಾಕಿ ಇದೆ. ರಾಜ್ಯದ ಗುತ್ತಿಗೆದಾರರ 25 ಸಾವಿರ ಕೋಟಿ ಬಿಲ್ ಬಾಕಿ ಇದೆ. ಇದರಲ್ಲಿ ಸ್ವಲ್ಪ ಹಣ ಬಿಡುಗಡೆಯಾಗಿದೆ. ನೂರು ಕೋಟಿ ಸಾಲಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯನಿರತ ಗುತ್ತಿಗೆದಾರರ ಸಂಘದವರು 15% ಕಮಿಷನ್ ಆರೋಪ ಮಾಡ್ತಿದ್ದಾರೆ. ನಾವು ಗುತ್ತಿಗೆದಾರರ ಸಂಘದವರು ಯಾವುದೇ ಆರೋಪ ಮಾಡ್ತಿಲ್ಲ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಯಾವುದೇ ಕಾಮಗಾರಿ ನಡೆದಿಲ್ಲ. ಹೀಗಿರುವಾಗ ಕಮಿಷನ್ ಕೊಡುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಕೆಂಪಣ್ಣ 2

ಆಗಸ್ಟ್ 31ರೊಳಗೆ ಸರ್ಕಾರ ಹಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇವೆ. ಆತ್ಮಹತ್ಯೆ ಮಾತ್ರ ದಾರಿ ಅನ್ನುವ ಪರಿಸ್ಥಿತಿ ಬಂದಿದೆ. ಸಿದ್ದರಾಮಯ್ಯ ಅವರಿಗೆ ನಿನ್ನೆ ಕೂಡ ಪತ್ರ ಬರೆದಿದ್ದೇನೆ. ಎಲ್ಲರನ್ನೂ ಕರೆದು ಸಭೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕೆಲ ಬಿಬಿಎಂಪಿ ಗುತ್ತಿಗೆದಾರರು ಬಿಜೆಪಿ ನಾಯಕರ ಬಳಿ ಯಾಕೆ ಹೋದರೋ ಗೊತ್ತಿಲ್ಲ, ಇದು ರಾಜಕೀಯ ಪ್ರೇರಿತವಾಗಿರಬಹುದು ಎಂದು ಕೆಂಪಣ್ಣ ಹೇಳಿದರು.

ನಾನು ಯಾವುದೇ ರಾಜಕೀಯ ಪಕ್ಷದ ಏಜೆಂಟ್ ಅಲ್ಲ, ನಾನು ಗುತ್ತಿಗೆದಾರರ ಏಜೆಂಟ್ ಎಂದು ಹೇಳಿದ ಕೆಂಪಣ್ಣ, ‘ನಾವು 40% ಭ್ರಷ್ಟಾಚಾರ ನಡೆಯುತ್ತಿದೆ ಎಂದು ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡಿದ್ದೆವು. ನಮ್ಮ ಬಳಿ ದಾಖಲೆ ಇದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಭೇಟಿಯಾಗಲು ಸಾಕಷ್ಟು ಪ್ರಯತ್ನ ಮಾಡಿದೆವು. ಆದರೆ ಅವರು ನಮಗೆ ಭೇಟಿಗೆ ಅವಕಾಶ ಕೊಡಲಿಲ್ಲ. ಕರೆದು ಮಾತನಾಡಿಸುವ ಸೌಜನ್ಯ ತೋರಲಿಲ್ಲ. ಅವರಿಗೆ ಬೇಕಾದವರಿಗೆ ಮಾತ್ರ ಹಣ ಬಿಡುಗಡೆ ಮಾಡಿದ್ದಾರೆ. ಆದರೆ ನಮಗೆ ಈಗಲೂ ಅವರ ಮೇಲೆ ಗೌರವ ಇದೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...