ಮಹಾತ್ಮಾ ಗಾಂಧಿ ಬಗ್ಗೆ ಸಿನಿಮಾ ಬರುವವರೆಗೆ ಜಗತ್ತಿಗೆ ಅವರು ಯಾರೆಂಬುದೇ ಗೊತ್ತಿರಲಿಲ್ಲ: ಪ್ರಧಾನಿ ಮೋದಿ ವಿಚಿತ್ರ ಹೇಳಿಕೆ

Date:

ಲೋಕಸಭಾ ಚುನಾವಣೆಯ ಮೊದಲ ಹಂತದ ಬಳಿಕ ವಿಚಿತ್ರ ಹೇಳಿಕೆಗಳನ್ನು ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸುದ್ದಿಯಾಗುತ್ತಿದ್ದಾರೆ.

ಈ ಹಿಂದೆ, ಕಾಂಗ್ರೆಸ್ ನಿಮ್ಮ ಮಂಗಳಸೂತ್ರವನ್ನು ಕಸಿದುಕೊಳ್ಳುತ್ತದೆ, ನಿಮ್ಮಲ್ಲಿ ಎರಡು ಎಮ್ಮೆಗಳಿದ್ದರೆ ಒಂದನ್ನು ಕದಿಯಲಿದೆ, ನಾನು ಜೈವಿಕವಾಗಿ ಹುಟ್ಟಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು ಎಂಬಿತ್ಯಾದಿ ಹೇಳಿಕೆಗಳನ್ನು ನೀಡಿದ್ದ ಪ್ರಧಾನಿ ಮೋದಿ, ನಿನ್ನೆ ಖಾಸಗಿ ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದ ವೇಳೆ ಮಹಾತ್ಮಾ ಗಾಂಧಿಯವರ ಬಗ್ಗೆಯೂ ವಿಚಿತ್ರ ಹೇಳಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರು ನಿರಂತರ ಸಂದರ್ಶನಗಳನ್ನು ನೀಡುತ್ತಿದ್ದಾರೆ. ಅದರ ಭಾಗವಾಗಿ ನಿನ್ನೆ ಹಿಂದಿ ಸುದ್ದಿ ವಾಹಿನಿ ಎಬಿಪಿ ನ್ಯೂಸ್‌ಗೂ ಕೂಡ ಸಂದರ್ಶನ ನೀಡಿದ್ದು, ಈ ವೇಳೆ, “ಮಹಾತ್ಮಾ ಗಾಂಧಿ ಅವರ ಬಗ್ಗೆ ಸಿನಿಮಾ ಬರುವವರೆಗೆ ಜಗತ್ತಿಗೆ ಅವರು ಯಾರೆಂಬುದೇ ಗೊತ್ತಿರಲಿಲ್ಲ” ಎಂದು ವಿಚಿತ್ರ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾರ್ಟಿನ್ ಲೂಥರ್ ಕಿಂಗ್, ದಕ್ಷಿಣ ಆಫ್ರಿಕಾದ ನೆಲ್ಸನ್ ಮಂಡೇಲಾ ಅವರು ಯಾರೆಂಬುದು ಜಗತ್ತಿಗೇ ಗೊತ್ತಿದೆ. ಆದರೆ, ಮಹಾತ್ಮಾ ಗಾಂಧಿ ಅವರ ಬಗ್ಗೆ ಮೊದಲ ಬಾರಿಗೆ ಸಿನಿಮಾ ಬರುವವರೆಗೆ ಯಾರೆಂಬುದೇ ಜಗತ್ತಿಗೆ ಗೊತ್ತಿರಲಿಲ್ಲ. ಮಹಾತ್ಮ ಗಾಂಧಿ ದೊಡ್ಡ ವ್ಯಕ್ತಿಯಾಗಿದ್ದರೂ ಜಗತ್ತಿಗೆ ಅವರ ಬಗ್ಗೆ ತಿಳಿದಿರಲಿಲ್ಲ, ಜಗತ್ತು ಅವರ ಬಗ್ಗೆ ತಿಳಿಯುವಂತಾಗಲು ಎಲ್ಲಾ ಭಾರತೀಯ ರಾಜಕೀಯ ನಾಯಕರು ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರದ ಈ ಅವಧಿಯಲ್ಲಿ ಶ್ರಮಿಸಬೇಕು” ಎಂದು ಪ್ರಧಾನಿ ಹೇಳಿಕೊಂಡರು.

“ಮಹಾತ್ಮ ಗಾಂಧಿ ಮಹಾನ್‌ ವ್ಯಕ್ತಿಯಾಗಿದ್ದರು. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆ ಒದಗಿಸಿಕೊಡುವುದು ನಮ್ಮ ಹಿಂದಿನ ಸರ್ಕಾರಗಳ ಕರ್ತವ್ಯವಾಗಿರಲಿಲ್ಲವೇ?” ಎಂದು ಅಚ್ಚರಿಯ ಹಾಗೂ ವಿಚಿತ್ರ ಹೇಳಿಕೆ ನೀಡಿದ್ದಾರೆ.

ಗಾಂಧಿ ಬಗ್ಗೆ ಹೇಳಿಕೆ: ಸುಳ್ಳು ಬಯಲಿಗೆಳೆದ ಕೇರಳ ಕಾಂಗ್ರೆಸ್

ಮೋದಿ ಅವರ ಸಂದರ್ಶನದ ಈ ತುಣುಕು ವೈರಲ್‌ ಆಗಿದ್ದು, ಈ ಹಿನ್ನೆಲೆಯಲ್ಲಿ ಮೋದಿಯವರು ಹೇಳಿದ್ದು ನಿಜವೇ ಎಂದು ನೆಟ್ಟಿಗರು ಹುಡುಕಾಡಿದ್ದಾರೆ. ಪ್ರಧಾನಿ ಮೋದಿಯವರು ಗಾಂಧಿ ಬಗ್ಗೆ ಹೇಳಿರುವ ಹಸಿಹಸಿ ಸುಳ್ಳು ಈಗ ಬಯಲಾಗಿದೆ.

ಈ ಹಿಂದೆ ಮನ್‌ಕಿ ಬಾತ್‌ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾಗ ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಮಹಾತ್ಮಾ ಗಾಂಧಿಯವರನ್ನು ಹೊಗಳಿ ನೀಡಿದ್ದ ಹೇಳಿಕೆ ಈಗ ವೈರಲಾಗಿದೆ.

“ಮಹಾತ್ಮ ಗಾಂಧಿಯವರ ಆದರ್ಶಗಳು ಇಡೀ ಜಗತ್ತನ್ನು ಪ್ರೇರೇಪಿಸಿತು. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮತ್ತು ನೆಲ್ಸನ್ ಮಂಡೇಲಾರಂಥವರು ಗಾಂಧೀಜಿಯವರ ಆದರ್ಶಗಳಿಂದ ತಮ್ಮ ಶಕ್ತಿಯನ್ನು ಪಡೆದರು” ಎಂದು ಈ ಹಿಂದೆ ನರೇಂದ್ರ ಮೋದಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ನೀಡಿದ್ದ ಹೇಳಿಕೆ ವೈರಲಾಗಿದೆ.

ಈ ನಡುವೆ ಗಾಂಧಿ ಬಗ್ಗೆ ಮೋದಿಯವರು ನೀಡಿರುವ ಹೇಳಿಕೆಯು ಸುಳ್ಳು ಎಂದು ಬಯಲಿಗೆಳೆದಿರುವ ಕೇರಳ ಕಾಂಗ್ರೆಸ್, ಮಹಾತ್ಮಾ ಗಾಂಧಿ ಹಾಗೂ ಅವರ ಜೀವನಾದರ್ಶಗಳ ಬಗ್ಗೆ ಜಗತ್ತಿನ ಖ್ಯಾತ ವಿಜ್ಞಾನಿ ಐನ್‌ಸ್ಟೈನ್, ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ನೆಲ್ಸನ್ ಮಂಡೇಲಾ ಸೇರಿದಂತೆ ಮತ್ತಿತರರು ನೀಡುವ ಹೇಳಿಕೆಗಳನ್ನು ಪೋಸ್ಟ್ ಮಾಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...