ಚಾಮುಂಡೇಶ್ವರಿಯಲ್ಲಿ ಕೆಲವೊಮ್ಮೆ ಕೆಲಸಕ್ಕೆ ಬಾರದವರನ್ನು ಆರಿಸುತ್ತೀರಿ: ಸಿಎಂ ಸಿದ್ದರಾಮಯ್ಯ

Date:

  • ಸಿದ್ಧಲಿಂಗಪುರದಲ್ಲಿ ಕನಕ ಭವನ ನೂತನ ಕಟ್ಟಡ ಉದ್ಘಾಟಿಸಿ ಸಿಎಂ ಹೇಳಿಕೆ
  • ಸಿದ್ಧಲಿಂಗಪುರ ಜನತೆಗೆ ನಾನು ಋಣಿಯಾಗಿರುತ್ತೇನೆ ಎಂದು ಸಿದ್ದರಾಮಯ್ಯ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಐದು ಬಾರಿ ಗೆಲ್ಲಿಸಿದ್ದೀರಿ. ಆದರೆ ಮೂರು ಬಾರಿ ಸೋಲಿಸಿದ್ದೂ ಇದೆ. ತಮಾಷೆಗೆ ಈ ಮಾತು ಹೇಳಿದ್ದೇನೆ. ರಾಜಕೀಯದಲ್ಲಿ ಗೆಲುವು, ಸೋಲು ಸಾಮಾನ್ಯ. ಚುನಾವಣೆಗೆ ನಿಂತವರೆಲ್ಲ ಗೆಲ್ಲಲು ಆಗುವುದಿಲ್ಲ. ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಸೋಲುವ ವಾಸನೆ ಕಂಡು ದೂರದ ಬಾದಾಮಿಯಿಂದ ಸ್ಪರ್ಧಿಸಿದೆ. ಅಲ್ಲಿಯ ಜನ ಕೈಹಿಡಿದರು, ನೀವು ಕೈಬಿಟ್ಟಿರಿ. ಕೆಲವೊಮ್ಮೆ ಕೆಲಸಕ್ಕೆ ಬಾರದವರನ್ನು ಆರಿಸುತ್ತೀರಿ. ಏನೇ ಆಗಲಿ ಗೆಲ್ಲಿಸಿದವರಿಗೂ ಮತ್ತು ಸೋಲಿಸಿದವರಿಗೂ ಧನ್ಯವಾದ ತಿಳಿಸುವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಸಿದ್ಧಲಿಂಗಪುರದಲ್ಲಿ ಆಯೋಜಿಸಿರುವ ಬೀರೇಶ್ವರ ಕುರುಬರ ಸಂಘ (ರಿ) ವತಿಯಿಂದ ಕನಕ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ನನ್ನ ರಾಜಕೀಯ ಜೀವನದಲ್ಲಿ ಸಿದ್ಧಲಿಂಗಪುರ ಜನತೆ ನನ್ನ ಪರವಾಗಿ ನಿಂತಿದೆ. ನಾನು ಈ ಗ್ರಾಮಕ್ಕೆ ಋಣಿಯಾಗಿದ್ದೇನೆ” ಎಂದರು.

“ಸಮಾಜದಲ್ಲಿ ಸಂಘಟನೆ ಬಹಳ ಮುಖ್ಯ. ಎಲ್ಲ ಜನಾಂಗದವರಿಗೂ ಸಂಘಟನೆ ಅಗತ್ಯವಾಗಿ ಬೇಕು. ಬರೀ ಕುರುಬ ಸಮುದಾಯ ಅಂತಲ್ಲ, ಎಲ್ಲರೂ ಸಂಘಟನೆಯಾದಾಗ ತಮ್ಮ ಹಕ್ಕುಗಳನ್ನು ಕೇಳಿ ಪಡೆಯಬಹುದು. ಜನರ ಪರವಾಗಿ ಧ್ವನಿ ಎತ್ತಲು ಸಂಘಟನೆ ಬೇಕು. ಈ ನಿಟ್ಟಿನಲ್ಲಿ ನಮ್ಮದೇ ಆದಂತಹ ಒಂದು ಕಟ್ಟಡ ಕಟ್ಟಿಕೊಂಡು ಸಂಘಟಿತರಾಗಿದ್ಡಿದೀರಿ ಬಹಳ ಸಂತೋಷ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

“ದಾನ ಇತ್ತೀಚೆಗೆ ಕಡಿಮೆ ಆಗಿದೆ. ಶಾಲೆ, ಆಸ್ಪತ್ರೆ, ಸಂಘ ಸಂಸ್ಥೆಗಳಿಗೆ ಮೊದಲು ದಾನವಾಗಿ ಜಾಗ ಕೊಡುತ್ತಿದ್ದರು. ಸಿದ್ಧಲಿಂಗಪುರದ ಮಾದೇಗೌಡರು ಬೆಲೆ ಬಾಳುವ ತಮ್ಮ ಜಾಗವನ್ನು ಕನಕ ಭವನ ನಿರ್ಮಾಣಕ್ಕೆ ಕೊಟ್ಟಿದ್ದಾರೆ. ಅದು ಅವರ ದೊಡ್ಡಗುಣ ಎಂದು ಭಾವಿಸುವೆ. ಎಲ್ಲರಿಗೂ ದಾನ ಕೊಡಬೇಕು ಎನ್ನುವ ಯೋಚನೆ ಬರಲ್ಲ. ಮೀಗಿಲಾಗಿ ಸ್ವಂತ ಖರ್ಚಿನಲ್ಲೇ ಜಾಗವನ್ನು ನೋಂದಣಿ ಕೂಡ ಮಾಡಿಸಿಕೊಟ್ಟಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಇಂದು ಬೆಳಿಗ್ಗೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. 1.26 ಕೋಟಿ ಕುಟುಂಬದ ಯಜಮಾನಿಗೆ ತಿಂಗಳಿಗೆ 2000 ರೂ. ಸರ್ಕಾರ ಕೊಡುತ್ತಿದೆ. ಬೆಲೆ ಏರಿಕೆ ಆಗಿದ್ದರಿಂದ ನಮ್ಮ ಪಕ್ಷ ಈ ತೀರ್ಮಾನ ಮಾಡಿತ್ತು. ಜನರ ಕೈಯಲ್ಲಿ ದುಡ್ಡು ಇದ್ದರೆ ಕೊಂಡುಕೊಳ್ಳುತ್ತಾರೆ. ಈ ಒಂದೇ ಕಾರ್ಯಕ್ರಮಕ್ಕೆ 32 ಸಾವಿರ ಕೋಟಿ ರೂ. ವರ್ಷಕ್ಕೆ ಖರ್ಚಾಗುತ್ತಿದೆ. ಇಷ್ಟು ದೊಡ್ಡ ಮೊತ್ತದ ಯೋಜನೆ ಕರ್ನಾಟಕದಲ್ಲಿ ಈವರೆಗೂ ಆಗಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...