ಹಿನ್ನೋಟ | ಕೇಂದ್ರದ ವಿರುದ್ಧ ವಿಪಕ್ಷಗಳ ಜಂಟಿ ಹೋರಾಟ ಫಲ ನೀಡುವುದೇ?

Date:

ಮೋದಿ ಸರ್ಕಾರ ಆಡಳಿತದಲ್ಲಿರುವ ಕಳೆದ ಒಂಭತ್ತು ವರ್ಷಗಳಲ್ಲಿ ವಿಪಕ್ಷಗಳು ಅನೇಕ ವಿಚಾರಗಳಲ್ಲಿ ಒಕ್ಕೊರಲಿನ ಹೋರಾಟ ಮುಂದಿಡಲು ವಿಫಲವಾಗಿವೆ. ಆದರೆ, ಕೆಲವು ಪ್ರಮುಖ ವಿಚಾರಗಳಲ್ಲಿ ವಿಪಕ್ಷಗಳ ಜಂಟಿ ಹೋರಾಟ ಫಲ ನೀಡಿದೆ ಮತ್ತು ಕೇಂದ್ರ ಸರ್ಕಾರಕ್ಕೆ ಸೋಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ನೂತನ ಸಂಸತ್ ಭವನ ಉದ್ಘಾಟಿಸುವುದನ್ನು ವಿರೋಧಿಸಿ 20ಕ್ಕೂ ಹೆಚ್ಚು ಪ್ರತಿಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. “ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಉದ್ಘಾಟನೆಗೆ ಆಹ್ವಾನಿಸದಿರುವುದು ರಾಷ್ಟ್ರಪತಿ ಸ್ಥಾನಕ್ಕೆ ತೋರಿದ ಅಗೌರವ. ರಾಷ್ಟ್ರಪತಿಯವರೇ ಸಂಸತ್ ಭವನ ಉದ್ಘಾಟಿಸಬೇಕು” ಎಂದು ವಿಪಕ್ಷಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಆಪ್ ಮೊದಲಾಗಿ 19 ಪಕ್ಷಗಳು ಒಗ್ಗಟ್ಟಿನಿಂದ ಮೇ 28ರ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಮೋದಿ ಸರ್ಕಾರ ಆಡಳಿತದಲ್ಲಿರುವ ಕಳೆದ ಒಂಭತ್ತು ವರ್ಷಗಳಲ್ಲಿಅನೇಕ ವಿಚಾರಗಳಲ್ಲಿ ವಿಪಕ್ಷಗಳ ಜಂಟಿ ಹೋರಾಟ ಕಂಡುಬಂದಿದೆ. ಕೆಲವೊಮ್ಮೆ ಪ್ರಮುಖ ವಿಚಾರಗಳಲ್ಲಿ ಜಂಟಿ ಹೋರಾಟಕ್ಕೆ ಫಲ ಸಿಕ್ಕಿದೆ ಮತ್ತು ಕೇಂದ್ರ ಸರ್ಕಾರಕ್ಕೆ ಸೋಲಾಗಿದೆ. ಆದರೆ, ಬಹುತೇಕ ಬಾರಿ ವಿಪಕ್ಷಗಳ ಜಂಟಿ ಹೋರಾಟಗಳು ವಿಫಲವಾಗಿವೆ.

2014ರಲ್ಲಿ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದ ನಂತರ ಪ್ರಮುಖ ವಿಪಕ್ಷಗಳು ತಮ್ಮ ನಡುವಿನ ಭಿನ್ನಾಭಿಪ್ರಾಯಗಳ ನಡುವೆಯೂ ಸಮಾನ ಅಂಶಗಳಲ್ಲಿ ಒಕ್ಕೊರಲಿನ ವಿರೋಧ ಮುಂದಿಟ್ಟಿವೆ. ಅಂತಹ ಕೆಲವು ಉದಾಹರಣೆಗಳು ಇಲ್ಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2015 ಮಾರ್ಚ್‌ನ ಭೂಸ್ವಾಧೀನ ಸುಗ್ರೀವಾಜ್ಞೆ ವಿರುದ್ಧ ಪ್ರತಿಭಟನೆ

ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಆರಂಭದಲ್ಲೇ ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರುದ್ಧ ವಿಪಕ್ಷಗಳು ಒಗ್ಗಟ್ಟಿನ ಹೋರಾಟ ಮುಂದಿಟ್ಟಿದ್ದವು. ಕಂಪನಿಗಳು ವಾಣಿಜ್ಯ ಉದ್ದೇಶಕ್ಕಾಗಿ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ನೆರವಾಗುವ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ತರಲು ಸರ್ಕಾರ ಮುಂದಾದಾಗ ಕಾಂಗ್ರೆಸ್ ನೇತೃತ್ವದಲ್ಲಿ 14 ಪಕ್ಷಗಳು ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಸಾಗಿ ವಿರೋಧಿಸಿದ್ದವು. ಸರ್ಕಾರ ನಂತರ ಈ ಕಾಯ್ದೆಯನ್ನು ಹಿಂಪಡೆದಿತ್ತು.

2020 ಡಿಸೆಂಬರ್‌ನಲ್ಲಿ ಸಂಸತ್ ಭವನದ ಶಂಕುಸ್ಥಾಪನೆ ಬಹಿಷ್ಕಾರ

2020ರಂದು ಪ್ರಧಾನಿ ಮೋದಿ ನೂತನ ಸಂಸತ್ ಭವನಕ್ಕೆ ಶಂಕು ಸ್ಥಾಪನೆ ಮಾಡಿದ್ದರು. ಕೋವಿಡ್ ಸಂದರ್ಭದಲ್ಲಿ ಬೊಕ್ಕಸ ಬರಿದಾಗಿದ್ದಾಗ ಅದ್ದೂರಿ ಸಂಸತ್ ಭವನ ನಿರ್ಮಾಣಕ್ಕೆ ಹಣ ಸುರಿಯುವುದನ್ನು ವಿರೋಧಿಸಿ ಕಾಂಗ್ರೆಸ್, ಟಿಎಂಸಿ ಹಾಗೂ ಡಿಎಂಕೆ ಮೊದಲಾದ ಪಕ್ಷಗಳು ಸಮಾರಂಭದಿಂದ ದೂರ ಉಳಿದಿದ್ದವು. ಆದರೆ ಜಂಟಿ ಹೇಳಿಕೆ ಹೊರಡಿಸಿರಲಿಲ್ಲ.

2021 ಜನವರಿಯಲ್ಲಿ ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟನೆ

2020ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ಪಂಜಾಬ್, ಹರಿಯಾಣ ಹಾಗೂ ಉತ್ತರ ಪ್ರದೇಶದ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಒಂದು ವರ್ಷ ನಡೆದ ಈ ಪ್ರತಿಭಟನೆಯ ಕಾವಿಗೆ ಮೋದಿ ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆದಿತ್ತು. ರೈತರ ಪ್ರತಿಭಟನೆಯನ್ನು 17 ವಿರೋಧ ಪಕ್ಷಗಳು ಬೆಂಬಲಿಸಿದ್ದವು. 2021 ಜನವರಿಯಲ್ಲಿ ಕೃಷಿ ಕಾನೂನು ವಿರೋಧಿಸುತ್ತಿರುವ ರೈತರನ್ನು ಬೆಂಬಲಿಸಲು ಕಾಂಗ್ರೆಸ್, ಎನ್‌ಸಿಪಿ, ಟಿಎಂಸಿ, ಡಿಎಂಕೆ, ಶಿವಸೇನೆ, ಸಮಾಜವಾದಿ ಪಕ್ಷ, ಆರ್‌ಜೆಡಿ, ಸಿಪಿಎಂ, ಸಿಪಿಐ, ಆರ್‌ಎಸ್‌ಪಿ, ಪಿಡಿಪಿ, ಎಂಡಿಎಂಕೆ, ಮುಸ್ಲಿಂ ಲೀಗ್, ಎಐಯುಡಿಎಫ್‌ ಹಾಗೂ ಕೇರಳ ಕಾಂಗ್ರೆಸ್ (ಎಂ) ಮೊದಲಾಗಿ 17 ವಿಪಕ್ಷಗಳು ಲೋಕಸಭೆ-ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಿದ್ದವು.

2021 ಮೇ ತಿಂಗಳಲ್ಲಿ ಕೋವಿಡ್ ಕುರಿತು ಜಂಟಿ ಹೇಳಿಕೆ

2021 ಮೇನಲ್ಲಿ ಕಾಂಗ್ರೆಸ್, ಎಡಪಕ್ಷಗಳು, ಟಿಎಂಸಿ ಮೊದಲಾದ 13 ವಿಪಕ್ಷಗಳು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಪರಸ್ಪರರ ವಿರುದ್ಧ ಹೋರಾಡಿದ್ದರೂ, ಮೋದಿ ಸರ್ಕಾರದ ವಿರುದ್ಧ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವಂತೆ ಒತ್ತಾಯಿಸಿ ಜಂಟಿ ಹೇಳಿಕೆ ನೀಡಿದ್ದವು. ಆಮ್ಲಜನಕ ಸಿಲಿಂಡರ್‌ಗಳ ಸೌಲಭ್ಯ ಒದಗಿಸುವುದು, ಇತರ ಕೋವಿಡ್ ನೆರವಿನ ಬಗ್ಗೆ ಈ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿತ್ತು.

18-44 ವಯೋವರ್ಗಕ್ಕೆ ಲಸಿಕೆ ಮುಂದುವರಿಸುವುದು

ಬಹುತೇಕ ರಾಜ್ಯಗಳು 18-44 ವಯಸ್ಸಿನವರಿಗೆ ಕೋವಿಡ್ ಲಸಿಕೆ ನೀಡುವ ವಿಚಾರದಲ್ಲಿ ಕೇಂದ್ರದ ಉಪೇಕ್ಷೆಯನ್ನು ಪ್ರಶ್ನಿಸಿದ್ದವು. ಕಾಂಗ್ರೆಸ್, ಟಿಎಂಸಿ, ಶಿವಸೇನೆ, ಡಿಎಂಕೆ, ಜೆಎಂಎಂ, ಜೆಡಿಎಸ್, ಎನ್‌ಸಿಪಿ, ಎಸ್‌ಪಿ, ಆರ್‌ಜೆಡಿ, ಸಿಪಿಎಂ, ಸಿಪಿಐ ಹಾಗೂ ಎನ್‌ಸಿ ಮೊದಲಾಗಿ 12 ವಿಪಕ್ಷಗಳು ಕೇಂದ್ರ ಸರ್ಕಾರವೇ ವಿದೇಶಗಳಿಂದ ಲಸಿಕೆ ಸಂಗ್ರಹಿಸಿ ಈ ವಯೋವರ್ಗದವರಿಗೆ ನೀಡಬೇಕು ಎಂದು ಒತ್ತಾಯಿಸಿ ಜಂಟಿ ಪತ್ರ ಬರೆದಿದ್ದವು.

ಸ್ಟಾನ್‌ ಸ್ವಾಮಿ ಮರಣದ ನ್ಯಾಯಾಂಗ ತನಿಖೆ

ಫಾದರ್ ಸ್ಟಾನ್ ಸ್ವಾಮಿ ನ್ಯಾಯಾಂಗ ವಶದಲ್ಲಿ ಮೃತಪಟ್ಟಿರುವುದಕ್ಕೆ ತೀವ್ರ ವಿಷಾದ ಮತ್ತು ಆಕ್ರೋಶ ವ್ಯಕ್ತಪಡಿಸಿ ವಿಪಕ್ಷಗಳು ರಾಷ್ಟ್ರಪತಿಗಳಿಗೆ ಜಂಟಿ ಪತ್ರ ಬರೆದಿದ್ದವು. ಸ್ಟಾನ್ ಸ್ವಾಮಿ ಸಾವಿಗೆ ಕಾರಣರಾದವರು ಮತ್ತು ಜೈಲಿನಲ್ಲಿ ಅವರನ್ನು ಅಮಾನವೀಯವಾಗಿ ನಡೆಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಒತ್ತಾಯಿಸಲಾಗಿತ್ತು. ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಬಂಧಿತರಾದ ಎಲ್ಲರನ್ನೂ ಬಿಡುಗಡೆ ಮಾಡುವಂತೆ ಪತ್ರ ಒತ್ತಾಯಿಸಿತ್ತು. ಈ ಪತ್ರಕ್ಕೆ ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಜೆಎಂಎಂ, ಜೆಡಿಎಸ್, ಎನ್‌ಸಿ, ಎನ್‌ಸಿಪಿ, ಆರ್‌ಜೆಡಿ, ಸಿಪಿಐ(ಎಂ), ಹಾಗೂ ಸಿಪಿಐ ಸಹಿ ಹಾಕಿದ್ದವು.

ದ್ವೇಷ ಭಾಷಣದ ಬಗ್ಗೆ ಪ್ರಧಾನಿ ಮೌನದ ಬಗ್ಗೆ ಪ್ರಶ್ನೆ

2022 ಏಪ್ರಿಲ್‌ನಲ್ಲಿ 13 ವಿಪಕ್ಷಗಳು ಜಂಟಿ ಹೇಳಿಕೆ ನೀಡಿ ದ್ವೇಷ ಭಾಷಣದ ಬಗ್ಗೆ ಪ್ರಧಾನಿ ಮೌನವನ್ನು ಪ್ರಶ್ನಿಸಿದ್ದವು. ಕಾಂಗ್ರೆಸ್, ಎನ್‌ಸಿಪಿ, ಟಿಎಂಸಿ, ಡಿಎಂಕೆ, ಜೆಎಂಎಂ, ಆರ್‌ಜೆಡಿ, ಎನ್‌ಸಿ, ಸಿಪಿಎಂ, ಸಿಪಿಐ, ಫಾರ್ವರ್ಡ್ ಬ್ಲಾಕ್, ಆರ್‌ಎಸ್‌ಪಿ, ಮುಸ್ಲಿಂ ಲೀಗ್ ಹಾಗೂ ಸಿಪಿಐ (ಎಂಎಲ್‌) ಜಂಟಿ ಹೇಳಿಕೆ ನೀಡಿದ್ದವು.

ಸರ್ಕಾರಿ ಸಂಸ್ಥೆಗಳ ದುರುಪಯೋಗದ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ

2023 ಮಾರ್ಚ್‌ನಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಂತಹ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುವ ವಿರುದ್ಧ ವಿಪಕ್ಷಗಳು ಸುಪ್ರೀಂಕೋರ್ಟ್‌ಗೆ ಜಂಟಿ ಅರ್ಜಿ ಸಲ್ಲಿಸಿದ್ದವು. ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಆರ್‌ಜೆಡಿ, ಆಪ್, ಬಿಆರ್‌ಎಸ್, ಎನ್‌ಸಿಪಿ, ಶಿವಸೇನೆ, ಜೆಎಂಎಂ, ಜೆಡಿಯು, ಸಿಪಿಎಂ, ಸಿಪಿಐ, ಎಸ್‌ಪಿ ಹಾಗೂ ಎನ್‌ಸಿ ಅರ್ಜಿಗೆ ಸಹಿ ಹಾಕಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...