ತಹಶೀಲ್ದಾರ್ ಅಜಿತ್ ಕುಮಾರ್ ರೈ ಅನ್ನು ನ್ಯಾಯಾಲಯ ವಿಚಾರಣೆಗೆ ಒಳಪಡಿಸಲು ಆದೇಶ

Date:

  • ಅರಣ್ಯ ಜಮೀನನ್ನು ಕಂದಾಯ ಜಮೀನನ್ನಾಗಿ ಪರಿವರ್ತಿಸಿರುವ ಆರೋಪ
  • ಅನುಕಂಪದಲ್ಲಿ ಸರ್ಕಾರಿ ಹುದ್ದೆ ಪಡೆದಿದ್ದ ಅಜಿತ್ ರೈ ಮೇಲೆ ನಾನಾ ಪ್ರಕರಣ

ಅರಣ್ಯ ಜಮೀನನ್ನು ಕಂದಾಯ ಜಮೀನನ್ನಾಗಿ ಪರಿವರ್ತಿಸಿರುವ ಆರೋಪದ ಮೇಲೆ ಬೆಂಗಳೂರಿನ ಕೆ ಆ‌ರ್ ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ವಿರುದ್ಧ ಮೊಕದ್ದಮೆ ದಾಖಲಿಸಿ, ಸಕ್ಷಮ ನ್ಯಾಯಾಲಯದಲ್ಲಿ‌ ವಿಚಾರಣೆಗೆ ಒಳಪಡಿಸಲು ದಂಡ ಪ್ರಕ್ರಿಯಾ ಸಂಹಿತೆ ಕಲಂ 197ರ ಅನ್ವಯ ಮಂಜೂರಾತಿ ನೀಡಿ ಸರ್ಕಾರ ಆದೇಶಿಸಿದೆ.

ಕೆ ಆರ್ ಪುರ ಹೋಬಳಿ, ಕೊತ್ತನೂರು ಗ್ರಾಮದ ಸ.ನಂ:47ರಲ್ಲಿ 17-34 ಎಕರೆ/ಗುಂಟೆ ಜಮೀನು “ಅರಣ್ಯ ಭೂಮಿ” ಎಂದು ಸ್ಪಷ್ಟವಾಗಿ ಗೊತ್ತಿದ್ದರೂ ಸಹ ಹಾಗೂ ಸದರಿ ಜಮೀನನ್ನು ಅರಣ್ಯ ಇಲಾಖೆಗೆ ಹಸ್ತಾಂತರವಾಗಿರುವುದು ದಾಖಲೆಯಲ್ಲಿ ಇದ್ದರೂ ಸಹ, ಅದನ್ನು ರದ್ದುಪಡಿಸಿ, ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿರುವ ಆರೋಪ ಅಜಿತ್ ಕುಮಾರ್ ರೈ ಮೇಲೆ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಅಜಿತ್ ಕುಮಾರ್ ರೈ ವಿರುದ್ಧ ಮೊಕದ್ದಮೆ ದಾಖಲಿಸಿ, ಸಕ್ಷಮ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲು ಮಂಜೂರಾತಿ ನೀಡುವಂತೆ ಬೆಂಗಳೂರು ನಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರ್ಕಾರಕ್ಕೆ ಕೋರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆ ಆರ್ ಪುರ ಹೋಬಳಿ, ಕೊತ್ತನೂರು ಗ್ರಾಮದ ಸ.ನಂ:47ರಲ್ಲಿ 17-34 ಎಕರೆ/ಗುಂಟೆ ಜಮೀನನ್ನು ಬೆಂಗಳೂರು ನಗರ ಜಿಲ್ಲಧಿಕಾರಿಗಳು 25.01.2000 ಆದೇಶದಲ್ಲಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಅದರಂತೆ, ಪಹಣಿ ಹಾಗೂ ಇತರೆ ಕಂದಾಯ ದಾಖಲೆಗಳಲ್ಲಿ ‘ಅರಣ್ಯ’ ಎಂದು ದಾಖಲಾಗಿರುತ್ತದೆ.

ಕೆ ಆ‌ರ್ ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದಾಗ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಕಳೆದ ಜೂನ್‌ನಲ್ಲಿ ದಾಳಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಖ್ಯಮಂತ್ರಿ ಜನಸ್ಪಂದನ; ಆಡಳಿತ ವೈಫಲ್ಯದ ವಿರಾಟ್ ದರ್ಶನ

ಲೋಕಾಯುಕ್ತ ದಾಳಿ ವೇಳೆ ಅಜಿತ್‌ ಕುಮಾರ್‌ ರೈ ಬಳಿ 500 ಕೋಟಿ ರೂ. ಆಸ್ತಿ ಪತ್ತೆಯಾಗಿತ್ತು. ಸಹಕಾರ ನಗರದ ಮನೆಯಲ್ಲಿ 750 ಗ್ರಾಂ ಚಿನ್ನಾಭರಣ, ದುಬಾರಿ ಬೆಲೆಯ ಮೂರು ರ‍್ಯಾಡೋ ವಾಚ್‌, ವಿದೇಶಿ ಬ್ರಾಂಡ್‌ನ ಸುಮಾರು 50 ವಾಚ್‌ ಜಪ್ತಿ ಮಾಡಲಾಗಿತ್ತು. ಬೆಂಗಳೂರಿನ ಆಸುಪಾಸಿನಲ್ಲಿ 200 ಎಕರೆಗೂ ಹೆಚ್ಚು ಜಮೀನನ್ನು ಬೇನಾಮಿ ಆಸ್ತಿ ಮಾಡಿಕೊಂಡಿದ್ದು ಲೋಕಾಯುಕ್ತ ತನಿಖೆಯಲ್ಲಿ ಬಯಲಾಗಿದೆ.

ಅನುಕಂಪದಲ್ಲಿ ಸರ್ಕಾರಿ ಹುದ್ದೆ ಪಡೆದಿದ್ದ ಅಜಿತ್ ರೈ

ಅಜಿತ್ ರೈ ತಂದೆ ಪುತ್ತೂರಿನಲ್ಲಿ ಭೂ ಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕರ್ತವ್ಯದಲ್ಲಿದ್ದಾಗಲೇ ತಂದೆ ತೀರಿಕೊಂಡಿದ್ದರು ಎಂಬ ಕಾರಣಕ್ಕೆ ಅನುಕಂಪದ ಆಧಾರದ ಮೇಲೆ ಕಂದಾಯ ಇಲಾಖೆಯಲ್ಲಿ ಅಜಿತ್ ರೈಗೆ ಕೆಲಸ ನೀಡಲಾಗಿತ್ತು. ಅಲ್ಲಿ ಕೆಲ ವರ್ಷ ಕೆಲಸ ಮಾಡಿದ್ದ ಅಜಿತ್, ಬಳಿಕ ಹಲವು ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ, ಬಡ್ತಿ ಪಡೆದು ತಹಶೀಲ್ದಾರ್ ಆಗಿದ್ದ. ಈ ಹಿಂದೆಯೂ ಅಜಿತ್ ರೈ ಕೆಆರ್‌ ಪುರ ತಹಶೀಲ್ದಾರ್ ಆಗಿದ್ದಾಗ ಅಮಾನತುಗೊಂಡಿದ್ದ. ಹಿಂದೆ ಬಿಬಿಎಂಪಿ ಕೈಗೊಂಡಿದ್ದ ಒತ್ತುವರಿ ತೆರವು ಕಾರ್ಯಾಚರಣೆಗೆ ಸಹಕರಿಸಿದ ಅರೋಪದಡಿ ಅಜಿತ್‌ ಕುಮಾರ್ ರೈನನ್ನು ಸರ್ಕಾರ 2022, ನವೆಂಬರ್‌ ತಿಂಗಳಲ್ಲಿ ಅಮಾನತು ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...