ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

Date:

ಮಹಾರಾಷ್ಟ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಎನ್‌ಸಿಪಿಯ ಅಜಿತ್‌ ಪವಾರ್‌ ಕಾರಣವಲ್ಲ, ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ ಎಂದು ಬಿಜೆಪಿಯ ಮಿತ್ರ ಪಕ್ಷ ಎನ್‌ಸಿಪಿ (ಅಜಿತ್ ಪವಾರ್ ಬಣ) ಸಚಿವ ಛಗನ್ ಭುಜಬಲ್ ಹೇಳಿದ್ದಾರೆ.

ಮಹಾರಾಷ್ಟ್ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿನ್ನಡೆಗೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯೊಂದಿಗಿನ ಮೈತ್ರಿಯೇ ಕಾರಣ ಎಂದು ಆರ್‌ಎಸ್‌ಎಸ್‌ ಮುಖವಾಣಿಯಲ್ಲಿ ಲೇಖನ ಪ್ರಕಟವಾದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಛಗನ್ ಭುಜಬಲ್, “ಉಪಮುಖ್ಯಮಂತ್ರಿಯನ್ನು ಬಲಿಪಶು ಮಾಡಬಾರದು” ಎಂದಿದ್ದಾರೆ.

“ಉತ್ತರ ಪ್ರದೇಶದಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಅಜಿತ್ ಪವಾರ್ ಉತ್ತರ ಪ್ರದೇಶದಲ್ಲಿ ಇಲ್ಲ. ಹಾಗಿರುವಾಗ ಅಲ್ಲಿ ಬಿಜೆಪಿ ಹೇಗೆ ಸೋತಿದೆ” ಎಂದು ಛಗನ್ ಭುಜಬಲ್ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮಹಾರಾಷ್ಟ್ರದಲ್ಲಿ ಬಿಜೆಪಿ ತಂತ್ರಕ್ಕೆ ಆಹುತಿಯಾಗುತ್ತಾ ಮಹಾಯುತಿ

“ಮಹಾಯುತಿಯ ಸೋಲಿಗೆ ಬಿಜೆಪಿಯ ‘ಅಬ್‌ ಕಿ ಬಾರ್ ಚಾರ್‌ ಸೌ ಪಾರ್’ ಘೋಷಣೆ ಕಾರಣ. ಈ ಘೋಷಣೆಯಿಂದಾಗಿ ದಲಿತ ಮತ್ತು ಮುಸ್ಲಿಂ ಮತದಾರರು ಮಹಾಯುತಿಯಿಂದ ದೂರವಾಗಿದ್ದಾರೆ” ಎಂದಿದ್ದಾರೆ.


ಇನ್ನು “ಸಂವಿಧಾನವನ್ನು ಬದಲಿಸುವುದು, ಮೀಸಲಾತಿಯನ್ನು ಅಂತ್ಯ ಮಾಡುವಂತಹ ಹೇಳಿಕೆಗಳನ್ನು ವಿಪಕ್ಷಗಳು ಎತ್ತಿ ಹಿಡಿದು ತನ್ನ ಚುನಾವಣಾ ಪ್ರಚಾರ ಮಾಡಿದೆ. ಇದು ನಮ್ಮ ಚುನಾವಣಾ ಭವಿಷ್ಯಕ್ಕೆ ಹಾನಿ ಮಾಡಿದೆ. ಮಹಾರಾಷ್ಟ್ರ ಸಿಎಂ ಏಕಾಂತ್ ಶಿಂಧೆ ಕೂಡ ಇದನ್ನೇ ಹೇಳುತ್ತಿದ್ದರು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಪ್ರದರ್ಶನ: ರಾಜೀನಾಮೆಗೆ ಮುಂದಾದ ಡಿಸಿಎಂ ಫಡ್ನವಿಸ್

ಆರ್‌ಎಸ್‌ಎಸ್ ಕಾರ್ಯಕರ್ತ ರತನ್ ಶಾರದ ಲೇಖನಕ್ಕೆ ಪ್ರತಿಕ್ರಿಯೆ ನೀಡಿರುವ ಎನ್‌ಸಿಪಿ ಸಚಿವ ಹಸನ್ ಮುಶ್ರಿಫ್, “ಚುನಾವಣಾ ಸೋಲಿಗೆ ಆರ್‌ಎಸ್‌ಎಸ್-ಬಿಜೆಪಿ ಅಜಿತ್ ಮೇಲೆ ಆರೋಪ ಹೊರಿಸಬಾರದು. ಪರಸ್ಪರ ಆರೋಪ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ನಾವು ಮೈತ್ರಿಕೂಟದಲ್ಲಿರುವಾಗ ಇದು ಸರಿಯಲ್ಲ” ಎಂದು ಅಭಿಪ್ರಾಯಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯನ್ನು ಕಾಣಲು ಎನ್‌ಸಿಪಿ ಜೊತೆಗಿನ ಮೈತ್ರಿಯೂ ಕಾರಣ ಎಂದು ಆರ್‌ಎಸ್‌ಎಸ್‌ ಮುಖವಾಣಿ ‘ಆರ್ಗನೈಸರ್‌’ನ ಲೇಖನವೊಂದರಲ್ಲಿ ಬರೆಯಲಾಗಿದೆ.

ಆರ್‌ಎಸ್‌ಎಸ್ ಕಾರ್ಯಕರ್ತ ರತನ್ ಶಾರದ “ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರೊಂದಿಗೆ ಮೈತ್ರಿ ಮಾಡಿಕೊಂಡು ಬಿಜೆಪಿಯ ‘ಬ್ರಾಂಡ್ ಮೌಲ್ಯ’ ಕಡಿಮೆಯಾಗಿದೆ. ಇತರೆ ಪಕ್ಷಗಳಂತೆಯೇ ಬಿಜೆಪಿಯೂ ಸಾಮಾನ್ಯವಾಗಿ ಕಾಣತೊಡಗಿದೆ. ಲೋಕಸಭೆ ಚುನಾವಣೆಯ ಫಲಿತಾಂಶವು ಬಿಜೆಪಿ ಕಾರ್ಯಕರ್ತರ ಅತಿಯಾದ ವಿಶ್ವಾಸದ ರಿಯಾಲಿಟಿ ಚೆಕ್ ಆಗಿದೆ” ಎಂದು ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...