ಒಂದು ದೇಶ-ಒಂದು ಚುನಾವಣೆ | ಒಕ್ಕೂಟ ವ್ಯವಸ್ಥೆ ಬಗ್ಗೆ ಕೇಂದ್ರಕ್ಕೆ ಅರಿವಿಲ್ಲ: ಸಚಿವ ಮಹದೇವಪ್ಪ ಕಿಡಿ

Date:

ನಮ್ಮ ದೇಶದಲ್ಲಿರುವುದು ಒಕ್ಕೂಟ ವ್ಯವಸ್ಥೆ ಎಂಬ ಸಂಗತಿಯನ್ನು ಸಂಪೂರ್ಣವಾಗಿ ಮರೆತಿರುವ ಕೇಂದ್ರ ಸರ್ಕಾರವು ಒಂದು ದೇಶ-ಒಂದು ಚುನಾವಣೆ ಮಾಡಲು ಹೊರಟಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, “ಆಡಳಿತಾತ್ಮಕವಾಗಿ ಎಲ್ಲ ವಿಧದಲ್ಲೂ ವೈಫಲ್ಯ ಹೊಂದಿರುವ ಕೇಂದ್ರ ಸರ್ಕಾರ, ಕಳೆದ ಹತ್ತು ವರ್ಷಗಳಿಂದಲೂ ಚುನಾವಣೆಗಳನ್ನು ಮಾಡುವುದರಲ್ಲಿ ಮತ್ತು ಕೋಮು ದ್ವೇಷದ ಮೂಲಕ ದೇಶದ ಆಂತರಿಕ ವ್ಯವಸ್ಥೆಯನ್ನು ಅಸ್ಥಿರಗೊಳಿಸುವುದರಲ್ಲಿ ತೋರಿಸುವ ಆಸಕ್ತಿಯನ್ನು, ಬೇರಾವ ಒಳ್ಳೆಯ ವಿಷಯದಲ್ಲಿ ತೋರಿಸಿಲ್ಲ” ಎಂದು ಟೀಕಿಸಿದ್ದಾರೆ.

“ನೆಲ ಜಲ ಮತ್ತು ಭಾಷೆಯ ವಿಷಯದಲ್ಲಿ ಸಾಕಷ್ಟು ವೈವಿಧ್ಯಮಯ ಸನ್ನಿವೇಶವನ್ನು ಹೊಂದಿರುವ ರಾಜ್ಯಗಳು ಭಾಷಾವಾರು ಪ್ರಾಂತ್ಯಗಳಾಗಿ ವಿಂಗಡನೆ ಆದ ಮೇಲೆ ಒಕ್ಕೂಟ ವ್ಯವಸ್ಥೆಯ ಭಾಗವಾಗಿ ತಮ್ಮದೇ ಆದ ಕೆಲವೊಂದು ಅಧಿಕಾರವನ್ನು ಪಡೆದಿವೆ. ಹೀಗಿರುವ ರಾಜ್ಯಗಳಿಗೆ ಇರುವಂತಹ ಚುನಾವಣಾ ವ್ಯಾಪ್ತಿಯನ್ನು ಬದಲಿಸುವಂತಹ ಕೆಲಸ ಮಾಡುತ್ತಿರುವ ಕೇಂದ್ರ ಸರ್ಕಾರ ರಾಜ್ಯದ ಅಸ್ತಿತ್ವವನ್ನು ವಿಪರೀತವಾಗಿ ಅವಮಾನಿಸುತ್ತಿದೆ” ಎಂದು ಹರಿಹಾಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣಾ ವ್ಯವಸ್ಥೆಯಲ್ಲಿ ಅಕ್ರಮಗಳು ನಿಲ್ಲಬೇಕಾದರೆ, ಆಯಾ ರಾಜ್ಯಗಳೇ ಚುನಾವಣಾ ವ್ಯವಸ್ಥೆ ನಡೆಯಲು ಹಣಕಾಸನ್ನು ಒದಗಿಸಬೇಕು. ಆಗ ಮಾತ್ರ ಚುನಾವಣಾ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆ ತರಬಹುದು. ಈ ದಿಸೆಯಲ್ಲಿ ಕೇಂದ್ರ ಸರ್ಕಾರ ಯೋಚಿಸಬೇಕೇ ವಿನಃ ಒಂದು ದೇಶ-ಒಂದು ಚುನಾವಣೆ ಅಲ್ಲ” ಎಂದಿದ್ದಾರೆ.

“ಮುಖ್ಯವಾಗಿ ನೋಡುವುದಾದರೆ ಕಳೆದ ಬಾರಿ ಸೋಲುವ ಭಯದಿಂದ ಲೋಕಸಭೆ ಚುನಾವಣೆಯನ್ನೇ ಏಳು ಹಂತದಲ್ಲಿ ನಡೆಸಿದ ಇವರು, ಜಮ್ಮು ಮತ್ತು ಕಾಶ್ಮೀರ ಚುನಾವಣೆಯನ್ನು ಒಟ್ಟಾಗಿ ನಡೆಸಿದರೆ ಎಲ್ಲಿ ಅದರ ಮೇಲಿನ ನಿಯಂತ್ರಣ ಕೈತಪ್ಪುವುದೋ ಎಂದು ಹೆದರಿ ಪ್ರತ್ಯೇಕವಾಗಿ ಈ ರಾಜ್ಯಗಳ ಚುನಾವಣೆ ನಡೆಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಒಂದು ದೇಶ-ಒಂದು ಚುನಾವಣೆ ಎನ್ನುವುದು ಒಂದು ಹಾಸ್ಯಾಸ್ಪದ ಸಂಗತಿಯಾಗಿದ್ದು, ಸ್ಪಷ್ಟತೆ ಇಲ್ಲದ ಮತ್ತು ರಾಜ್ಯ ವಿರೋಧಿ ಆಗಿರುವ ಇವರ ಧೋರಣೆಯ ಬಗ್ಗೆ ದೇಶದ ವಿಪಕ್ಷಗಳು ಗಂಭೀರವಾಗಿ ಹೋರಾಟ ಮಾಡುವಂತಾಗಬೇಕು ಮತ್ತು ರಾಜ್ಯ ನಿಧಿ ಮೂಲಕ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಎಲ್ಲರೂ ಒತ್ತಾಯಿಸಬೇಕು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...