ಬಿಹಾರದ ಜಾತಿ ಗಣತಿಯನ್ನು ಸ್ವಾಗತಿಸಿದ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’

Date:

ಬಿಹಾರ ಸರ್ಕಾರವು ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡಿರುವುದನ್ನು ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಸ್ವಾಗತಿಸಿದ್ದು, ಆಡಳಿತಾರೂಢ ಬಿಜೆಪಿಯು ಇಂತಹ ಮಹತ್ತರ ಯೋಜನೆಯಿಂದ ಓಡಿಹೋಗುತ್ತಿದೆ ಎಂದು ಸೋಮವಾರ ಆರೋಪಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, “ಬಿಹಾರದ ಜಾತಿ ಗಣತಿಯು ಒಬಿಸಿಗಳು, ಎಸ್‌ಸಿ ಮತ್ತು ಎಸ್‌ಟಿ ಜನಸಂಖ್ಯೆಯ ಶೇ. 84 ರಷ್ಟಿದೆ ಎಂದು ಬಹಿರಂಗಪಡಿಸಿದೆ. ಕೇಂದ್ರ ಸರ್ಕಾರದ 90 ಕಾರ್ಯದರ್ಶಿಗಳಲ್ಲಿ, ಕೇವಲ 3 ಒಬಿಸಿಗಳು ಮಾತ್ರ ಇದ್ದಾರೆ. ಅವರು ಭಾರತದ ಬಜೆಟ್‌ನ ಶೇ. 5 ರಷ್ಟನ್ನು ಮಾತ್ರ ನಿರ್ವಹಿಸುತ್ತಾರೆ. ಆದ್ದರಿಂದ, ಭಾರತದ ಜಾತಿಯ ಅಂಕಿಅಂಶಗಳನ್ನು ತಿಳಿದುಕೊಳ್ಳಲು ಜಾತಿ ಗಣತಿ ಮುಖ್ಯವಾಗಿದೆ. ಹೆಚ್ಚಿನ ಜನಸಂಖ್ಯೆ, ಹೆಚ್ಚಿನ ಹಕ್ಕುಗಳು – ಇದು ನಮ್ಮ ಪ್ರತಿಜ್ಞೆ” ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಕೂಡ ಹೊಸ ಜಾತಿ ಗಣತಿ ಮತ್ತು ಯುಪಿಎ-2 ಅಡಿಯಲ್ಲಿ ನಡೆದ ಇದೇ ರೀತಿಯ ಕಸರತ್ತಿನ ಅಂಕಿಅಂಶವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಬಿಹಾರದಲ್ಲಿ ಈಗಷ್ಟೆ ಜಾತಿ ಗಣತಿಯನ್ನು ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ಈ ಉಪಕ್ರಮವನ್ನು ಸ್ವಾಗತಿಸಲಿದ್ದು, ಕೇಂದ್ರ ಸರ್ಕಾರವು ರಾಷ್ಟ್ರೀಯ ಜಾತಿಗಣತಿಯನ್ನು ಶೀಘ್ರವಾಗಿ ನಡೆಸಬೇಕೆಂಬ ತನ್ನ ಬೇಡಿಕೆಯನ್ನು ಕಾಂಗ್ರೆಸ್‌ ಪುನರುಚ್ಚರಿಸುತ್ತದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಹಿರಂಗಗೊಂಡ ಬಿಹಾರದ ಜಾತಿಗಣತಿ ವರದಿ: ಯಾವ್ಯಾವ ಸಮುದಾಯ ಎಷ್ಟೆಷ್ಟು ಗೊತ್ತೆ?

‘ಯುಪಿಎ-2 ಸರ್ಕಾರವು ವಾಸ್ತವವಾಗಿ ಈ ಜಾತಿಯ ಜನಗಣತಿಯನ್ನು ಪೂರ್ಣಗೊಳಿಸಿದೆ. ಆದರೆ ಅದರ ಫಲಿತಾಂಶಗಳನ್ನು ಮೋದಿ ಸರ್ಕಾರವು ಪ್ರಕಟಿಸಲಿಲ್ಲ. ಸಾಮಾಜಿಕ ಸಬಲೀಕರಣ ಕಾರ್ಯಕ್ರಮಗಳಿಗೆ ದೃಢವಾದ ಅಡಿಪಾಯವನ್ನು ಒದಗಿಸಲು ಮತ್ತು ಸಾಮಾಜಿಕ ನ್ಯಾಯವನ್ನು ಆಳಗೊಳಿಸಲು ಇಂತಹ ಜನಗಣತಿಯು ಅತ್ಯಗತ್ಯವಾಗಿದೆ ಎಂದು ಜೈರಾಮ್‌ ರಮೇಶ್ ತಿಳಿಸಿದ್ದಾರೆ.

ಬಿಜೆಪಿ ಮತ್ತು ಪ್ರಧಾನಿ ಜಾತಿಯ ಗಣತಿ ನಡೆಸದೆ ಓಡಿ ಹೋಗುತ್ತಿದ್ದಾರೆ ಎಂದು ಎಎಪಿಯ ಸಂಜಯ್ ಸಿಂಗ್ ಆರೋಪಿಸಿದರು.

ಬಿಜೆಪಿಯವರು ಯಾವಾಗಲೂ ಒಬಿಸಿ, ದಲಿತ, ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳ ವಿರೋಧಿಗಳು. ಆದ್ದರಿಂದ ಜಾತಿಯ ಗಣತಿಯಿಂದ ದೂರ ಓಡುತ್ತಿದ್ದಾರೆ. ದೇಶಾದ್ಯಂತ ಜಾತಿಗಣತಿ ನಡೆಯಬೇಕು. ನೀವು ದೇಶದಲ್ಲಿ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರಿಗೆ ನ್ಯಾಯ ನೀಡಬೇಕಾದರೆ ಜಾತಿಗಣತಿ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಸಂಜಯ್ ಸಿಂಗ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...