ಮಣಿಪುರ ಘಟನೆ | ಸಂಸತ್ತಿಗೆ ಕಪ್ಪು ಬಟ್ಟೆ ಧರಿಸಿ ಆಗಮಿಸಿದ ವಿಪಕ್ಷ ಸದಸ್ಯರು

Date:

ಮಣಿಪುರ ಘಟನೆಯ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿಗೆ ಬಂದು ಮಾತನಾಡುವಂತೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿರುವ ಹೊಸದಾಗಿ ರಚನೆಯಾಗಿರುವ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಎಲ್ಲ ಸಂಸದರು, ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸಿ ಸಂಸತ್ತಿಗೆ ಆಗಮಿಸಿದರು.

ಜುಲೈ 20ರಂದು ಪ್ರಾರಂಭವಾದ ಮುಂಗಾರು ಅಧಿವೇಶನದಲ್ಲಿ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡುವಂತೆ ಪ್ರತಿಪಕ್ಷಗಳು ನಿರಂತರವಾಗಿ ಆಗ್ರಹಿಸುತ್ತಿದ್ದರೂ ಪ್ರಧಾನಿ ಇನ್ನೂ ಉಭಯ ಸದನಕ್ಕೆ ಬಂದು ಮಾತನಾಡಿಲ್ಲ. ಇದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನೇತೃತ್ವದಲ್ಲಿ ವಿಪಕ್ಷಗಳ ಸದಸ್ಯರು ತಮ್ಮ ಪ್ರತಿಭಟನೆಯನ್ನು ಮತ್ತೆ ಮುಂದುವರಿಸಿದ್ದು, ಪ್ರತಿಭಟನೆಯ ಸಂಕೇತವಾಗಿ ಕಪ್ಪು ಬಟ್ಟೆ ಧರಿಸಿಕೊಂಡು ಆಗಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ಮಣಿಪುರದ ಘಟನೆಯು ದೇಶಕ್ಕೆ ಕಪ್ಪುಚುಕ್ಕೆಯ ಅಧ್ಯಾಯ. ಕಳೆದ 85 ದಿನಗಳಿಂದ ಮಣಿಪುರದ ಜನರ ಅಳಲನ್ನು ಗಮನಿಸದೆ, ಕೇಂದ್ರ ಸರ್ಕಾರ ಮಾನವೀಯತೆಗೆ ಮಸಿ ಬಳಿದಿದೆ. ಸಂಸತ್ತಿನ ಅಧಿವೇಶನ ನಡೆಯುತ್ತಿದೆ. ನಿರಂಕುಶಾಧಿಕಾರದ ಧೋರಣೆ ಅನುಸರಿಸಿ, ವಿಷಯದಿಂದ ಗಮನ ಬೇರೆಡೆಗೆ ತಿರುಗಿಸಿ ಬಿಜೆಪಿ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದ ದೇವಸ್ಥಾನವಾಗಿರುವ ಸಂಸತ್ತಿಗೆ ಬಂದು ಪ್ರಧಾನಿಯವರು ಮಾತನಾಡಲು ಬಯಸುತ್ತಿಲ್ಲ. ಸಂಸತ್ತಿಗೆ ಬಂದು ಬಂದು ಮಾತನಾಡುವ ಬದಲು ರಾಜಸ್ಥಾನಕ್ಕೆ ತೆರಳಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

ವಿರೋಧ ಪಕ್ಷಗಳನ್ನು ನಿಂದಿಸುವ ಮೂಲಕ ಮೋದಿ ಸರ್ಕಾರವು ಕುಕೃತ್ಯಗಳ ಮಸಿಯನ್ನು ಅಳಿಸಲು ಸಾಧ್ಯವಿಲ್ಲ. ದಲಿತರು, ಆದಿವಾಸಿಗಳು ಮತ್ತು ಹಿಂದುಳಿದವರ ಬಗ್ಗೆ ವಿರೋಧಿ ಮನಸ್ಥಿತಿ ಇದ್ದವರು ಮಾತ್ರ ಕಪ್ಪು ಬಟ್ಟೆಯನ್ನು ಗೇಲಿ ಮಾಡುತ್ತಾರೆ. ಆದರೆ, ನಮಗೆ ಕಪ್ಪು ಪ್ರತಿಭಟನೆ ಮತ್ತು ಶಕ್ತಿಯ ಸಂಕೇತವಾಗಿದೆ. ಕಪ್ಪು ಬಣ್ಣವು ನ್ಯಾಯದ ಸಂಕೇತ ಮತ್ತು ಘನತೆಯ ಸಂಕೇತವಾಗಿದೆ. ಮಣಿಪುರದ ಜನರು ನ್ಯಾಯ, ಶಾಂತಿ ಮತ್ತು ಗೌರವಕ್ಕೆ ಅರ್ಹರಾಗಿದ್ದಾರೆ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಈ ನಡುವೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಭಾಗವಹಿಸುವುದರಿಂದ ಅಮಾನತುಗೊಂಡಿರುವ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್, ಸಂಸತ್ ಭವನದ ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಕೂಡ ಕಪ್ಪು ಬಟ್ಟೆಯಲ್ಲೇ ಆಗಮಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...