ಟೀಮ್ ಇಂಡಿಯಾ ಸೋಲಿಗೆ ‘ಕೆಟ್ಟ ಶಕುನ’ ಅಲ್ಲಿದ್ದದ್ದು ಕಾರಣ: ರಾಹುಲ್‌ ಗಾಂಧಿ ಹೇಳಿಕೆಯ ವಿಡಿಯೋ ವೈರಲ್

Date:

ಕಳೆದ ಭಾನುವಾರ ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಆರು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ 6ನೇ ಬಾರಿಗೆ ಚಾಂಪಿಯನ್ ಆಗಿತ್ತು.

ಟೂರ್ನಿಯಲ್ಲಿ ಫೈನಲ್ ಪಂದ್ಯಕ್ಕೂ ಮೊದಲು ಆಡಿದ್ದ ಎಲ್ಲ ಹತ್ತು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯಿಸುವ ಮೂಲಕ ಫೈನಲ್ ತಲುಪಿತ್ತು. ಆದರೆ ಫೈನಲ್‌ನಲ್ಲಿ ಅದೃಷ್ಟ ಕೈ ಹಿಡಿಯಲಿಲ್ಲ. ಟೀಮ್ ಇಂಡಿಯಾ ಸೋಲನುಭವಿಸಿದ್ದರಿಂದ ಕೋಟ್ಯಂತರ ಭಾರತೀಯರ ಕನಸು ನುಚ್ಚು ನೂರಾಗಿತ್ತು.

ಈ ಸೋಲಿನ ಬಳಿಕ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯಲ್ಲಿ ನೀಡಿರುವ ಹೇಳಿಕೆಯೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಹೆಸರು ಉಲ್ಲೇಖಿಸದೆಯೇ ಪರೋಕ್ಷವಾಗಿ ‘ಪನೌತಿ (ಅಪಶಕುನ)’ ಎಂದು ವ್ಯಂಗ್ಯವಾಡಿದ್ದಾರೆ.

ಟೀಮ್ ಇಂಡಿಯಾದ ಸೋಲಿಗೆ ‘ಕೆಟ್ಟ ಶಕುನ’ ಅಲ್ಲಿದ್ದದ್ದು ಕಾರಣ ಎನ್ನುವ ಮೂಲಕ ವ್ಯಂಗ್ಯವಾಡಿದ್ದು, ಈ ವಿಡಿಯೋ ಈ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

“ಪನೌತಿ (ಕೆಟ್ಟ ಶಕುನ) ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬಂದಿತ್ತು. ಇದರಿಂದಾಗಿ ಟೀಂ ಇಂಡಿಯಾ ಗೆಲ್ಲಬೇಕಿದ್ದ ಪಂದ್ಯವನ್ನು ಸೋತಿದೆ. ಮಾಧ್ಯಮಗಳು ಹಾಗೂ ಟಿವಿಯಲ್ಲಿ ಇದನ್ನು ತೋರಿಸುವುದಿಲ್ಲ. ಆದರೆ, ನಿಜ ಹೇಳಬೇಕೆಂದರೆ ಇದು ದೇಶದ ಜನತೆಗೆ ಗೊತ್ತಿದೆ” ಎಂದು ಪರೋಕ್ಷವಾಗಿ ಪ್ರಧಾನಿ ಹೆಸರು ಹೇಳದೆಯೇ ಟಾಂಗ್ ನೀಡಿದ್ದಾರೆ. ಈ ವೇಳೆ ಅಲ್ಲಿ ಸೇರಿದ್ದ ಜನರು ನಕ್ಕು ಬೊಬ್ಬೆ ಹೊಡೆದಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ಬಿಜೆಪಿಗರನ್ನು ಕೆರಳಿಸಿದೆ.

ರಾಹುಲ್ ಅವರ ‘ಪನೌತಿ’ ಹೇಳಿಕೆಗೆ ಗರಂ ಆಗಿರುವ ಬಿಜೆಪಿ ಮುಖಂಡ ಮಂಜಿಂದರ್ ಸಿಂಗ್ ಸಿರ್ಸಾ, ‘ರಾಹುಲ್ ಗಾಂಧಿಯವರು ಹೇಳಿಕೆ ಖಂಡನೀಯ. ಚುನಾವಣೆಯಲ್ಲಿ ಗೆದ್ದು ದೇಶದ ಪ್ರಧಾನಿಯಾಗಿರುವವರನ್ನು ‘ಪನೌತಿ’ ಎಂದು ಹೇಳುವ ಮೂಲಕ ನಿಂದನೀಯ ಪದಗಳನ್ನು ಬಳಸಿದ್ದಾರೆ. ಅಧಿಕಾರಕ್ಕಾಗಿ ಗಾಂಧಿ ಕುಟುಂಬ ಈ ರೀತಿಯ ಹೇಳಿಕೆ ಒಪ್ಪುವಂಥದ್ದಲ್ಲ. ಇಡೀ ಜಗತ್ತಿನ ದೊಡ್ಡ ಅಪಶಕುನಗಳು ನಿಮ್ಮ ಗಾಂಧಿ ಪರಿವಾರ. ನಿಮ್ಮ ಹೇಳಿಕೆಗೆ 140 ಕೋಟಿ ಭಾರತೀಯರು ಉತ್ತರ ನೀಡಲಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...