ಬಿಹಾರ ಚುನಾವಣೆ | ವಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ವಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, “ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತ ನೀಡಲು ಕೋರಲಾಗುವುದು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ಪ್ರಧಾನಿ ಮೋದಿ ಪ್ರಶಂಸಿಸಿದ್ದ ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿಯಿಂದ ಸ್ಪರ್ಧೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿವೆ. ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ” ಎಂದು ಟೀಕಿಸಿದ ಸಿದ್ದರಾಮಯ್ಯ, “ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಗೃಹಲಕ್ಷ್ಮಿ ಗ್ಯಾರಂಟಿ ನೀಡಲಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಬಿಹಾರದ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು,ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನ ನಿರ್ಮೂಲನೆಯಾಗಿಲ್ಲ. ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸುವ ಭರವಸೆಯಿದೆ” ಎಂದರು.

ಮುಖ್ಯಮಂತ್ರಿಗಳ ಬದಲಾವಣೆ ಕುರಿತ ಚರ್ಚೆ ಬಗ್ಗೆ ಪ್ರತಿಕ್ರಿಯೆ ನೀಡಿ, “ಜನರ ಅಭಿಪ್ರಾಯವೇನೇ ಇದ್ದರೂ, ಹೈಕಮಾಂಡ್‌ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಈ ಬಗ್ಗೆ ಏನೂ ಹೇಳಿಲ್ಲ. ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನಾರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು” ಎಂದರು.

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ಮಹಾಘಟಬಂಧನ್ ಭರಪೂರ ಭರವಸೆ; ಕಾರ್ಯಸಾಧುವೇ?

ರಾಜ್ಯೋತ್ಸವ ಪ್ರಶಸ್ತಿ ಬಗ್ಗೆ ಮಾತನಾಡಿದ ಸಿಎಂ, “ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಬಾರಿ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ” ಎಂದರು.

ಹುಲಿ ದಾಳಿ ಪ್ರಕರಣದ ಪರಿಶೀಲನೆಗೆ ಶೀಘ್ರದಲ್ಲಿ ಸಿಎಂ ಸಭೆ

ಮೈಸೂರಿನಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, “ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್‌ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆ ಹಾಗೂ ಹುಲಿ ಚಿರತೆಗಳ ಹಾವಳಿಯಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಸಭೆ ಈಗಾಗಲೇ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿಯೂ ಸಭೆ ನಡೆಯಲಿದೆ. ಅಲ್ಲದೇ, ಅಕ್ರಮವಾಗಿ ರೆಸಾರ್ಟ್‌ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...