ಜಾಹೀರಾತಿನಲ್ಲಿ ಮತ ಯಾಚನೆ ಮಾಡಿಲ್ಲ, ನೀತಿ ಸಂಹಿತೆ ಉಲ್ಲಂಘನೆ ಆಗಿಲ್ಲ: ಡಿ ಕೆ ಶಿವಕುಮಾರ್

Date:

  • ಇಂತಹ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಜಾಹೀರಾತಿನಲ್ಲಿ ತಿಳಿಸಿಲ್ಲ
  • ಚುನಾವಣಾ ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತೇವೆ: ಡಿಕೆಶಿ

ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ಇದು ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್  ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ತೆಲಂಗಾಣದ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಹೀರಾತಿನ ವಿಚಾರವಾಗಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

“ಜಾಹೀರಾತಿನಲ್ಲಿ ಸರ್ಕಾರದ ಕೆಲಸದ ಬಗ್ಗೆ ಮಾಹಿತಿ ಇದೆ. ಕಾಂಗ್ರೆಸ್ ಪಕ್ಷಕ್ಕೆ ಅಥವಾ ಇಂತಹ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಜಾಹೀರಾತಿನಲ್ಲಿ ತಿಳಿಸಿಲ್ಲ. ಇದು ಉಲ್ಲಂಘನೆ ಹೇಗೆ ಆಗುತ್ತದೆ? ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಲ್ಲ ಎಂದು ಅವರು ಅಲ್ಲಿ ಪ್ರಚಾರ ಮಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಿಗಮ ಮಂಡಳಿ ನೇಮಕಾತಿಯಲ್ಲಿ ಯಾರ ಅಭಿಪ್ರಾಯ ಪಡೆದಿಲ್ಲ: ಸಿದ್ದರಾಮಯ್ಯ

“ನಾವು ಪತ್ರಿಕೆ ಹಾಗೂ ಮ್ಯಾಗಜಿನ್ ಗಳಲ್ಲಿ ನೀಡುವ ಜಾಹೀರಾತು ಕೆಲವೊಮ್ಮೆ ತೆಲಂಗಾಣ, ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಗೂ ಹೋಗುತ್ತದೆ. ನಾವು ಮತ ಯಾಚನೆ ಮಾಡಿದ್ದರೆ ಆಗ ನಿಯಮ ಉಲ್ಲಂಘನೆ ಆಗುತ್ತಿತ್ತು. ಚುನಾವಣಾ ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತೇವೆ” ಎಂದು ತಿಳಿಸಿದರು.

ನಿಗಮ ಮಂಡಳಿ ನೇಮಕ ಸಭೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಈಗಾಗಲೇ ಎರಡು ಮೂರು ಸುತ್ತಿನ ಸಭೆಗಳು ನಡೆದಿವೆ. ಇಂದು ಕೂಡ ಸಭೆ ಮಾಡಿ ಪಟ್ಟಿಯನ್ನು ದೆಹಲಿಗೆ ರವಾನಿಸುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...