ಹೊಸ ಸಂಸತ್ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದ್ದು ಜಾತಿ ತಾರತಮ್ಯದ ಉತ್ತಮ ಉದಾಹರಣೆ: ಉದಯನಿಧಿ

Date:

  • ಜಾತಿ ತಾರತಮ್ಯದ ಆಚರಣೆ ಬಗ್ಗೆ ಯಾವುದಾದರೂ ಉದಾಹರಣೆ ನೀಡಬಹುದೇ ಎಂದು ಕೇಳಿದ ಪತ್ರಕರ್ತ
  • ಕೆಳಜಾತಿಯ ಕಾರಣಕ್ಕೆ ದ್ರೋಣಾಚಾರ್ಯರು ಏಕಲವ್ಯನಿಗೆ ಬಿಲ್ವಿದ್ಯೆ ಕಲಿಸಲಿಲ್ಲ ಎಂದ ಉದಯನಿಧಿ ಸ್ಟಾಲಿನ್

ಸನಾತನ ಧರ್ಮ ನಿರ್ಮೂಲನೆ ಹೇಳಿಕೆಯು ದೇಶಾದ್ಯಂತ ಬಿಜೆಪಿ ಮತ್ತು ಸಂಘಪರಿವಾರವನ್ನು ಕೆರಳುವಂತೆ ಮಾಡಿರುವ ಮಧ್ಯೆಯೇ ಮತ್ತೊಮ್ಮೆ ಸ್ಪಷ್ಟವಾಗಿ ತನ್ನ ನಿಲುವನ್ನು ಪ್ರಕಟಿಸಿರುವ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್, “ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹೊಸ ಸಂಸತ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇರುವುದು ಜಾತಿ ತಾರತಮ್ಯ ಅತ್ಯುತ್ತಮ ಉದಾಹರಣೆ” ಎಂದು ಹೇಳಿದ್ದಾರೆ.

ಚೆನ್ನೈನಲ್ಲಿ ಸನಾತನ ಧರ್ಮದ ಜಾತಿ ತಾರತಮ್ಯ ಆಚರಣೆಯ ಬಗ್ಗೆ ನೀವು ಯಾವುದಾದರೂ ಉದಾಹರಣೆಯನ್ನು ನೀಡಬಹುದೇ ಎಂದು ಪತ್ರಕರ್ತನೋರ್ವ ಕೇಳಿದಾಗ ಉತ್ತರಿಸಿರುವ ತಮಿಳುನಾಡು ಕ್ರೀಡಾ ಸಚಿವ, “ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೆ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗಿಲ್ಲ. ಇದು ಪ್ರಸ್ತುತ ಅತ್ಯುತ್ತಮವಾದ ಉದಾಹರಣೆಯಾಗಿದೆ” ಎಂದು ಹೇಳಿದರು.

ನೀವೇನಾದರೂ ಕ್ಷಮೆ ಕೇಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಉದಯನಿಧಿ ಸ್ಟಾಲಿನ್, ಯಾರಾದರೂ ಕ್ಷಮೆ ಕೇಳಲು ಹೇಳಿದ್ದಾರಾ? ಇಲ್ಲ, ನಾನು ಕ್ಷಮೆ ಕೇಳುವ ಮಾತೇ ಇಲ್ಲ, ‘ಸಾರಿ’. ಈಗ ಹೇಳಿದ ‘ಸಾರಿ ಅವರಿಗಾಗಿ ಅಲ್ಲ. ಇದು ನಿಮ್ಮ (ವರದಿಗಾರರ) ಪ್ರಶ್ನೆಗೆ” ಎಂದು ‘ಸನಾತನ ಧರ್ಮ’ ಕುರಿತು ಕ್ಷಮೆಯಾಚಿಸುವ ಬೇಡಿಕೆಗಳ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ಶಿಕ್ಷಕರ ದಿನಾಚರಣೆಯ ಸಂದೇಶದಲ್ಲಿ ಮಾತನಾಡಿದ್ದ ಕ್ರೀಡಾ ಸಚಿವ, “ಏಕಲವ್ಯ ಕೆಳಜಾತಿಯವನೆಂಬ ಕಾರಣಕ್ಕೆ ದ್ರೋಣಾಚಾರ್ಯರು ಆತನಿಗೆ ಬಿಲ್ವಿದ್ಯೆ ಕಲಿಸಲು ನಿರಾಕರಿಸಿದರು. ಆದರೆ ಆತ ತನ್ನ ಸ್ವಂತ ಪರಿಶ್ರಮದಿಂದ ಬಿಲ್ಲುಗಾರಿಕೆಯನ್ನು ಕಲಿತದ್ದು ಮಾತ್ರವಲ್ಲದೇ, ನುರಿತ ಬಿಲ್ಲುಗಾರನಾದನು. ದ್ರೋಣಾಚಾರ್ಯರ ಶಿಷ್ಯ ಅರ್ಜುನನಿಗಿಂತಲೂ ಉತ್ತಮನಾದನು. ಇದನ್ನು ತಿಳಿದ ನಂತರ ಕೋಪಗೊಂಡ ದ್ರೋಣಾಚಾರ್ಯರು ಏಕಲವ್ಯನ ಹೆಬ್ಬೆರಳನ್ನು ನೀಡಬೇಕೆಂದು ಒತ್ತಾಯಿಸಿದರು. ಏಕಲವ್ಯ ಅದನ್ನು ಪಾಲಿಸಿದನು, ಇದರಿಂದಾಗಿ ಅವನು ಬಿಲ್ಲುಗಾರಿಕೆ ಮಾಡಲು ಅಸಮರ್ಥನಾದನು” ಎಂದು ಮಹಾಭಾರತದಲ್ಲಾದ ತಾರತಮ್ಯವನ್ನು ಉದಯನಿಧಿ ಉಲ್ಲೇಖಿಸಿದ್ದರು.

“ನಮ್ಮ ದ್ರಾವಿಡ ಚಳವಳಿಯ ಶಿಕ್ಷಕರು ವಿದ್ಯಾರ್ಥಿಗಳ ಹೆಬ್ಬೆರಳು ಕೇಳದೆ ಶಿಕ್ಷಣವನ್ನು ಬೋಧಿಸುವ ಮೂಲಕ ಮಕ್ಕಳೊಂದಿಗಿನ ಬಾಂಧವ್ಯವನ್ನು ಶಾಶ್ವತವಾಗಿ ಮುಂದುವರಿಸುತ್ತಿದ್ದಾರೆ” ಎಂದು ಉದಯನಿಧಿ ಹೇಳಿಕೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...