ಹೊನವಾಡದ 11 ಎಕರೆ‌ ಮಾತ್ರ ವಕ್ಫ್ ಆಸ್ತಿ, ರೈತರ ಜಮೀನು ಸುರಕ್ಷಿತ: ಮೂವರು ಸಚಿವರಿಂದ ಸ್ಪಷ್ಟನೆ

Date:

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು ಯಾವ ರೈತರಿಗೂ ನೋಟಿಸ್ ಕೊಟ್ಟಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ ವಿಚಾರದಲ್ಲಿ ಬಿಜೆಪಿ ಬೇಕೆಂದೇ ರಾಜಕೀಯ ಮಾಡಿ, ಇದನ್ನು ವಿವಾದ ಮಾಡುತ್ತಿದೆ ಎಂದು ಸರಕಾರದ ಪರವಾಗಿ ಮೂವರು ಸಚಿವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಈ ಸಂಬಂಧ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕೃಷ್ಣ ಬೈರೇಗೌಡ ಮಾತನಾಡಿ, “ವಿಜಯಪುರ ಜಿಲ್ಲೆಯಲ್ಲಿ ಒಂದು ಕಾಲಕ್ಕೆ 14,201.32 ಎಕರೆ ವಕ್ಫ್ ಮಂಡಳಿಯದಾಗಿತ್ತು. ಈ ಪೈಕಿ ಭೂ ಸುಧಾರಣಾ ಕಾಯ್ದೆಯಡಿ 11,835.29 ಎಕರೆ ಮತ್ತು ಇನಾಂ ರದ್ದತಿ ಕಾಯ್ದೆಯಡಿ 1,459.26 ಎಕರೆಯನ್ನು ರೈತರಿಗೆ ಮಂಜೂರು ಮಾಡಲಾಗಿದೆ. 137 ಎಕರೆಯನ್ನು ವಿವಿಧ ಯೋಜನೆಗಳಿಗೆ ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಮಿಕ್ಕ 773 ಎಕರೆ ಮಾತ್ರ ವಕ್ಫ್ ಸಂಸ್ಥೆಗಳ ಅಡಿಯಲ್ಲಿದೆ. ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ ರೈತರಿಗೆ ವಕ್ಫ್ ಆಸ್ತಿಯೆಂದು ಯಾವುದೇ ನೋಟಿಸ್ ನೀಡಿಲ್ಲ. ಈ ಸಂಬಂಧ ಸಚಿವ ಎಂ ಬಿ ಪಾಟೀಲ ಅವರೂ ಈಗಾಗಲೇ ಸ್ಪಷ್ಟಪಡಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1974ರ ಗೆಜೆಟ್ ಅಧಿಸೂಚನೆಯಲ್ಲಿ ವಿಜಯಪುರದ ಮಹಾಲಬಾಗಾಯತದ ಪಕ್ಕದಲ್ಲಿ ಬ್ರ್ಯಾಕೆಟ್ ಒಳಗೆ ವಕ್ಫ್ ಆಸ್ತಿಯಡಿಯಲ್ಲಿ ಹೊನವಾಡ ಎಂದು ತಪ್ಪಾಗಿ ನಮೂದಿಸಲಾಗಿತ್ತು.1977ರಲ್ಲಿ ವಕ್ಫ್ ಮಂಡಳಿಯೇ ತನ್ನ ತಪ್ಪನ್ನು ಸರಿಪಡಿಸಿದೆ. ಇದು ವಿವಾದವೇ ಅಲ್ಲ. ಬಿಜೆಪಿಯಲ್ಲಿ ವಿಜಯೇಂದ್ರ ಮತ್ತು ಬಸವರಾಜ ಪಾಟೀಲ ಯತ್ನಾಳ ನಡುವೆ ನಡೆಯುತ್ತಿರುವ ತಿಕ್ಕಾಟದಿಂದ ಇದು ರಾಜಕೀಯ ಬಣ್ಣ ಪಡೆದುಕೊಂಡಿದೆ” ಎಂದು ಸ್ಪಷ್ಟಪಡಿಸಿದರು.

“ಇಂಡಿ ತಾಲ್ಲೂಕಿನಲ್ಲಿ ಮಾತ್ರ ಅಲ್ಲಿಯ ತಹಸೀಲ್ದಾರರು ಯಾವುದೇ ನೋಟಿಸ್ ನೀಡದೆ, 41 ಆಸ್ತಿಗಳನ್ನು ಇಂದೀಕರಣ ಮಾಡಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರೈತರು 1974ಕ್ಕಿಂತ ಮೊದಲಿನ ದಾಖಲೆ ಕೊಟ್ಟರೆ ಅಂತಹ ಆಸ್ತಿಗಳನ್ನು ವಕ್ಫ್ ಅಧಿಸೂಚನೆಯಿಂದ ಕೈಬಿಡಲಾಗುವುದು. ಬಾಧಿತ ರೈತರು ಉಪವಿಭಾಗಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರೆ, ಅವರು ಪರಿಶೀಲಿಸಿ, ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ” ಎಂದು ಕೃಷ್ಣ ಬೈರೇಗೌಡ ಹೇಳಿದರು.

ಇದಕ್ಕೆ ಪೂರಕವಾಗಿ ಮಾತನಾಡಿದ ಸಚಿವ ಎಂ ಬಿ ಪಾಟೀಲ, “ಈ ಪ್ರಕರಣ ಕುರಿತು ವಿಚಾರಣೆ ನಡೆಸಲು ಜಿಲ್ಲಾಧಿಕಾರಿಗಳ ನೇತೃತ್ವದ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ವಿಜಯಪುರ ಪ್ರಕರಣದಲ್ಲಿ 1964ರಿಂದ 1973ರವರೆಗಿನ ಕಂದಾಯ ಮತ್ತು ವಕ್ಫ್ ದಾಖಲೆಗಳನ್ನು ತೌಲನಿಕವಾಗಿ ಪರಿಶೀಲಿಸಲು ಆದೇಶ ನೀಡಲಾಗಿದೆ” ಎಂದರು.

“ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಗಳನ್ನು ಗಮನದಲ್ಲಿ ಇಟ್ಟುಕೊಂಡು ಜನರ ನಡುವೆ ಗೊಂದಲ ಸೃಷ್ಟಿಸುವ ಕೆಲಸ ಬಿಜೆಪಿ ಮುಖಂಡರಿಂದ ಆಗುತ್ತಿದೆ. ಇದರಲ್ಲಿ ಧ್ರುವೀಕರಣದ ಸಂಚಿದೆ. ಸತ್ಯ ಶೋಧನೆಗೆ ಬಿಜೆಪಿ ಸಮಿತಿ ಬಂದರೆ ಕಾಫಿ- ಟೀ ಕೊಟ್ಟು ಪೂರ್ಣ ಮಾಹಿತಿ ನೀಡಲು ಜಿಲ್ಲಾಡಳಿತಕ್ಕೂ ಸೂಚಿಸಲಾಗಿದೆ‌” ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಕ್ಫ್ ಸಚಿವ ಜಮೀರ್ ಅಹಮದ್ ಮಾತನಾಡಿ, “ನಮಗೆ ರೈತರ ಯಾವ ಜಮೀನೂ ಬೇಡ. ನಾನೂ ರೈತನ ಮಗನೇ. ವಕ್ಫ್ ಆಸ್ತಿಗೆ ಇಂದೀಕರಣ ಮಾಡಿಕೊಡಿ ಎಂದಷ್ಟೇ ಕೇಳಿರುವುದು.‌ ಇಷ್ಟಕ್ಕೂ ಹೊನವಾಡದಲ್ಲಿ 11 ಎಕರೆ ಮಾತ್ರ ವಕ್ಫ್ ಮಂಡಳಿಯದೇ ವಿನಾ 1,200 ಎಕರೆ ಅಲ್ಲ. ಅದೆಲ್ಲ‌ ರೈತರದೇ ಆಗಿದೆ” ಎಂದು ಸ್ಪಷ್ಟಪಡಿಸಿದರು.

“ವಿಜಯಪುರದಲ್ಲಿ 1,345 ಎಕರೆ ವಕ್ಫ್ ಆಸ್ತಿ ಒತ್ತುವರಿಯಾಗಿದ್ದು, ಇದು ಯಾರಿಗೂ ಅಧಿಕೃತವಾಗಿ ಹಂಚಿಕೆ ಆಗಿಲ್ಲ. ಇದರಲ್ಲಿಯೂ ಸುಮಾರು 26 ಎಕರೆ ಜಾಗಕ್ಕೆ ಸಂಬಂಧಿಸಿದಂತೆ ವಿವಾದ ಕೋರ್ಟ್ ನಲ್ಲಿದೆ. ಇದು ಬಿಟ್ಟರೂ 1,319 ಎಕರೆ ವಕ್ಪ್ ಆಸ್ತಿ ಅಕ್ರಮವಾಗಿ ಬೇರೆ ವ್ಯಕ್ತಿ/ಸಂಸ್ಥೆಗಳ ವಶದಲ್ಲಿ ಇದ್ದು ಅದನ್ನು ಸರಿ‌ ಮಾಡಿಕೊಡಲು ಕೇಳಲಾಗಿದೆ. ಇದು ಬಿಟ್ಟರೆ ನಮಗೆ ಬೇರೆ ಯಾರ ಆಸ್ತಿಯೂ‌ ಬೇಡ” ಎಂದು ಸ್ಪಷ್ಟಪಡಿಸಿದರು.

“ವಿಜಯಪುರದಲ್ಲಿ ವಕ್ಫ್ ಅದಾಲತ್ ನಡೆಸಿದಾಗ ಅಲ್ಲಿನ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರಿಗೂ ಆಹ್ವಾನ ನೀಡಲಾಗಿತ್ತು. ಅಂದು ಸಭೆಗೆ ಬಾರದ ಅವರು ಈಗ ಬೇಕೆಂದೇ ಗೊಂದಲ ಸೃಷ್ಟಿಸುತ್ತಿದ್ದಾರೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...