ಕೆಲಸವಿಲ್ಲ, ಸಾಲವಿದೆ: ಪ್ರಧಾನಿ ಮೋದಿಯವರಿಗೆ ಚಹಾ ಆತಿಥ್ಯ ನೀಡಿದ್ದ ಅಯೋಧ್ಯೆಯ ದಲಿತ ಮಹಿಳೆ ಅಳಲು

Date:

“ನಮಗೆ ಇನ್ನೂ ಸ್ವಂತ ಶೌಚಾಲಯವಿಲ್ಲ, ಪ್ರಧಾನಿ ನರೇಂದ್ರ ಮೋದಿಯವರು ಮನೆಗೆ ಬಂದು ಹೋದ ಬಳಿಕ ಮನೆಗೆ ಬರುವವರ ಸಂಖ್ಯೆ ಕೂಡ ಜಾಸ್ತಿಯಾಗಿದೆ. ಪತಿಗೆ ಕೂಲಿ ಕೆಲಸಕ್ಕೂ ಹೋಗಲಾಗುತ್ತಿಲ್ಲ. ಇದರಿಂದಾಗಿ ಸಾಲದಲ್ಲಿ ಮುಳುಗಿದ್ದೇವೆ”

ಹೀಗಂತ ತಮ್ಮ ಕಷ್ಟಗಳನ್ನು ಹೇಳಿಕೊಂಡವರು ಬೇರಾರೂ ಅಲ್ಲ. ಕಳೆದ ಡಿಸೆಂಬರ್ 30ರಂದು ಪ್ರಧಾನಿ ನರೇಂದ್ರ ಮೋದಿ ತನ್ನ ಮನೆಗೆ ಭೇಟಿ ನೀಡಿದಾಗ ಚಹಾ ಆತಿಥ್ಯ ನೀಡಿದ್ದ ಅಯೋಧ್ಯೆಯ ದಲಿತ ಮಹಿಳೆ ಮೀರಾ ದೇವಿ ಮಾಂಝಿ.

ಸ್ವತಂತ್ರ ಸುದ್ದಿ ಸಂಸ್ಥೆ ನ್ಯೂಸ್ ಲಾಂಡ್ರಿಯ ಪ್ರತಿನಿಧಿ ಬಸಂತ್ ಕುಮಾರ್ ಅವರಿಗೆ ನೀಡಿದ ಸಂದರ್ಶನದ ವೇಳೆ ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಸೆಂಬರ್ 30 ರಂದು ಅಯೋಧ್ಯೆಗೆ ಭೇಟಿ ನೀಡಿದ್ದರು. ರೈಲ್ವೆ ನಿಲ್ದಾಣ, ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. ಈ ವೇಳೆ ಅಯೋಧ್ಯೆಯ ಉಜ್ವಲ ಫಲಾನುಭವಿ ಮೀರಾ ದೇವಿ ಮಾಂಝಿ ಎಂಬ ಮಹಿಳೆ ಮನೆಗೆ ಭೇಟಿ ನೀಡಿ ಚಹಾ ಕುಡಿದು, ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದರು.

Modi Meets Meera manji

ಕಂಠರಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜ್‌ಘಾಟ್‌ನ ನಿವಾಸಿ ಮೀರಾ ಮಾಂಝಿ ಅವರ ಪತಿಯ ಹೆಸರು ಸೂರಜ್ ಮಾಂಝಿ. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟೌವ್ ಪಡೆದಿದ್ದರು. ಅವರು ಈ ಯೋಜನೆಯ ಫಲಾನುಭವಿಗಳಲ್ಲಿ 10ನೇ ಕೋಟಿಯವರಾಗಿದ್ದರು.

ಈ ಹಿನ್ನೆಲೆಯಲ್ಲಿ ದಂಪತಿಯ ಸಂದರ್ಶನ ನಡೆಸಿರುವ ನ್ಯೂಸ್ ಲಾಂಡ್ರಿ, ಪ್ರಧಾನಿ ಮೋದಿಯವರು ಬಂದು ಹೋದ ನಂತರ ತಮ್ಮ ಜೀವನದಲ್ಲಿ ಬದಲಾವಣೆಗಳಾಗಿದೆಯಾ? ಎಂದು ಕೇಳಿದಾಗ, “ಮಾಂಝಿ ಸಮುದಾಯದ ನಡುವೆ ನಮಗೆ ಗೌರವ ಹೆಚ್ಚಿದೆ. ಆದರೆ ಮನೆಗೆ ದಿನನಿತ್ಯವೂ ಹೊಸಬರು ಬರುತ್ತಲೇ ಇದ್ದಾರೆ. ಇದರಿಂದಾಗಿ ಪತಿಗೆ ಕೆಲಸಕ್ಕೆ ಹೋಗಲಿಕ್ಕೆ ಆಗುತ್ತಿಲ್ಲ. ಬಂದವರ ಆತಿಥ್ಯ ಮಾಡಲು ಸಾಲ ಬೇರೆ ಮಾಡಬೇಕಾಯಿತು” ಎಂದು ತಿಳಿಸಿದ್ದಾರೆ.

ಬೇರೇನಾದರೂ ಬದಲಾವಣೆ ಆಗಿದೆಯಾ ಎಂದು ಕೇಳಿದಾಗ, “ಅಂತಹ ವಿಶೇಷ ಬದಲಾವಣೆ ಆಗಿಲ್ಲ. ಪ್ರಧಾನಮಂತ್ರಿ ಆವಾಸ್ ಯೋಜನೆಯಿಂದ ನಮಗೆ ಸಣ್ಣ ಮನೆ ಸಿಕ್ಕಿದೆಯಾದರೂ ಇನ್ನೂ ಕೂಡ ಸಿಮೆಂಟ್ ಪ್ಲಾಸ್ಟಿಂಗ್, ಸುಣ್ಣ ಬಣ್ಣ ಇನ್ನೂ ಬಳಿದಿಲ್ಲ. ನಮ್ಮ ಸಮುದಾಯದ ಮುಖಂಡ ವೀರ್ ಚಂದ್ ಮಾಂಝಿ ಎಂಬವರ ಬಳಿ ಅದಕ್ಕೆ ಹಣ ಕೊಟ್ಟಿದ್ದಾರೆ ಅಂತ ನಮಗಿರುವ ಮಾಹಿತಿ. ಆದರೆ ಅವರು ಇನ್ನೂ ಈ ಬಗ್ಗೆ ಏನೂ ಕ್ರಮ ಕೈಗೊಂಡಿಲ್ಲ” ಎಂದು ಬೇಸರಿಸಿದ್ದಾರೆ.

ಮೋದಿಯವರಿಗೆ ಚಹಾ ನೀಡಲಾಗಿದ್ದ ಕಪ್ ಅನ್ನು ಈಗ ದೇವರ ಮೂರ್ತಿಗಳು ಇಡುವ ಪೀಠದಲ್ಲಿ ಇಟ್ಟಿದ್ದಾರೆ, ಈ ಬಗ್ಗೆ ಸಂದರ್ಶಕ ಪ್ರಶ್ನಿಸಿದಾಗ, “ಅವರು ನಮಗೆ (ಪ್ರಧಾನಿ ಮೋದಿ) ದೇವರಿದ್ದಂತೆ. ಹಾಗಾಗಿ, ಅವರು ಬಂದ ನೆನಪಿಗೆ ಅಲ್ಲಿ ಇಟ್ಟಿದ್ದೇವೆ” ಎಂದು ಮೀರಾ ದೇವಿ ಮಾಂಝಿ ಹೇಳಿದ್ದಾರೆ.

“ಪ್ರಧಾನಿ ಮೋದಿಯವರ ಭೇಟಿ ಬಳಿಕ ಚುನಾವಣೆ ನಿಲ್ಲಿಸುವ ಮಾತುಗಳು ಕೂಡ ಕೇಳಿ ಬಂದಿದೆ. ನೋಡೋಣ ಎಂದು ತಿಳಿಸಿರುವ ಮೀರಾ ಮನೆಯಲ್ಲಿ, ಅಡುಗೆ ಮನೆಯಲ್ಲಿ ಸರಿಯಾದ ವಿದ್ಯುತ್ ವ್ಯವಸ್ಥೆ ಇನ್ನೂ ಇಲ್ಲ. ವಿದ್ಯುತ್ ಬಿಲ್ ಹೆಚ್ಚು ಬರಬಹುದು ಎಂಬ ಹಿನ್ನೆಲೆಯಲ್ಲಿ ಮನೆಗೆ ಒಂದೇ ಬಲ್ಬ್ ಬಳಸುತ್ತಿದ್ದೇವೆ. ಟಾರ್ಚ್‌ನ ಬೆಳಕಿನಲ್ಲಿ ಅಡುಗೆ ಮಾಡುತ್ತಿದ್ದೇವೆ” ಎಂದು ತಮ್ಮ ಕಷ್ಟಗಳನ್ನು ‘ನ್ಯೂಸ್ ಲಾಂಡ್ರಿ’ಯೊಂದಿಗೆ ವಿವರಿಸಿದ್ದಾರೆ.

“ಮೊದಲು ನಾವು ಕಟ್ಟಿಗೆಗಳಲ್ಲಿ ಅಡುಗೆ ಮಾಡುತ್ತಿದ್ದೆವು. ಈಗ ಉಜ್ವಲ ಯೋಜನೆಯ ಮೂಲಕ ನಮಗೆ ಗ್ಯಾಸ್ ಸಿಲಿಂಡರ್ ಸಿಕ್ಕಿದೆ. ಆದರೆ ಈಗ ಸಿಕ್ಕಿರುವ ಗ್ಯಾಸ್ ಮುಗಿದ ಬಳಿಕ ಇನ್ನೊಂದು ಗ್ಯಾಸ್ ತೆಗೆದುಕೊಳ್ಳುತ್ತೇವೆಯೋ ಎಂಬುದು ಗೊತ್ತಿಲ್ಲ. ಒಂದು ವೇಳೆ ಆಗದೇ ಇದ್ದರೆ ಮತ್ತೆ ಕಟ್ಟಿಗೆಯನ್ನೇ ಬಳಸುವೆ” ಎಂದು ಇದೇ ವೇಳೆ ಮೀರಾ ತಿಳಿಸಿದ್ದಾರೆ.

“ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟೌವ್ ಪಡೆದಿದ್ದ ಫಲಾನುಭವಿಗಳ ಪೈಕಿ ನಾವು 10ನೇ ಕೋಟಿಯವರಾಗಿದ್ದೆವು. ಹಾಗಾಗಿ ಪ್ರಧಾನಿ ಮೋದಿ ನಮ್ಮ ಮನೆಗೆ ಭೇಟಿ ನೀಡಿದ್ದಾರೆ. ಆ ಬಳಿಕ ನಮ್ಮ ಮನೆಗೆ ಭೇಟಿ ನೀಡುವವರ ಸಂಖ್ಯೆಯೂ ಜಾಸ್ತಿಯಾಗಿದೆ. ಇದರಿಂದ ಕೂಲಿ ಕೆಲಸಕ್ಕೆ ಹೋಗಲಿಕ್ಕೆ ಆಗುತ್ತಿಲ್ಲ. ಬಂದವರನ್ನು ಸತ್ಕರಿಸಲಿಕ್ಕಾಗಿ 5-6 ಸಾವಿರ ರೂ ಸಾಲ ಪಡೆದುಕೊಳ್ಳಬೇಕಾಯಿತು” ಎಂದು ದಿನಗೂಲಿ ಕಾರ್ಮಿಕನಾಗಿರುವ ಮೀರಾ ಪತಿ ಸೂರಜ್ ಮಾಂಝಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...