ರಾಜೀನಾಮೆ ಸಲ್ಲಿಸಿಲ್ಲ, ಹಿತೈಷಿಗಳು ದುಡುಕಿನ ನಿರ್ಧಾರ ಬೇಡ ಎನ್ನುತ್ತಿದ್ದಾರೆ: ಸಭಾಪತಿ ಬಸವರಾಜ ಹೊರಟ್ಟಿ

Date:

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ನಿರ್ಧರಿಸಿದ್ದು ನಿಜ. ಆದರೆ ಇದೀಗ ಬಹಳ ಜನ ಹಿತೈಷಿಗಳು ನನಗೆ ಕಾಲ್ ಮಾಡಿ ಬೇಡ ಅನ್ನುತ್ತಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ.

ರಾಜೀನಾಮೆ ಪತ್ರ ವೈರಲ್ ಆಗುತ್ತಿರುವ ವಿಚಾರ ಕುರಿತು ಹುಬ್ಬಳ್ಳಿಯಲ್ಲಿ ಸೋಮವಾರ ಮಾತನಾಡಿದ ಅವರು, “ಸಹಿ ಮಾಡಿದ ಪತ್ರ ಇನ್ನೂ ಲಾಕರ್‌ನಲ್ಲಿದೆ. ವೈರಲ್ ಆಗಿರುವುದು ಸಹಿ ಮಾಡದ ಪತ್ರ. ನನ್ನ ಪಿಎ ಆ ಪತ್ರವನ್ನು ವೈರಲ್ ಮಾಡಿದ್ದಾರೆ. ದಿನಾಂಕ 21 ಎಂದು ಹಾಕಿದ್ದೆ. ಈ ಪತ್ರ ಬಹಳ ಜನರ ಹತ್ತಿರ ಹೋಗಿದೆ. ಸಚಿವರು, ಪರಿಷತ್ ಸದಸ್ಯರು ಕಾಲ್ ಮಾಡುತ್ತಿದ್ದಾರೆ. ದುಡುಕಿನ ನಿರ್ಧಾರ ಬೇಡ ಎನ್ನುತ್ತಿದ್ದಾರೆ. ಕೆಲವು ಸಲ ಹಿತೈಷಿಗಳ ಮಾತು ಕೇಳಬೇಕಾಗುತ್ತದೆ” ಎಂದರು.

“ರಾಜೀನಾಮೆ ಕುರಿತು ವಿಚಾರ ಮಾಡುತ್ತೇನೆ. ಮಾನಸಿಕವಾಗಿ ಬೇಸರವಾಗಿದ್ದು ನಿಜ. ಹೀಗಾಗಿ ನಾನು ರಾಜೀನಾಮೆ ಕೊಡುವ ನಿರ್ಧಾರ ಮಾಡಿದ್ದೆ. ಕೆಲವರ ನಡುವಳಿಕೆ ನನ್ನ ಮನಸಿಗೆ ಸಮಾಧಾನವಾಗಿಲ್ಲ. ಕಳೆದ ಮೂರು ವರ್ಷಗಳಿಂದ ಅಸಮಾಧಾನವಾಗಿದೆ. ರಾಜ್ಯದ ಎಲ್ಲಾ ಕಡೆಯಿಂದ ಕರೆ ಬಂದಿದೆ, ಮಾನಸಿಕ ನೆಮ್ಮದಿ ಹಾಳಗಿದೆ. ನಾಳೆ ಒಂದು ದಿನ ಕುಳಿತು ವಿಚಾರ ಮಾಡುತ್ತೇನೆ. ಆತ್ಮೀಯರ ಮಾತು ಕೇಳಿಕೊಂಡು ನಿರ್ಧಾರ ಮಾಡುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೆ ಶಾಸನಸಭೆಯಿಂದ ಅಪಮಾನ; ನೈತಿಕ ಹೊಣೆ ಯಾರದ್ದು?

“ನಾನು ಸಭಾಪತಿ ಹುದ್ದೆಗೆ ರಾಜೀನಾಮೆ ಕೊಡುತ್ತೇನೆ. ಸಾಕಾಗಿದೆ, ಇನ್ನೂ ಸ್ವಲ್ಪ ಟೆಕ್ನಿಕಲ್ ಸಮಸ್ಯೆ ಇದೆ. ಜನರಿಗೆ ಮೋಸ ಮಾಡೋ ಟ್ರೆಂಡ್ ಬಂದಿದೆ. ಇದೀಗ ವಿಧಾನ ಮಂಡಲಕ್ಕೆ ಬಂದಿದೆ. ರಾಜಕಾರಣ ಬಹಳ ಕಲುಷಿತ ಆಗಿದೆ. ಕಾಲ ಕೆಟ್ಟಿದೆ, ಸದನದ ಗೌರವ ಹೋಗಿ ಬಹಳ ದಿನ ಆಗಿದೆ” ಎಂದು ಆರೋಪಿಸಿ ರಾಜೀನಾಮೆ ಮಾತುಗಳನ್ನು ಹೊರಟ್ಟಿ ಹೊರಹಾಕಿದ್ದರು.

“ಚುನಾವಣೆಯಲ್ಲಿ ಸೋಲಿಸೋಕೆ ಆಗಿದಿದ್ರೆ ಈ ತರಹ ಟಾರ್ಗೆಟ್ ಮಾಡೋದು ಸರಿಯಲ್ಲ. ಇದೆಲ್ಲ ದುರ್ದೈವ. ಇತ್ತಿಚೆಗೆ ಸದನದಲ್ಲಿ ನಡೆದ ಬೆಳವಣಿಗೆ ನನ್ನ ಮನಸಿಗೆ ಬೇಸರ ತರಿಸಿದೆ. ಈ ಸಭಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂಬ ಭಾವನೆ ಬಂದಿದೆ. ಸದನದಲ್ಲಿ ನಡೆದ ಬೆಳವಣಿಗೆ ನಿಯಂತ್ರಿಸುವಲ್ಲಿ ನಾನು ವಿಫಲವಾಗಿದ್ದೇನೆ” ಎಂದು ಬೇಸರ ವ್ಯಕ್ತಪಡಿಸಿದ್ದರು

ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ರಾಜೀನಾಮೆ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಫೇಕ್ ರಾಜೀನಾಮೆ ಪತ್ರ ವೈರಲ್ ಆಗಿತ್ತು. ಅದು ನಕಲಿ ಪತ್ರ ಎಂದು ಹೊರಟ್ಟಿ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...