ತಮ್ಮ ಹಗರಣಗಳಿಗೆ ರಕ್ಷಣೆ ಪಡೆಯಲು ನಟೋರಿಯಸ್ ಗ್ಯಾಂಗ್‌ ಸಿಎಂ ಅವರನ್ನು ಖೆಡ್ಡಾಗೆ ಕೆಡವಿದೆ: ಸಿ ಟಿ ರವಿ

Date:

ತಮ್ಮ ಹಗರಣಗಳಿಗೆ ರಕ್ಷಣೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ನಟೋರಿಯಸ್ ಗ್ಯಾಂಗ್‌ ಖೆಡ್ಡಾಗೆ ಕೆಡವಿಕೊಂಡಿದೆ. ನಾವು ಮಾತ್ರ ಸಿದ್ದರಾಮಯ್ಯ ಮೇಲೆ ಆರೋಪ ಮಾಡುತ್ತಿಲ್ಲ ಎಂದು ವಿಧಾನ ಪರಿಷತ್​ ಬಿಜೆಪಿ ಸದಸ್ಯ ಸಿ ಟಿ ರವಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಚಿಕ್ಕಮಗಳೂರಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ಕೇವಲ ಸಿದ್ದರಾಮಯ್ಯನವರ ಕುಟುಂಬ ಮಾತ್ರ ಮುಡಾ ಹಗರಣದಲ್ಲಿ ಭಾಗಿಯಾಗಿಲ್ಲ. 1,600ಕ್ಕೂ ಹೆಚ್ಚು ನಿವೇಶನಗಳನ್ನ ಇದೆ ರೀತಿ ಪರಬಾರಿ ಮಾಡಲಾಗಿದೆ ಎಂಬ ಆರೋಪ ಇದೆ” ಎಂದರು.

“ಮೈಸೂರಿನಂತಹ ಸ್ಥಳದಲ್ಲೇ ಹೀಗಾಗಿರುವಾಗ ಬೆಂಗಳೂರಿನಲ್ಲಿ ಎಷ್ಟಾಗಿರಬಹುದು? ಬೇರೆ ಬೇರೆ ನಗರ ಅಭಿವೃದ್ಧಿ ಪ್ರಾಧಿಕಾರದಲ್ಲೂ ಅಕ್ರಮ ನಡೆದಿರುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ವಿಧಾನಸಭೆ, ವಿಧಾನ ಪರಿಷತ್​ನಲ್ಲಿ ಚರ್ಚೆಗೆ ಒತ್ತಾಯ ಮಾಡಿದ್ದೇವು. ದುರ್ದೈವದ ಸಂಗತಿ ಎಂದರೆ ಆಡಳಿತ ಪಕ್ಷ ಚರ್ಚೆಗೂ ಅವಕಾಶ ಕೊಡಲಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯ ಒಂದು ಪತ್ರ ಇದ್ದರೆ ತೋರಿಸಿ ಅಂತಾರೆ. ಅವರ ಪತ್ನಿಯೇ ಬರೆದ ಪತ್ರ ಇದೆ. ಕೆಸವೆ ಗ್ರಾಮದಲ್ಲಿ 2001ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಡೆವಲಪ್ ಮಾಡಿದೆ. ಎಲ್​ಎನ್​ಟಿ ಕಂಪನಿ ಅವರಿಗೆ ಗುತ್ತಿಗೆ ಕೊಟ್ಟಿರುವ ದಾಖಲೆಗಳಿವೆ” ಎಂದು ಹೇಳಿದರು.

“ಎಷ್ಟು ಡಿನೋಟಿಫೈ ಮಾಡಿದ್ದಾರೆ? ಯಾವ ಕಾರಣಗಳಿಗೆ ಮಾಡಿದ್ದಾರೆ? ಯಾರಿಗೆ ಬದಲಿ ನಿವೇಶನ ಕೊಟ್ಟಿದ್ದಾರೆ? ಎಲ್ಲವೂ ಹೊರಬರುತ್ತೆ. ಸೆಟ್ಲ್​​ಮೆಂಟ್​ ಡೀಡ್ ಅನ್ನುವುದೇ ಪ್ರಾಧಿಕಾರದಲ್ಲಿ ಇರುವುದಿಲ್ಲ. ಎಲ್ಲರೂ ದೊಡ್ಡ ದೊಡ್ಡ ಪ್ರಭಾವಿಗಳೇ ಇರೋದು. ನಮ್ಮ ಬಳಿ ಆರೋಪ ಸಾಬೀತು ಮಾಡುವ ಕೆಲ ದಾಖಲೆಗಳಿವೆ” ಎಂದು ತಿಳಿಸಿದರು.

“ಮುಡಾ ಪ್ರಕರಣದಲ್ಲಿ ಸ್ವಜನಪಕ್ಷಪಾತ, ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಮೂರು ನಡೆದಿದೆ. ನಮ್ಮ ಹತ್ತಿರವು ಕೆಲ ದಾಖಲೆಗಳಿವೆ. ನ್ಯಾಯಾಲಯ ತನಿಖೆಗೆ ಆದೇಶ ನೀಡಿದ ಬಳಿಕ ದಾಖಲೆಗಳನ್ನು ನೀಡುತ್ತೇವೆ. ನ್ಯಾಯಾಲಯದ ತೀರ್ಪನ್ನು ಎದುರು ನೋಡುತ್ತಿದ್ದೇವೆ” ಎಂದರು.

“12 ನಿವೇಶನಗಳನ್ನ 2003ರಲ್ಲಿ ಹಂಚಿಕೆ ಆಗಿರುವುದಕ್ಕೆ ದಾಖಲೆಗಳಿವೆ. ಅಭಿವೃದ್ಧಿ ಆಗಿರುವ ಜಾಗವನ್ನು ಇವರ ಭಾವ ತೆಗೆದುಕೊಂಡಿರುವುದೇ ಅಪರಾಧ. ಮೂಲ ವಾರಸುದಾರರು ಅಲ್ಲದವರ ಬಳಿ ಜಾಗ ತೆಗೆದುಕೊಂಡಿದ್ದಾರೆ. ಜಾಗ ಖರೀದಿ ಇಂದ ಹಿಡಿದು ಕನ್ವರ್ಷನ್​ವರೆಗೂ ಅಕ್ರಮವೇ ನಡೆದಿದೆ. ಸಿದ್ದರಾಮಯ್ಯ ಅರ್ಧ ಸತ್ಯ ಹೇಳುತ್ತಿದ್ದಾರೆ” ಎಂದು ಹೇಳಿದರು.

“ಮುಡಾ ಪ್ರಕರಣ ಬೆಳಕಿಗೆ ಬಂದ ತಕ್ಷಣ ನಗರ ಅಭಿವೃದ್ಧಿ ಸಚಿವ ಬೈರತಿ ಸುರೇಶ್ ಮೈಸೂರಿಗೆ ಹೋಗಿ ದಾಖಲೆ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಇದೆ. ತನಿಖೆ ಕೊಡುವ ಮೂರು ದಿನದ ಮುಂಚೆ ವಾರಗಟ್ಟಲೆ ಮೈಸೂರಿನಲ್ಲಿ ಕುಳಿತ್ತಿದ್ದರು. ಕೆಲವು ದಾಖಲೆಗಳನ್ನು ಇಲ್ಲದಂತೆ ಮಾಡಿದ್ದಾರೆ. ಹಳೆಯ ಅಧಿಕಾರಿಗಳನ್ನು ಕರೆಸಿ ಸಹಿ ಮಾಡಿಸಿದ್ದಾರೆ ಎಂಬ ದೂರು ನಮಗೆ ಬಂದಿತ್ತು ಹೀಗಾಗಿ ನಾವು ತನಿಖೆಗೆ ಆಗ್ರಹಿಸಿ ಬೆಂಗಳೂರಿನಿಂದ ಮೈಸೂರುವರೆಗೂ ಪಾದಯಾತ್ರೆ ಮಾಡಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...