ಅಜೈವಿಕ ಪ್ರಧಾನಿ ಪೇಪರ್‌ ಲೀಕ್ ಬಗ್ಗೆ ಚರ್ಚೆ ನಡೆಸೋದು ಯಾವಾಗ: ಕಾಂಗ್ರೆಸ್ ವಾಗ್ದಾಳಿ

Date:

ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET) ಪರೀಕ್ಷೆಯನ್ನು ರದ್ದುಗೊಳಿಸಿದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡರು, “ಅಜೈವಿಕ ಪ್ರಧಾನಿ ಪೇಪರ್‌ ಲೀಕ್ ಬಗ್ಗೆ ಚರ್ಚೆ ನಡೆಸೋದು ಯಾವಾಗ” ಎಂದು ಲೇವಡಿ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಪ್ರತಿ ವರ್ಷ ಅಜೈವಿಕ ಪ್ರಧಾನಮಂತ್ರಿ ಅವರು ‘ಪರೀಕ್ಷಾ ಪೆ ಚರ್ಚಾ’ ಎಂದು ಕರೆಯುವ ಭವ್ಯವಾದ ತಮಾಷೆಯನ್ನು ನಡೆಸುತ್ತಾರೆ. ಆದರೆ ಅವರಿಗೆ ಸೋರಿಕೆ, ವಂಚನೆಗಳಿಲ್ಲದೆ ಪರೀಕ್ಷೆಗಳನ್ನು ನಡೆಸಲು ಮಾತ್ರ ಸಾಧ್ಯವಾಗುವುದಿಲ್ಲ” ಎಂದು ಟೀಕಿಸಿದ್ದಾರೆ.

“ನೀಟ್ ಯುಜಿ ಪರೀಕ್ಷೆ ಬಗ್ಗೆ ಹಲವಾರು ಗಂಭೀರ ಪ್ರಶ್ನೆಗಳಿದೆ. ಅದನ್ನು ಶಿಕ್ಷಣ ಸಚಿವರು ಸಹ ಒಪ್ಪಿಕೊಳ್ಳುವಂತಾಗಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಸಮಗ್ರತೆಯ ಮೇಲೆ ಅನುಮಾನ ಹುಟ್ಟಿದೆ. ಈ ನಡುವೆ ಯುಜಿಸಿ-ನೆಟ್ ಪರೀಕ್ಷೆ ನಡೆದ ಮರುದಿನವೇ ಆ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಸ್ತವವಾಗಿ, ಜೈವಿಕವಲ್ಲದ ಪ್ರಧಾನಿ ಮೋದಿ ಸರ್ಕಾರವು ಭಾರತದ ಶಿಕ್ಷಣ ವ್ಯವಸ್ಥೆಯನ್ನೇ ಹಾಳು ಮಾಡಿದೆ. ಸಿಯುಇಟಿ ಪರೀಕ್ಷೆಯ ಅಪಹಾಸ್ಯ ಮಾಡಿದೆ. ಎನ್‌ಸಿಇಆರ್‌ಟಿ, ಯುಜಿಸಿ, ಸಿಬಿಎಸ್‌ಇಯ ವೃತ್ತಿಪರತೆ ನಾಶವಾಗಿದೆ” ಎಂದು ದೂರಿದರು.

“2020ರ ಹೊಸ ಶಿಕ್ಷಣ ನೀತಿಯು ಭಾರತದ ಶಿಕ್ಷಣ ವ್ಯವಸ್ಥೆಯನ್ನು ಭವಿಷ್ಯಕ್ಕಾಗಿ ಸಿದ್ಧಪಡಿಸುವ ಬದಲಾಗಿ ನಾಗ್ಪುರ ಶಿಕ್ಷಣ ನೀತಿ 2020ನಂತೆ ಕಾರ್ಯನಿರ್ವಹಿಸುತ್ತಿದೆ. ಇದು ರಾಜಕೀಯ ವಿಜ್ಞಾನದಲ್ಲಿ ಎಂಎ ಮಾಡಿದವರ (ಮೋದಿ ಶಿಕ್ಷಣ) ಪರಂಪರೆಯಾಗಿದೆ. ಈ ಪೇಪರ್‌ ಲೀಕ್ ಬಗ್ಗೆ ಚರ್ಚೆ ಮಾಡಬಹುದೇ” ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ನೀವು ಪರೀಕ್ಷಾ ಪೆ ಚರ್ಚಾ ನಡೆಸುತ್ತೀರಿ, ನೀಟ್ ಪರೀಕ್ಷೆಯ ಚರ್ಚೆ ಯಾವಾಗ” ಎಂದು ಪ್ರಧಾನಿ ಮೋದಿಯನ್ನು ಕೇಳಿದ್ದಾರೆ.

“ನೀಟ್‌ನಲ್ಲಿ ಯಾವುದೇ ಪೇಪರ್ ಸೋರಿಕೆಯಾಗಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವರು ಮೊದಲು ಹೇಳಿದ್ದಾರೆ. ಬಿಹಾರ, ಗುಜರಾತ್ ಮತ್ತು ಹರಿಯಾಣದಲ್ಲಿ ಶಿಕ್ಷಣ ಮಾಫಿಯಾ ಬಹಿರಂಗವಾದ ಬಳಿಕ ಶಿಕ್ಷಣ ಸಚಿವರು ಏನೋ ತಪ್ಪಾಗಿದೆ ಎಂದು ನಂಬಲು ಆರಂಭಿಸಿದ್ದಾರೆ. ನೀಟ್ ಪರೀಕ್ಷೆ ರದ್ದಾಗುವುದು ಯಾವಾಗ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...