ಆಪರೇಷನ್ ಸಿಂಧೂರ: ಸಂಸದರ ನಿಯೋಗಗಳಿಗೆ 13.11 ಕೋಟಿ ರೂ. ಖರ್ಚು!

Date:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ, ಪಾಕಿಸ್ತಾನದಲ್ಲಿರುವ ಭಯೋತ್ಪಾದನೆ ನೆಲೆಗಳ ಮೇಲೆ ಭಾರತ ಸರ್ಕಾರವು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತು. ಪಾಕ್-ಭಾರತ ಸಂಘರ್ಷವು ಕೊನೆಗೊಂಡ ನಂತರದಲ್ಲಿ, ಭಾರತವು ಭಯೋತ್ಪಾದನೆ ವಿರುದ್ಧ ತನ್ನ ನಿಲುವನ್ನು ಮಿತ್ರರಾಷ್ಟ್ರಗಳಿಗೆ ಮನವರಿಕೆ ಮಾಡಲು 7 ನಿಯೋಗಗಳನ್ನು ವಿದೇಶಗಳಿಗೆ ಕಳಿಸಿತು. ಮೇ 23ರಂದು ಆರಂಭವಾದ ನಿಯೋಗಗಳ ವಿದೇಶಿ ಪ್ರಯಾಣಕ್ಕೆ 13.11 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಇಂಗ್ಲಿಷ್‌ ಸುದ್ದಿ ಸಂಸ್ಥೆ ‘ದಿ ಕ್ವಿಂಟ್‌’ ಸಲ್ಲಿಸಿದ್ದ ಮಾಹಿತಿ ಹಕ್ಕು ಅರ್ಜಿ (ಆರ್‌ಟಿಐ)ಗೆ ಉತ್ತರಿಸಿರುವ ವಿದೇಶಾಂಗ ಸಚಿವಾಲಯ (ಎಂಇಎ), ಸಂಸದರ 7 ನಿಯೋಗಗಳ ಪ್ರಯಾಣಕ್ಕಾಗಿ 13,11,16,647 ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ದೃಢಪಡಿಸಿದೆ. ಆದಾಗ್ಯೂ, ನಿಯೋಗದಲ್ಲಿ ಸಂಸದರ ತಲಾ ವೆಚ್ಚದ ವಿವರ ಅಥವಾ ಪ್ರತ್ಯೇಕ ವೆಚ್ಚದ ಮಾಹಿತಿಯನ್ನು ಬಹಿರಂಗಪಡಿಸಲು ಎಂಇಎ ನಿರಾಕರಿಸಿದೆ.

ಆರ್‌ಟಿಐನಲ್ಲಿ ಕೇಳಲಾಗಿದ್ದ ಪ್ರಶ್ನೆಗಳೇನು? ಮತ್ತು ಎಂಇಎ ಉತ್ತರಗಳೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ಸಂಸದರ ವೆಚ್ಚ, ನಿಯೋಗವಾರು ವೆಚ್ಚದ ವಿವರಗಳು (ಪ್ರಯಾಣ, ವಾಸ್ತವ್ಯ, ಇತರ ವೆಚ್ಚಗಳು),  ನಿಯೋಗಗಳ ಖರ್ಚು ಮಾದರಿಗಳು ಹಾಗೂ ನಿಯೋಗದ ಪ್ರವಾಸದಿಂದಾದ ರಾಜತಾಂತ್ರಿಕ ಲಾಭಗಳು ಸೇರಿದಂತೆ ಒಟ್ಟು 15 ಪ್ರಶ್ನೆಗಳನ್ನು ‘ದಿ ಕ್ವಿಂಟ್‌’ ಕೇಳಿತ್ತು.

ಆದಾಗ್ಯೂ, ಎಂಇಎ ಪ್ರತಿ ಸಂಸದರ ವೆಚ್ಚವನ್ನು ಒದಗಿಸಲು ಅಥವಾ ವೆಚ್ಚದ ವಿವರಗಳನ್ನು ನೀಡಲು ನಿರಾಕರಿಸಿದೆ. ಪ್ರತಿ ನಿಯೋಗಕ್ಕೆ ವ್ಯಯಿಸಲಾದ ಒಟ್ಟು ಅಂಕಿಅಂಶವನ್ನು ಮಾತ್ರವೇ ನೀಡಿದೆ.

  • ರವಿಶಂಕರ್ ಪ್ರಸಾದ್ ನಿಯೋಗ (ಯುರೋಪ್): 3.44 ಕೋಟಿ ರೂ.
  • ಬೈಜಯಂತ್ ಪಾಂಡ ನಿಯೋಗ (ಪಶ್ಚಿಮ ಏಷ್ಯಾ ಮತ್ತು ಉತ್ತರ ಆಫ್ರಿಕಾ): 1.35 ಕೋಟಿ ರೂ.
  • ಶಶಿ ತರೂರ್ ನಿಯೋಗ (ಅಮೆರಿಕ): 2.08 ಕೋಟಿ ರೂ.
  • ಕನಿಮೋಳಿ ಕರುಣಾನಿಧಿ ನಿಯೋಗ (ಯುರೋಪ್): 1.90 ಕೋಟಿ ರೂ.
  • ಶ್ರೀಕಾಂತ್ ಏಕನಾಥ್ ಶಿಂಧೆ ನಿಯೋಗ (ಆಫ್ರಿಕಾ): 1.53 ಕೋಟಿ ರೂ.
  • ಸಂಜಯ್ ಕುಮಾರ್ ಝಾ ನಿಯೋಗ (ಪೂರ್ವ ಏಷ್ಯಾ): 1.48 ಕೋಟಿ ರೂ.
  • ಸುಪ್ರಿಯಾ ಸುಳೆ ನಿಯೋಗ (ಆಫ್ರಿಕಾ ಮತ್ತು ಪಶ್ಚಿಮ ಏಷ್ಯಾ): 1.31 ಕೋಟಿ ರೂ.

ರವಿಶಂಕರ್ ಪ್ರಸಾದ್ ನೇತೃತ್ವದ ನಿಯೋಗವೊಂದಕ್ಕೆ ಒಟ್ಟು ಖರ್ಚಿನಲ್ಲಿ ಸುಮಾರು 30%ರಷ್ಟು ಹಣವನ್ನು ವೆಚ್ಚ ಮಾಡಲಾಗಿದೆ. ಈ ನಿಯೋಗವು ಫ್ರಾನ್ಸ್, ಇಟಲಿ, ಡೆನ್ಮಾರ್ಕ್, ಯುಕೆ, ಬೆಲ್ಜಿಯಂ, ಜರ್ಮನಿ ಹಾಗೂ ಯುರೋಪಿಯನ್ ಒಕ್ಕೂಟದ ರಾಷ್ಟ್ರಗಳಿಗೆ ಪ್ರಯಾಣಿಸಿತ್ತು.

ಈ ಲೇಖನ ಓದಿದ್ದೀರಾ?: ಪಾಕಿಸ್ತಾನಕ್ಕೆ ಸಾಲ ನೀಡಲು ಅಂತಾರಾಷ್ಟ್ರೀಯ ವಿತ್ತ ನಿಧಿ ಹೇರಿದ 11 ಷರತ್ತುಗಳೇನು?

ರಾಜತಾಂತ್ರಿಕ ಪ್ರವಾಸ vs ರಾಜತಾಂತ್ರಿಕ ಲಾಭಗಳು

ಯಾವ ರಾಷ್ಟ್ರಗಳಿಗೆ ನಿಯೋಗಗಳು ಭೇಟಿ ನೀಡಿದ್ದವು ಮತ್ತು ಆ ನಿಯೋಗಗಳ ಒಟ್ಟು ಖರ್ಚಿನ ಪ್ರಮಾಣದ ಹೊರತಾಗಿ, ಪ್ರವಾಸದಿಂದಾದ ರಾಜತಾಂತ್ರಿಕ ಲಾಭ/ಫಲಿತಾಂಶಗಳ ಕುರಿತು ಸಚಿವಾಲಯವು ಉತ್ತರ ನೀಡಿಲ್ಲ. ಆಪರೇಷನ್ ಸಿಂಧೂರ್ ನಂತರ ನಿಯೋಗಗಳು ತಮ್ಮ ಘೋಷಿತ ಉದ್ದೇಶವನ್ನು ಸಾಧಿಸಿವೆಯೇ ಎಂಬ ಬಗ್ಗೆ ಸಚಿವಾಲಯ ಯಾವುದೇ ಮೌಲ್ಯಮಾಪನ ನೀಡಿಲ್ಲ.

ಆದಾಗ್ಯೂ, ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿಗಳು ಮತ್ತು ವರದಿಗಳು ಕೆಲವು ಅಂಶಗಳತ್ತ ಗಮನ ಸೆಳೆಯುತ್ತವೆ;

  • ಭೇಟಿ ನೀಡಿದ ದೇಶಗಳು ಭಾರತದ ನಿಲುವನ್ನು ಸಮ್ಮತಿಸುವ ಯಾವುದೇ ಜಂಟಿ ಹೇಳಿಕೆ ನೀಡಿಲ್ಲ.
  • ಹಲವಾರು ದೇಶಗಳು ತಮ್ಮ ಹಿಂದಿನ ತಟಸ್ಥ ನಿಲುವನ್ನೇ ಕಾಯ್ದುಕೊಂಡವು. ಸಂಯಮ ಮತ್ತು ಮಾತುಕತೆಗೆ ಕರೆ ನೀಡುವ ತಮ್ಮ ನಿರ್ಧಾರವನ್ನು ಪುನರುಚ್ಚರಿಸಿದವು.
  • ನಿಯೋಗಗಳ ಭೇಟಿಯು ಹೆಚ್ಚಾಗಿ ಸೌಜನ್ಯ ಸಭೆಗಳು, ಫೋಟೋ ತೆಗೆದುಕೊಳ್ಳುವುದು ಹಾಗೂ ಮುಚ್ಚಿದ ಬಾಗಿಲಿನ ಸಭೆಗಳಿಗೆ ಸೀಮಿತವಾಗಿ ಉಳಿದಿದೆ.
  • ಗಮನಾರ್ಹವಾಗಿ, ಸಾಂಪ್ರದಾಯಿಕವಾಗಿ ಭಾರತದ ಮಿತ್ರ ರಾಷ್ಟ್ರಗಳು ಕೂಡ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಸ್ಪಷ್ಟ ರಾಜತಾಂತ್ರಿಕ ಬೆಂಬಲವನ್ನು ವ್ಯಕ್ತಪಡಿಸಲಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...