ದುಷ್ಟ ಸರ್ಕಾರದ ವಿರುದ್ಧ ನಮ್ಮ ಹೋರಾಟ, ಸಂವಿಧಾನ ಉಳಿವಿಗಾಗಿ ಜೀವ ಕೊಡಲು ಸಿದ್ಧ: ಪ್ರಿಯಾಂಕಾ ಗಾಂಧಿ

Date:

ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದವರು ನಾವಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಇತಿಹಾಸ ನಮ್ಮದು‌. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ನಮ್ಮ ಜೀವ ಕೊಡಲು ನಾವು ಸಿದ್ಧರಿದ್ದೇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.

ಬೆಳಗಾವಿ ಸಿಪಿಇಡ್ ಮೈದಾನದಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿ ನೆನಪಿಗಾಗಿ ಆಯೋಜಿಸಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ದುಷ್ಟ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ. ನಮ್ಮ ಜೊತೆ ನೀವು ಹೋರಾಟಕ್ಕೆ ಸಂಕಲ್ಪ ತೊಡಬೇಕು” ಎಂದು ಕರೆ ನೀಡಿದರು.

ಭಾಷಣದ ಉದ್ದಕ್ಕೂ ಕೈಯಲ್ಲಿ ಸಂವಿಧಾನ ಗ್ರಂಥ ಹಿಡಿದೇ ಮಾತನಾಡಿದ ಅವರು, “ಸಂವಿಧಾನ ಕೇವಲ ಪುಸ್ತಕ ಅಲ್ಲ. ಎಲ್ಲ ಸಹೋದರ, ಸಹೋದರಿಯರೇ ತಮ್ಮೆಲ್ಲರ‌ನ್ನು ಕಾಪಾಡುವ ರಕ್ಷಾ ಕವಚ. ಇಂತಹ ಅಂಬೇಡ್ಕರ್ ಅವರನ್ನು ಸಂಸತ್ತಿನಲ್ಲಿ ನಿಂತು ಕೇಂದ್ರ ಗೃಹಸಚಿವ ಅಮಿತ್ ಶಾ ಅಪಮಾನ ಮಾಡಿದ್ದಾರೆ. ಇಂಥ ಸರ್ಕಾರ ಮತ್ತು ಮಂತ್ರಿಯನ್ನು ಹಿಂದೆಂದೂ ನೋಡಿರಲಿಲ್ಲ. ಸಂವಿಧಾನ ಮತ್ತು ಅಂಬೇಡ್ಕರ್ ಅವರ ಮೇಲಿನ ಅಪಮಾನ ಸಹಿಸಬೇಡಿ. ಸಂವಿಧಾನ ರಕ್ಷಿಸಲು ತಮ್ಮ ಪ್ರಾಣ ತ್ಯಾಗಕ್ಕೂ ಸಿದ್ಧರಾಗಿ” ಎಂದು ಪ್ರೇರೆಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2024ರ ಚುನಾವಣೆಯಲ್ಲಿ ಹಲವು ಕಡೆಗಳಲ್ಲಿ ಸಂವಿಧಾನ ಬದಲಾಯಿಸುತ್ತೇವೆ ಎಂದು ಭಾಷಣ ಮಾಡಿದ್ದರು. ಬಿಜೆಪಿಯವರು ದೇಶದ ಮೂಲ ತತ್ವ, ಸಿದ್ಧಾಂತ, ವಿವಿಧತೆಯಲ್ಲಿ ಏಕತೆಗಳ‌ ಮೇಲೆ ಆಕ್ರಮಣ ಮಾಡಿ, ಅವುಗಳನ್ನು ಮುಗಿಸುವ ಹುನ್ನಾರ ನಡೆಸಿದ್ದಾರೆ. ಆರ್​ಎಸ್​ಎಸ್​ ಸಂಸ್ಥಾಪಕರು ಸಂವಿಧಾನ ವಿರೋಧಿ ಆಗಿದ್ದರು. ಮೊದಲ ಬಾರಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಸಂವಿಧಾನ ವಿಮರ್ಶೆ ಶುರು ಮಾಡಿದರು” ಎಂದರು.

“ಬಿಜೆಪಿಯವರು ಮೀಸಲಾತಿ, ಸಾಮಾಜಿಕ ನ್ಯಾಯದ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ತಮಗೆ ಶಕ್ತಿ ತುಂಬಿದ ಆರ್​​ಟಿಐ ಬದಲಿಸುತ್ತಿದ್ದಾರೆ. ಲೋಕಪಾಲ್ ಕಾಯ್ದೆ, ಚುನಾವಣೆ ಆಯೋಗದ ಶಕ್ತಿ ಕುಗ್ಗಿಸಿದ್ದಾರೆ. ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ಹಲ್ಲೆ ಮಾಡಿದವರ ಪರ ನಿಲ್ಲುತ್ತಾರೆ. ಕಾರ್ಮಿಕರ ಹಕ್ಕು ಕಸಿದು ಕೊಳ್ಳುತ್ತಿದ್ದಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನ | ಆರ್‌ಎಸ್‌ಎಸ್‌ ಸಿದ್ಧಾಂತ ಹಿಮ್ಮೆಟ್ಟಿಸೋಣ: ಸಿಎಂ ಸಿದ್ದರಾಮಯ್ಯ ಕರೆ

ಬಂಡವಾಳ ಶಾಹಿಗಳ ಸಾಲಮನ್ನಾ

“ರೈತ ನೂರಾರು ಸಂಕಷ್ಟದಲ್ಲಿ ಒದ್ದಾಡುತ್ತಿದ್ದಾನೆ. 1 ಲಕ್ಷ ರೂ‌. ಸಾಲಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬೆಲೆ ಏರಿಕೆ ಗಗನಕ್ಕೇರಿದೆ. ರೈತ ಸಾಲದಲ್ಲಿ ಮುಳುಗುತ್ತಿದ್ದಾನೆ. ಟೂತ್ ಪೆಸ್ಟ್, ಚಹಾಪುಡಿ, ಕಾಫಿ, ಬ್ರೆಡ್, ತಿಂಡಿ, ಮಕ್ಕಳ ಸಮವಸ್ತ್ರ, ಪುಸ್ತಕ, ಪೆನ್ನು, ಬೂಟು, ಪಾದರಕ್ಷೆ ಸೇರಿ ಎಲ್ಲದರ ಮೇಲೂ ಜಿಎಸ್‌ಟಿ ಹೇರಿದ್ದಾರೆ. ಅದಾನಿ, ಅಂಬಾನಿಗಳು ಟ್ಯಾಕ್ಸ್ ಹೆಚ್ಚಿಸಿದ್ದಾರಾ? ಅಲ್ಲದೇ ಬಂಡವಾಳ ಶಾಹಿಗಳ 17 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ರಾಹುಲ್​ ಅನಾರೋಗ್ಯ

” ಅನಾರೋಗ್ಯದಿಂದ ನಮ್ಮ ಅಣ್ಣ ರಾಹುಲ್ ಗಾಂಧಿ ಅವರು ಸಮಾವೇಶಕ್ಕೆ ಬರಲು ಆಗಿಲ್ಲ. ದೇಶಕ್ಕಾಗಿ ರಾಹುಲ್ ಗಾಂಧಿ ಪ್ರತಿಕ್ಷಣ ಹೋರಾಡುತ್ತಿದ್ದಾರೆ. ರಾಹುಲ್ ಸಂವಿಧಾನದ ಪರವಾಗಿ ಆಡುವ ಮಾತನ್ನು ತಡೆಯುತ್ತಿದ್ದಾರೆ. ಅಧಿಕಾರದಲ್ಲಿರುವ ಬಿಜೆಪಿಗೆ ರಾಹುಲ್ ಬಗ್ಗೆ ಭಯವಿದೆ. ರಾಹುಲ್ ಸತ್ಯದ ಪರವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ, ರಾಹುಲ್ ಗಾಂಧಿ ಅವರನ್ನು ನೋಡಿದರೆ ಬಿಜೆಪಿಗರು ಹೆದರುತ್ತಾರೆ. ಅವರ ವಿರುದ್ಧ ನೂರಾರು ಕೇಸ್ ಹಾಕಿದ್ದಾರೆ” ಎಂದರು.

“ಮಲ್ಲಿಕಾರ್ಜುನ ಖರ್ಗೆ ಸೇರಿ ಎಲ್ಲ ನಾಯಕರು ಮತ್ತು ನಾನು ಕೂಡ ಹೆದರಲ್ಲ. ಯಾಕೆಂದರೆ ಸತ್ಯ ನಿಷ್ಠೆ ಮೇಲೆ ನಾವು ಹೋರಾಡುತ್ತಿದ್ದೇವೆ. ಸಂವಿಧಾನವೇ ನಮ್ಮ ಸಿದ್ಧಾಂತ. ಸಮಾನತೆ, ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಜನರಿಗಾಗಿ ನಮ್ಮ ಜೀವ ತ್ಯಾಗ ಮಾಡಲು ಸಿದ್ಧರಿದ್ದೇವೆ” ಎಂದು ಪ್ರಿಯಾಂಕಾ ಗಾಂಧಿ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...