ಮಥುರಾ ಈದ್ಗಾ ಮಸೀದಿಯಲ್ಲಿ ಸದ್ಯಕ್ಕೆ ಸರ್ವೇ ಬೇಡ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

Date:

ಉತ್ತರ ಪ್ರದೇಶದ ಮಥುರಾದಲ್ಲಿರುವ ಶಾಹಿ ಈದ್ಗಾ ಮಸೀದಿಯಲ್ಲಿ ಸದ್ಯಕ್ಕೆ ಸರ್ವೇ ಬೇಡ ಎಂದಿರುವ ಸುಪ್ರೀಂ ಕೋರ್ಟ್‌, ಮಸೀದಿಯನ್ನು ಪರಿಶೀಲಿಸಲು ಆಯುಕ್ತರ ನೇಮಿಸುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಆ ಮೂಲಕ ಬಲಪಂಥೀಯ ಸಂಘಟನೆಗಳ ಹೋರಾಟಕ್ಕೆ ಹಿನ್ನಡೆಯುಂಟಾಗಿದೆ.

ಉತ್ತರ ಪ್ರದೇಶದ ಮಥುರಾದಲ್ಲಿರುವ 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಕಮಿಷನರ್ ಓರ್ವರನ್ನು ನೇಮಿಸುವಂತೆ ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠ, ಡಿಸೆಂಬರ್ 14ರಂದು ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ನಡೆಸಿದ ರೀತಿಯಲ್ಲಿಯೇ ಹೈಕೋರ್ಟ್, ಕಳೆದ ತಿಂಗಳು ನ್ಯಾಯಾಲಯ ನೇಮಿಸಿದ ಮತ್ತು ಮೇಲ್ವಿಚಾರಣೆಯ ವಕೀಲ ಕಮಿಷನರ್ ಸಮೀಕ್ಷೆಗೆ ತನ್ನ ಒಪ್ಪಿಗೆ ನೀಡಿತ್ತು.

ಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಹೇಳಿಕೊಂಡು, ಸಮೀಕ್ಷೆಗೆ ಆಗ್ರಹಿಸಿ ಒತ್ತಾಯಿಸಿದ್ದವು. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸ್ಥಳೀಯ ನ್ಯಾಯಾಲಯವು ಈ ಬೇಡಿಕೆಯನ್ನು ಅಂಗೀಕರಿಸಿತ್ತು. ಆದರೆ ಮಸೀದಿಯ ಕಡೆಯವರು ಹೈಕೋರ್ಟ್‌ನಲ್ಲಿ ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದರು.

ವಿವಾದಿತ 13.37 ಎಕರೆ ಜಮೀನಿನ ಸಂಪೂರ್ಣ ಮಾಲೀಕತ್ವಕ್ಕೆ ಆಗ್ರಹಿಸಿ ಹಿಂದೂ ಸಂಘಟನೆಯು ಮಥುರಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಶತಮಾನಗಳಷ್ಟು ಹಳೆಯದಾದ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನವನ್ನು ಕೆಡವಿ ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದರು. ಇದು ಮೊಘಲ್ ಚಕ್ರವರ್ತಿ ಔರಂಗಜೇಬನ ಕಾಲದಲ್ಲಿ ನಡೆದಿದ್ದ ಘಟನೆ. ಆತನ ಆದೇಶದ ಮೂಲಕ ಕೆಡವಲಾಗಿತ್ತು ಎಂದು ಅವರು ಆರೋಪಿಸಿದ್ದರು.

ಅರ್ಜಿದಾರರು ಪುರಾವೆಯಾಗಿ, ಮಸೀದಿಯ ಕೆಲವು ಗೋಡೆಗಳ ಮೇಲೆ ಕಮಲದ ಕೆತ್ತನೆಗಳ ಅಸ್ತಿತ್ವವನ್ನು ಪ್ರತಿಪಾದಿಸಿದ್ದರು. ಅಲ್ಲದೇ, ಹಿಂದೂ ಪುರಾಣಗಳಲ್ಲಿ ಹಾವಿನ ದೇವತೆಯಾದ ‘ಶೇಷನಾಗ್’ ಅನ್ನು ಹೋಲುವ ಆಕಾರಗಳು ದೇವಾಲಯದ ಮೇಲೆ ಮಸೀದಿಯನ್ನು ನಿರ್ಮಿಸಿರುವುದನ್ನು ತೋರಿಸುತ್ತದೆ ಎಂದು ವಾದಿಸಿದ್ದರು.

ಇದನ್ನು ಓದಿದ್ದೀರಾ? ಇಂಡಿಗೋ ಘಟನೆ | ವಿಮಾನ ಪ್ರಯಾಣಿಕರ ಅಶಿಸ್ತಿನ ವರ್ತನೆ ಸಹಿಸಲ್ಲ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದ ಮಸೀದಿ ಆಡಳಿತ ಮಂಡಳಿ, 1991 ರ ಪೂಜಾ ಸ್ಥಳಗಳ ಕಾಯಿದೆಯನ್ನು ಉಲ್ಲೇಖಿಸಿ ಅರ್ಜಿಯನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದರು. ಆದರೆ ಅಲಹಾಬಾದ್ ಹೈಕೋರ್ಟ್, ಕಳೆದ ಡಿಸೆಂಬರ್ 14ರಂದು ಆದೇಶ ಹೊರಡಿಸಿ, ಮಸೀದಿಯನ್ನು ಪರಿಶೀಲಿಸಲು ಆಯುಕ್ತರ ನೇಮಿಸುವಂತೆ ತಿಳಿಸಿತ್ತು. ಆ ಆದೇಶಕ್ಕೆ ಈಗ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...