ಕಾಂತರಾಜ ವರದಿಗೆ ವಿರೋಧವಿಲ್ಲ, ಸರಿಪಡಿಸಲಷ್ಟೇ ಕೋರಿಕೆ: ಎಂ ಬಿ ಪಾಟೀಲ

Date:

ಕಾಂತರಾಜ ವರದಿಗೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಸ್ವಲ್ಪಮಟ್ಟಿಗೆ ಸರಿಪಡಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಕೇಳಿಕೊಂಡಿದ್ದೇವೆ ಎಂದು ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದರು.

ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವೊಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಕಾಂತರಾಜ ವರದಿ ಸ್ವೀಕರಿಸಲು ಆಗ್ರಹಿಸಿರುವ ಬಗ್ಗೆ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದರು.

“ಈಗಿನ ನಿಯಮಗಳ ಪ್ರಕಾರ, ಜಾತಿ ನಮೂದಿಸುವಾಗ ಲಿಂಗಾಯತ ಉಪಪಂಗಡಗಳ ಹೆಸರನ್ನು ನಮೂದಿಸಿದರೆ ಸಮುದಾಯದ ಉಪಪಂಗಡಗಳಿಗೆ ಸೇರಿದವರಿಗೆ ಮೀಸಲಾತಿ ಸಿಗುವುದಿಲ್ಲ. ಆದ್ದರಿಂದ, ಸಮುದಾಯಕ್ಕೆ ಸೇರಿದವರು ಜಾತಿ ನಮೂದಿಸುವಾಗ ಲಿಂಗಾಯತ ಉಪಪಂಗಡದ ಹೆಸರು ಹಾಕುತ್ತಿಲ್ಲ. ಇದನ್ನು ಸರಿಪಡಿಸಿದರೆ, ಜಾತಿ ನಮೂದಿಸುವಾಗ ಲಿಂಗಾಯತ ಉಪಪಂಗಡಗಳ ಹೆಸರು ನಮೂದಿಸಲು ಸಾಧ್ಯವಾಗುತ್ತದೆ. ಹೀಗಾದಾಗ, ಸಹಜವಾಗಿಯೇ ಲಿಂಗಾಯತ ಸಮುದಾಯದ ಜನಸಂಖ್ಯೆ ಶೇ. 22ರವರೆಗೆ ಹೆಚ್ಚಾಗುವ ಸಂಭವವಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಸವಣ್ಣರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಲು ಸಿಎಂಗೆ ಸ್ವಾಮೀಜಿಗಳ, ಚಿಂತಕರ ಒತ್ತಾಯ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು “ಬೆಳಗಾವಿ ಮುಂಚೆ ಮಹಾರಾಷ್ಟ್ರಕ್ಕೆ ಸೇರಿತ್ತು” ಎಂಬ ಹೇಳಿಕೆ ನೀಡಿರುವುದರ ಬಗ್ಗೆ ಕೇಳಿದಾಗ, “ಹೌದು, ಅವರು ಹೇಳಿರುವುದು ಐತಿಹಾಸಿಕ ಸತ್ಯ. ಅದು ಎಲ್ಲರಿಗೂ ಗೊತ್ತಿರುವಂತದ್ದೇ. ಅದನ್ನು ಹೇಳುವುದು ತಪ್ಪೇನೂ ಅಲ್ಲ. ಆದರೆ, ಮುಂಚೆ ಮುಂಬೈ, ಹೈದರಾಬಾದ್, ಮದರಾಸ್ ಪ್ರಾಂತ್ಯಕ್ಕೆ ಒಳಪಟ್ಟ ಪ್ರದೇಶಗಳು ಪುನರ್ ವಿಂಗಡಣೆ ನಂತರ ಸಮಗ್ರ ಕರ್ನಾಟಕದ ಭಾಗವಾಗಿವೆ. ಅಂತಹ ಎಲ್ಲಾ ಪ್ರದೇಶಗಳು ಈಗ ಸಮಗ್ರ ಕರ್ನಾಟಕದಲ್ಲೇ ಇವೆ” ಎಂದರು.

ಸರ್ಕಾರದಲ್ಲಿ ಇನ್ನೂ ಮೂವರು ಡಿಸಿಎಂ ಗಳ ನೇಮಕಾತಿ ಬಗ್ಗೆ ಕೇಳಿದಾಗ, “ಇದಕ್ಕೆ ಸಂಬಂಧಿಸಿದಂತೆ ನನ್ನ ನಿಲುವಿನಲ್ಲಿ ಯಾವ ಬದಲಾವಣೆಯೂ ಇಲ್ಲ. ಈ ಬಗ್ಗೆ ಹೈಕಮಾಂಡ್ ಅಭಿಪ್ರಾಯ ಕೇಳಿದರೆ, ಅದನ್ನು ನಾಯಕರ ಮುಂದೆ ನಾಲ್ಕು ಗೋಡೆಗಳ ಮಧ್ಯೆ ತಿಳಿಸುತ್ತೇನೆ. ಅದನ್ನು ಸಾರ್ವಜನಿಕವಾಗಿ ಚರ್ಚಿಸುವುದಿಲ್ಲ” ಎಂದು ಪುನರುಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...