ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ವರ್ಷ: ಕನ್ನಡಿಗರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

Date:

ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಒಂದು ವರ್ಷವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡಿಗರಿಗೆ ಧನ್ಯವಾದ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಟ್ಟು ಬಹುಮತ ಕೊಟ್ಟಿದ್ದು ಮತದಾರರ ಪ್ರಜ್ಞಾವಂತಿಕೆ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, “ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ: ಕಾಂಗ್ರೆಸ್ ಪ್ರಶ್ನೆ

“ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ” ಎಂದು ಆರೋಪಿಸಿದ್ದಾರೆ.

“ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಬಿಜೆಪಿಯ ಕೋಮು ಧ್ರುವೀಕರಣ ತಂತ್ರ ಫಲಿಸುತ್ತಾ? ಕಾಂಗ್ರೆಸ್ ಗ್ಯಾರಂಟಿ ಗೆಲ್ಲುತ್ತಾ?

“ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ” ಎಂದು ಮನವಿ ಮಾಡಿದ್ದಾರೆ.

“ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...