ಕತ್ತು ಕೊಯ್ದವರಿಂದ ನೀತಿ ಪಾಠ ಕಲಿಯುವ ಅಗತ್ಯ ಇಲ್ಲ: ನಾರಾಯಣಗೌಡ ವಿರುದ್ಧ ಎಚ್‌ಡಿಕೆ ಕಿಡಿ

Date:

  • ಸಚಿವ ನಾರಾಯಣಗೌಡ ವಿರುದ್ಧ ಎಚ್‌ಡಿಕೆ ವಾಗ್ದಾಳಿ
  • ಕ್ಷೇತ್ರದ ಜನರೇ ನಿಮಗೆ ಪಾಠ ಕಲಿಸುತ್ತಾರೆಂದು ಕಿಡಿ

‘ಕತ್ತು ಕೊಯ್ದವರಿಂದ ನೀತಿ ಪಾಠ ಕಲಿಯುವ ಅಗತ್ಯ ಇಲ್ಲ’ ಎಂದು ಜೆಡಿಎಸ್ ಮುಖುಂಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (ಎಚ್‌ಡಿಕೆ) ಕಿಡಿ ಕಾರಿದರು.

ದೇವೇಗೌಡರ ಕುಟುಂಬದ ವಿರುದ್ಧ ಆರೋಪ ಮಾಡಿದ ಸಚಿವ ನಾರಾಯಣಗೌಡ ವಿರುದ್ಧ ವಾಗ್ದಾಳಿ ನಡೆಸಿದ ಎಚ್‌ಡಿಕೆ ನಾರಾಯಣಗೌಡರಿಗೆ ಏಕವಚನದಲ್ಲಿ ವಾಕ್‌ಪ್ರಹಾರ ನಡೆಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಟಿಕೆಟ್ ಕೊಡಿಸಿದ ನನ್ನನ್ನೇ ದೂರ ತಳ್ಳಿ ಕುತ್ತಿಗೆ ಕೊಯ್ದವನು ನೀನು. ನಿನಗೆ ನಮ್ಮ ಕುಟುಂಬದ ಬಗ್ಗೆ ಮಾತನಾಡಲು ನೈತಿಕತೆ ಏನಿದೆ. ನಿನ್ನಂತಹ ವಂಚಕನಿಂದ ನಾನು ಕಲಿಯುವುದು ಏನೂ ಇಲ್ಲ’ ಎಂದು ಆಕ್ರೋಶ ಹೊರ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಇವರನ್ನು ಬೆಳೆಸುವುದಕ್ಕೆ ನಾನು ಪಕ್ಷ ಹಾಳುಮಾಡಿಕೊಳ್ಳಬೇಕಾ? ಇವರೇನು ಮಹಾನ್ ಕೆಲಸ ಮಾಡಿದ್ದಾರಾ..? ಅಂದು ಕೃಷ್ಣ ವಿರುದ್ಧ ಅಭ್ಯರ್ಥಿ ಆಗಬೇಕು ಅಂತಾ ಬಂದಾಗ ಪರಿಜ್ಞಾನ ಇರಲಿಲ್ವಾ’ ಎಂದು ಪ್ರಶ್ನಿಸಿದರು.

‘ಕಳೆದ ಬಾರಿ ನಿನ್ನ ನಡವಳಿಕೆ ನೋಡಿ ಟಿಕೆಟ್ ನೀಡಲಿಲ್ಲ. ಎರಡನೇ ಬಾರಿಗೆ ಟಿಕೆಟ್ ಕೊಡಬಾರದು ಅಂತ ಇದ್ದರು. ಆದರೆ ನಿನಗೆ ಟಿಕೆಟ್ ಕೊಟ್ಟವರು ಯಾರು? ಟಿಕೆಟ್ ಕೊಡಿಸಿದವನು ನಾನು. ಕುತ್ತಿಗೆ ಕುಯ್ದು ಹೋದವನು ನೀನು. ನಿನ್ನಿಂದ ಪಾಠ ಕಲಿಯಬೇಕಿಲ್ಲ. ನಿನ್ನ ಕಾಲ ಮುಗಿದಿದೆ. ಈ ಬಾರಿಯ ಚುನಾವಣೆಯಲ್ಲಿ ಕೆ ಆರ್ ಪೇಟೆ ಜನ ನಿನಗೆ ಪಾಠ ಕಲಿಸುತ್ತಾರೆ’ ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ?:ಹೈಕಮಾಂಡ್‌ ನಿರ್ಧರಿಸಿದರೆ ಕೋಲಾರದಲ್ಲೂ ಸ್ಪರ್ಧೆ: ಸಿದ್ದರಾಮಯ್ಯ

‘ಜೆಡಿಎಸ್ ಕಾರ್ಯಕರ್ತರಿಗೆ ಅಧಿಕಾರಿಗಳಿಂದ ಕಿರುಕುಳವಾಗುತ್ತಿರುವ ಆರೋಪ ಬಂದಿದೆ. ಈ ವಿಚಾರದಲ್ಲಿ ಪೊಲೀಸರು ಶಾಸಕರ ಜೊತೆ ಶಾಮೀಲಾಗಿದ್ದಾರೆ. ನಮ್ಮ ಪಕ್ಷಕ್ಕೆ ಬರುವವರಿಗೆ ಧಮಕಿ ಹಾಕಲಾಗುತ್ತಿದೆ. ಇವುಗಳೆಲ್ಲ ಸರಿಯಾದ ಕ್ರಮವಲ್ಲ’ ಎಂದು ಕುಮಾರಸ್ವಾಮಿ ಕೋಪ ವ್ಯಕ್ತಪಡಿಸಿದರು.

ಇದೇ ವೇಳೆ ಪೊಲೀಸರಿಗೆ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಎಚ್‌ಡಿಕೆ, ‘ಇನ್ನು ಒಂದು ತಿಂಗಳಷ್ಟೇ ನಿಮ್ಮ ಸಮಯ. ಸರ್ಕಾರಿ ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಕೆಲಸ ಮಾಡಿ’ ಎಂದರು.

ಜೊತೆಗೆ ಖಾಕಿ ಪಡೆಗೆ ಎಚ್ಚರಿಕೆ ನೀಡಿದ ಅವರು ‘ಶಾಸಕರಿಗೆ ಅಡಿಯಾಳಾಗಿ ಕೆಲಸ ಮಾಡಿದರೆ ಪ್ರಾಯಶ್ಚಿತ್ತವಾಗುತ್ತದೆ. ಜೂನ್ ನಂತರ ಎಚ್ಚರ. ಈಗ ಮಾತು ಮೀರಿ ನಿಂತರೆ ಪ್ರಾಯಶ್ಚಿತ್ತವಾಗಲಿದೆ’ ಎಂದರು.

ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ‘ದೇವೇಗೌಡರ ಕುಟುಂಬ ಯಾರನ್ನೂ ಬೆಳೆಯಲು ಬಿಟ್ಟಿಲ್ಲ. ಜೆಡಿಎಸ್‌ನಲ್ಲಿ ಒಬ್ಬರನ್ನ ಬೆಳೆಸಲು ಇನ್ನೊಬ್ಬರನ್ನು ತುಳಿಯುತ್ತಾರೆ’ ಎಂದು ಸಚಿವ ನಾರಾಯಣಗೌಡ ಟೀಕಿಸಿದ್ದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...