ವಾಟ್ಸ್ಆ್ಯಪ್ ಯೂನಿವರ್ಸಿಟಿಯಲ್ಲಿ ಪಿಎಚ್‌ಡಿ ಮಾಡಿದವರ ಪಾಠ ನಮ್ಮ ಮಕ್ಕಳಿಗೆ ಬೇಡ: ಪ್ರಿಯಾಂಕ್ ಖರ್ಗೆ

Date:

  • ಶಾಲಾ ಪಠ್ಯದಲ್ಲಿನ ಚಕ್ರವರ್ತಿ ಸೂಲಿಬೆಲೆ ಪಠ್ಯ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ಅಸಮಾಧಾನ
  • ನಮ್ಮ ಮಕ್ಕಳಿಗೆ ಗೌರವಯುತ ನೀತಿಯುಕ್ತ ಶಿಕ್ಷಣ ಕೊಡಿಸುವ ಬದ್ದತೆ ನಮಗಿದೆ ಎಂದ ಸಚಿವ

ನಮ್ಮ ಮಕ್ಕಳಿ ಗೌರವಯುತ ಹಾಗೂ ಜವಾಬ್ದಾರಿಯುತ ನೈತಿಕ ಶಿಕ್ಷಣವನ್ನು ನಾವು ಕೊಡಿಸುತ್ತೇವೆ. ವಾಟ್ಸ್ಆ್ಯಪ್ ಯೂನಿವರ್ಸಿಟಿಗಳಿಂದ ಪಿಎಚ್‌ಡಿ ಪಡೆದು ಬಂದವರ ಪಾಠ ಓದುವ ದುರಂತ ಅವರಿಗೆ ಎದುರಾಗದಿರಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚಕ್ರವರ್ತಿ ಸೂಲಿಬೆಲೆ ಪಠ್ಯ ತೆಗೆಯುವ ವಿಚಾರಕ್ಕೆ ಸ್ಪಷ್ಟೀಕರಣ ನೀಡಿ, ಅವರ ವಿರುದ್ಧ ಹರಿಹಾಯ್ದರು.

ಪಠ್ಯ ಪರಿಷ್ಕರಣೆ ಮಾಡುವುದರಲ್ಲಿ ಎರಡು ಮಾತಿಲ್ಲ. ಈ ವೇಳೆ ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ತೆಗೆಯುತ್ತೇವೆ. ಅವನು ಯಾವ ಪಿಹೆಚ್ಡಿ ಮಾಡಿದ್ದಾರೆ. ಇವರೆಲ್ಲಾ ವಾಟ್ಸ್ಆ್ಯಪ್ ಯೂನಿವರ್ಸಿಟಿಯಲ್ಲಿ ಓದಿದವರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನು ಆತನ ಪಠ್ಯವನ್ನು ಓದಿಲ್ಲ. ಹಾಗೆಯೇ ಸೂಲಿಬೆಲೆ ಬರೆದಿರುವ ಪಠ್ಯವನ್ನು ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಸೂಲಿಬೆಲೆ ಬರೆದಿರುವ ಲೇಖನವನ್ನು ಪಠ್ಯ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದರು ಎಂದು ಬಿಜೆಪಿಯವರು ತಿಳಿಸಲಿ ಎಂದು ಪ್ರಿಯಾಂಕ್ ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ?:ಜೂನ್​​ 30ರೊಳಗೆ ಎಲ್ಲ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸಲು ಲೋಕಾಯುಕ್ತ ಗಡುವು

ಭಗತ್ ಸಿಂಗ್ ಬಗ್ಗೆ ಅಪಾರವಾದ ಗೌರವ ಇದೆ. ಅವರನ್ನೂ ಒಳಗೊಂಡಂತೆ ಹಲವು ಪ್ರಮುಖರ ಇತಿಹಾಸ ನಮ್ಮ ಬಳಿ ಇದೆ. ಅವರ ನಿಜವಾದ ಇತಿಹಾಸ ನಾವು ಹೇಳುತ್ತೇವೆ. ಇತಿಹಾಸವನ್ನು ತಿರುಚದೆಯೇ ನೈಜವಾಗಿ ಇರುವ ಪಾಠವನ್ನು ನಾವು ಸೇರಿಸುತ್ತೇವೆ, ಸೂಲಿಬೆಲೆಗಿಂತ ಒಳ್ಳೆ ಸಾಹಿತಿಗಳು ನಮ್ಮಲ್ಲಿ ಇಲ್ಲವೇ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ಸೂಲಿಬೆಲೆ ಕಟ್ಟು ಕತೆಗಳನ್ನು ಹೇಳುತ್ತಾರೆ. ವಾಸ್ತವವನ್ನು ಎಂದೂ ಹೇಳಿಲ್ಲ, ಹೀಗಿರುವಾಗ ಇಂತಹವನ ಪುಸ್ತಕವನ್ನು ನಮ್ಮ ಮಕ್ಕಳು ಓದಬೇಕಾ? ಈ ಪಾಠ ನಮ್ಮ ಮಕ್ಕಳು ಕಲಿತರೆ ಭವಿಷ್ಯ ಏನಾಗಬೇಕು ಎಂದು ಒಂದು ಕ್ಷಣ ಯೋಜಿಸಿದ್ದೀರಾ ಎಂದರು.

ಪಠ್ಯದಲ್ಲಿ ಯಾವುವು ಕೇಸರಿಕರಣವಾಗಿವೆಯೋ ಅವನ್ನೆಲ್ಲಾ ತೆಗೆದು ಮೌಲ್ಯಯುತ ಪಠ್ಯ ಕ್ರಮ ರೂಪಿಸುತ್ತೇವೆ ಎಂದು ಸಚಿವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...