ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಪೇದೆ ಸಾಕು; ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

Date:

ಹೆಚ್ ಡಿ ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ, ‘ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ’ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

“ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು. ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ” ಎಂದು ಹೇಳಿದರು.

“ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು” ಎಂದು ಟೀಕಿಸಿದರು.

“ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು, ಆದರೆ ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, “ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು , ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...