ಒಕ್ಕಲಿಗರು ಮಾತ್ರವಲ್ಲ, ಎಲ್ಲ ವರ್ಗದ ಜನ ಕಾಂಗ್ರೆಸ್ ಬೆಂಬಲಿಸುತ್ತಾರೆ: ಡಿ ಕೆ ಶಿವಕುಮಾರ್

Date:

ಜನರು ದಡ್ಡರಲ್ಲ, ತಮ್ಮ ಬದುಕು ಯಾರು ಕಟ್ಟಿಕೊಡುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ. ಕಾಂಗ್ರೆಸ್ ಪಕ್ಷ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದು, ಒಕ್ಕಲಿಗರೂ ಸೇರಿದಂತೆ ಎಲ್ಲ ವರ್ಗದ ಜನ ಕಾಂಗ್ರೆಸ್‌ಗೆ ಬೆಂಬಲ ನೀಡಲಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡುವಾಗ, ವಿಧಾನಸಭೆ ಚುನಾವಣೆ ವೇಳೆ ಶೇ.5ರಷ್ಟು ಒಕ್ಕಲಿಗ ಮತಗಳು ಕಾಂಗ್ರೆಸ್ ಕಡೆ ವಾಲಿದ್ದವು. ಈ ಬಾರಿ ಒಕ್ಕಲಿಗರು ಯಾರನ್ನು ಬೆಂಬಲಿಸಲಿದ್ದಾರೆ ಎಂದು ಕೇಳಿದಾಗ ಅವರು ಹೀಗೆ ಉತ್ತರಿಸಿದರು.

“ಒಕ್ಕಲಿಗರಾಗಲಿ, ಬೇರೆ ಸಮುದಾಯದವರಾಗಲಿ ಯಾರೂ ದಡ್ಡರಲ್ಲ. ತಮಗೆ ಯಾರು ಅನುಕೂಲ ಮಾಡಿಕೊಡಲಿದ್ದಾರೆ ಹಾಗೂ ದೇಶಕ್ಕೆ ಯಾರು ಸೂಕ್ತ ಎಂದು ನೋಡುತ್ತಾರೆ. ತಮಗೆ, ರಾಜ್ಯಕ್ಕೆ, ದೇಶಕ್ಕೆ ಯಾರು ಉತ್ತಮರು ಎಂದು ಜನ ಆಲೋಚನೆ ಮಾಡುತ್ತಾರೆ. ಜನ ಅವರ ಬದುಕು ನೋಡುತ್ತಾರೆ ಹೊರತು, ಭಾವನೆ ನೋಡುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆಡಿಎಸ್‌ಗೆ ಮುಕ್ತಿ

ಸ್ವಾಮೀಜಿಗಳು ಕೃಷ್ಣನಂತೆ, ಅವರು ಪಾಂಡವರಂತೆ ಇರುವ ಜೆಡಿಎಸ್ ಪರವಾಗಿ ನಿಲ್ಲಲಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಜೆಡಿಎಸ್ ಎಲ್ಲಿದೆ? ಜೆಡಿಎಸ್ ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ. ಜೆಡಿಎಸ್ ಇರಬೇಕು ಎಂಬ ಆಸೆ ನನಗಿದೆ. ಆದರೆ ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಜೆಡಿಎಸ್ ವಿಸರ್ಜನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ನಾವು ಹಿಂದೆ ಒಂದು ತಪ್ಪು ಮಾಡಿದ್ದೆವು. ಆದರೆ ಈಗ ಅದಕ್ಕಿಂತ ದೊಡ್ಡ ತಪ್ಪು ಜೆಡಿಎಸ್ ನವರು ಮಾಡಿದ್ದಾರೆ” ಎಂದು ಲೇವಡಿ ಮಾಡಿದರು.

ಸರ್ಕಾರವನ್ನು ಒಂದು ಜಾತಿಗೆ ಸೀಮಿತವಾಗಿಸುತ್ತಿರುವುದೇಕೆ ಎಂದು ಕೇಳಿದಾಗ, “ನೀವು ನಾವು ಬೇಡ ಎಂದರೂ ಜಾತಿ ನಮ್ಮನ್ನು ಬಿಡುವುದಿಲ್ಲ. ನಾವು ಅರ್ಜಿ ಹಾಕಿ ಹುಟ್ಟದಿದ್ದರೂ ನಾವು ಸಾಯುವಾಗ ಧರ್ಮ, ಜಾತಿ ಬಂದೇ ಬರುತ್ತದೆ. ಧರ್ಮ ಬೇಡ ಎಂದರೂ ನಾಮಕರಣ ಹಾಗೂ ವಿವಿಧ ಕಾರ್ಯಗಳಲ್ಲಿ ಧರ್ಮ ಅಡಗಿದೆ” ಎಂದರು.

ಮೋದಿಗೆ ತಮ್ಮ ಮೇಲೆ ವಿಶ್ವಾಸವಿಲ್ಲ

“ಮೋದಿ ಅವರು ತಮ್ಮ ಹೆಸರೇಳಿ ಮತ ಕೇಳಲಿಲ್ಲ. ಶಿವಮೊಗ್ಗಕ್ಕೆ ಬಂದಿದ್ದ ಅವರು ಅಭ್ಯರ್ಥಿ ರಾಘವೇಂದ್ರ ಅವರಿಗೆ ಮತ ಕೊಡಿ ಎಂದು ಕೇಳಿದರೇ ಹೊರತು ತಮಗೆ ಕೊಡಿ ಎಂದು ಕೇಳಲೇ ಇಲ್ಲ. ಮೋದಿ ಅವರಿಗೆ ತಮ್ಮ ಮೇಲೆ ವಿಶ್ವಾಸವಿಲ್ಲ. ನಿಮಗೇನಾದರೂ ಅವರ ಪರವಾದ ಅಲೆ ಕಾಣುತ್ತಿದೆಯೇ” ಎಂದು ಪ್ರಶ್ನಿಸಿದರು.

ಸೋಮಶೇಖರ್, ಹೆಬ್ಬಾರ್ ಬಿಜೆಪಿ ಶಾಸಕರು

ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡಿದ್ದಾರೆ ಎಂದು ಕೇಳಿದಾಗ, “ನಾನು ಅವರನ್ನು ಎಲ್ಲಿ ಸೇರಿಸಿಕೊಂಡಿದ್ದೇನೆ. ಅವರು ತಮ್ಮ ಕ್ಷೇತ್ರದ ವಿಚಾರವಾಗಿ ನಮ್ಮ ಜತೆ ಚರ್ಚೆ ಮಾಡಿದ್ದಾರೆ. ಆ ಕ್ಷೇತ್ರಕ್ಕೆ ಹೋಗಿ ಅಲ್ಲಿ ಕೇಳಿ. ಸೋಮಶೇಖರ್ ಹಾಗೂ ಹೆಬ್ಬಾರ್ ಅವರು ಬಿಜೆಪಿಯ ಅಧಿಕೃತ ಶಾಸಕರು. ಅವರು ತಮ್ಮದೇ ಆದ ಲೆಕ್ಕಾಚಾರ, ನಂಬಿಕೆ ಮೇಲೆ ಯಾವ ಪಕ್ಷಕ್ಕೆ ಸಹಾಯ ಮಾಡುತ್ತಿದ್ದಾರೋ ನನಗೆ ಗೊತ್ತಿಲ್ಲ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...