11 ಸಾವಿರ ಕೊಳವೆ ಬಾವಿ ಕೊರೆಯಲು ಆದೇಶ: ಡಿಸಿಎಂ ಡಿ ಕೆ ಶಿವಕುಮಾರ್

Date:

ಬೆಂಗಳೂರಿನ ಎಲ್ಲ ಶಾಸಕರಿಗೂ 10 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳಬಹುದು. ಇತರೇ ಕಾಮಗಾರಿಗಳಿಗಿಂತ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿಡಬ್ಲ್ಯೂಎಸ್ಎಸ್‌ಬಿ ವ್ಯಾಪ್ತಿಯಲ್ಲಿ 11 ಸಾವಿರ ಕೊಳವೆ ಬಾವಿ ಮತ್ತೆ ಕೊರೆಯಲು ಆದೇಶ ನೀಡಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೊಳವೆಬಾವಿಗಳನ್ನು ಕೊರೆಸುವ ಸಂಬಂಧ ಬಿಜೆಪಿ ಶಾಸಕ ಮುನಿರಾಜು ಮತ್ತು ಬೈರತಿ ಬಸವರಾಜು ಅವರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, “ಕೋವಿಡ್ ಕಾರಣದಿಂದ ಕಾವೇರಿ ನೀರು ಸರಬರಾಜು ಕಾಮಗಾರಿ ತಡವಾಗಿತ್ತು. ಅಲ್ಲಿಯವರೆಗೆ ರೀ- ಬೋರ್ವೆಲ್, ಪಂಪ್ ದುರಸ್ತಿ ಸೇರಿದಂತೆ ಇತರೇ ಕೆಲಸಗಳಿಗೆ ಟೆಂಡರ್ ಕರೆಯಲಾಗಿದೆ. ಕೂಡಲೇ ಮುಂದಿನ ವಾರದೊಳಗೆ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖೆ ವ್ಯಾಪ್ತಿಯಲ್ಲಿ 68 ಟ್ಯಾಂಕರ್ ಗಳು ಕಾರ್ಯನಿರ್ವಹಿಸುತ್ತಿವೆ”ಎಂದು ತಿಳಿಸಿದರು.

“ದಾಸರಹಳ್ಳಿಗೆ ಈಗಾಗಲೇ 5.24 ಲಕ್ಷ ಅನುದಾನವನ್ನು ನೀಡಲಾಗಿದೆ. ಲಕ್ಷ್ಮೀಪುರ ಸೇರಿದಂತೆ ದಾಸರಹಳ್ಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕಾವೇರಿ ನೀರು ಪೂರೈಕೆ ಕಾಮಗಾರಿಯನ್ನು ನಡೆಸಲಾಗುವುದು. ದಾಸರಹಳ್ಳಿ ಕ್ಷೇತ್ರದಲ್ಲಿ ಕಾರ್ಖಾನೆಗಳು ಹೆಚ್ಚು ಇರುವ ಕಾರಣ ನೀರು ಹೆಚ್ಚು ಬಳಕೆಯಾಗುತ್ತಿದೆ. ಆದ ಕಾರಣ ವಸತಿ ಪ್ರದೇಶಗಳಿಗೆ ತೊಂದರೆಯಾಗುತ್ತಿದೆ. ಬೋರ್ವೆಲ್ ನೀರು ಬಳಕೆಯ ಬಗ್ಗೆ ಈಗಾಗಲೇ ಕಾನೂನು ಇದ್ದು. ಈ ಬಗ್ಗೆಯೂ ಸದನದಲ್ಲಿ ಚರ್ಚೆ ಮಾಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆ.ಆರ್ ಪುರಂ ಕ್ಷೇತ್ರದಲ್ಲಿ ನಾರಾಯಣಪುರ ಸೇರಿದಂತೆ ಕೆಲವೆಡೆ ನೀರನ್ನು ತುಂಬುವ ಕೆಲಸ ಮಾಡಬೇಕಿದೆ ಟ್ಯಾಂಕರ್ ಗಳು ರೂ.1,500 ವಸೂಲಿ ಮಾಡುತ್ತಿದ್ದು ಇದನ್ನು ರೂ. 500ಕ್ಕೆ ಇಳಿಸಬೇಕು ಎಂದು ಬೈರತಿ ಬಸವರಾಜು ಅವರು ಮನವಿ ಮಾಡಿದ್ದು. ಖಾಸಗಿ ನೀರು ಟ್ಯಾಂಕರ್ ದರ ಇಳಿಸಲು ಕಾನೂನು ತರಬಹುದು. ಇಲ್ಲಿ ಎಲ್ಲರೂ ಒಮ್ಮತಕ್ಕೆ ಬಂದರೆ ಇದನ್ನು ಜಾರಿಗೆ ತರಲು ಸಿದ್ಧ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರಿಂದ ಒಂದು ಪತ್ರ ಬರೆಸಿ ಕೊಟ್ಟರೆ ಸಲಹೆಯನ್ನು ಪರಿಗಣಿಸುತ್ತೇವೆ” ಎಂದು ಹೇಳಿದರು.

“ಇದರ ಜೊತೆಗೆ ಅಂತರ್ಜಲ ನೀರಿನ ಅತಿ ಹೆಚ್ಚಿನ ಬಳಕೆ, ಶೋಷಣೆ ತಪ್ಪಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ವಿಚಾರವಾಗಿ ಕಂದಾಯ ಇಲಾಖೆಯ ಬಳಿಯೂ ಚರ್ಚೆ ನಡೆಸಲಾಗುವುದು. ಬೆಂಗಳೂರಿಗೆ ಈಗ 1,450 ಎಂಎಲ್ಡಿ ನೀರು ಸರಬರಾಜಾಗುತ್ತಿದೆ. ಈ ವರ್ಷ ಬರಗಾಲ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು. ಈ ವಿಚಾರವಾಗಿ ಮೊನ್ನೆ ಬಿಜೆಪಿ ಶಾಸಕರಾದ ಸೋಮಶೇಖರ್ ಹಾಗೂ ಮುನಿರತ್ನ ಅವರು ಪ್ರಸ್ತುತ ಇರುವ ಕೊಳವೆ ಬಾವಿಗಳನ್ನು ಇನ್ನೂ 500 ಅಡಿ ಹೆಚ್ಚು ಕೊರೆಯಲು ಅವಕಾಶ ನೀಡಬೇಕು ಎಂಬ ಸಲಹೆ ನೀಡಿದ್ದಾರೆ. ಈ ವಿಚಾರವಾಗಿ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

110 ಹಳ್ಳಿಗಳಿಗೆ ನೀರು

“ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು ಪೂರೈಸಲಾಗುವುದು” ಎಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದರು.

“ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ ಸೀವೇಜ್ ಪ್ಲಾಂಟ್ ಸೇರಿದಂತೆ ಇತರೇ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು” ಎಂದು ಹೇಳಿದರು.

“ಯಶವಂತಪುರ ಕ್ಷೇತ್ರದಲ್ಲಿ ಅರಣ್ಯ ಭೂಮಿಯ ಪಕ್ಕದಲ್ಲಿ ಇರುವ ಬಿಡಿಎ ಬಡಾವಣೆಗಳಿಗೆ ನೀರು ಹರಿಸಲು ಇದ್ದಂತಹ ತೊಡಕುಗಳನ್ನು ನಿವಾರಿಸಲಾಗುವುದು. ಈಗಾಗಲೇ ಅರಣ್ಯ ಇಲಾಖೆಯವರ ಜೊತೆಗೆ ಚರ್ಚೆ ನಡೆಸಲಾಗಿದೆ. ಯಶವಂತಪುರ ಕ್ಷೇತ್ರ ದೊಡ್ಡದಾಗಿದ್ದು, ನಗರ ಭಾಗದಷ್ಟೇ ವಿಸ್ತೀರ್ಣವನ್ನು ಗ್ರಾಮೀಣ ಭಾಗ ಹೊಂದಿದೆ. ಎಲ್ಲಾ ಸಮಸ್ಯೆಗಳನ್ನು ನಾನೇ ಖುದ್ದಾಗಿ ಬಗೆಹರಿಸುತ್ತೇನೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...