ಜೆಡಿಎಸ್‌ನವರನ್ನು ಪ್ರಧಾನಿ, ಮುಖ್ಯಮಂತ್ರಿ ಮಾಡಿದ್ದೇ ನಮ್ಮ ಪಕ್ಷ: ಡಿ ಕೆ ಸುರೇಶ್

Date:

ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ ಎಂದು ಸಂಸದ ಡಿ ಕೆ ಸುರೇಶ್ ತಿರುಗೇಟು ನೀಡಿದ್ದಾರೆ.

“ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕೊಯ್ಯುವ ಕೆಲಸ ಮಾಡಿಲ್ಲ” ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಮಾಧ್ಯಮದವರು ಕೇಳಿದಾಗ ಸುರೇಶ್ ಅವರು ಸದಾಶಿವನಗರ ನಿವಾಸದ ಬಳಿ ಬುಧವಾರ ಪ್ರತಿಕ್ರಿಯಿಸಿದರು.

“ಜೆಡಿಎಸ್ ನವರನ್ನು ಈ ದೇಶದ ಪ್ರಧಾನಿ, ರಾಜ್ಯದ ಸಿಎಂ ಮಾಡಿದ್ದೇವೆ. ಈ ದೇಶ ಗುರುತಿಸುವಂತಹ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ರಾಜ್ಯದ ಮೂವತ್ತು ಸಿಎಂಗಳಲ್ಲಿ ಕುಮಾರಸ್ವಾಮಿ ಅವರು ಒಬ್ಬರಾಗುತ್ತಿರಲಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ನಾನು ಹೆಚ್ಚು ಉತ್ತರ ನೀಡಲು ಹೋಗುವುದಿಲ್ಲ. ಆರೋಗ್ಯ ಸರಿ ಇಲ್ಲ ಎಂದು ಆಸ್ಪತ್ರೆ ಸೇರಿರುವ ಅವರು ಆದಷ್ಟು ಬೇಗ ಗುಣಮುಖರಾಗಲಿ. ರಾಜಕಾರಣದಲ್ಲಿ ಎದುರಾಳಿಗಳು ಬಲಿಷ್ಠವಾಗಿದ್ದಷ್ಟು ಚೆನ್ನಾಗಿ ಕೆಲಸ ಮಾಡಲು ಸಾಧ್ಯ. ಅದಕ್ಕೆ ಅವರು ಮೊದಲು ಗುಣಮುಖರಾಗಲಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಬಿಜೆಪಿ-ಜೆಡಿಎಸ್ ನಡುವಿನ ಬಿರುಕಲ್ಲ, ಬಿಕ್ಕಟ್ಟಲ್ಲ, ಆಟ

ದೇವೇಗೌಡರು ಈ ಹಿಂದೆ ಆಡಿದ್ದ ಮಾತುಗಳನ್ನು ಜನರಿಗೆ ತೋರಿಸಿ

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಂತೆ ಇದೆಯಲ್ಲ ಎಂದು ಕೇಳಿದಾಗ, “ಜಾತ್ಯತೀತ ತತ್ವಗಳ ಬಗ್ಗೆ ನಾನು ಮಾತನಾಡಿದರೆ ಪ್ರಚಾರ ಆಗುವುದಿಲ್ಲ. ನಿಮಗೆ ಬೇಕಾದ ಹೇಳಿಕೆಗಳನ್ನು ನಾನು ಕೊಡಲು ಆಗುವುದಿಲ್ಲ. ಮಾಜಿ ಪ್ರಧಾನಿಗಳು ಹಿಂದೆ ಹೇಳಿದ್ದ, ‘ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆʼ, ʼಮೋದಿ ಗೆದ್ದರೆ ದೇಶ ಬಿಟ್ಟು ಹೋಗುತ್ತೇನೆʼ, ʼರಾಜ್ಯಕ್ಕೆ ರಾಷ್ಟ್ರೀಯ ಪಕ್ಷಗಳ ಅವಶ್ಯಕತೆಯಿಲ್ಲ, ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆʼ -ಎಂಬೆಲ್ಲ ಹೇಳಿಕೆಗಳನ್ನು ಜನರಿಗೆ ತೋರಿಸಿ” ಎಂದರು.

ಹನುಮಾನ್ ಚಾಲೀಸಾ ವಿವಾದದ ಬಗ್ಗೆ ಕೇಳಿದಾಗ “ಮಾಧ್ಯಮದವರು ಪ್ರಚಾರ ನೀಡುತ್ತಾರೆ ಎಂದು ಭಾವಿಸಿ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ಸಣ್ಣ ವಿಚಾರಗಳನ್ನು ಅನವಶ್ಯಕವಾಗಿ ದೊಡ್ಡದು ಮಾಡುವ ಪ್ರವೃತ್ತಿಯನ್ನು ಬಿಜೆಪಿಗೆ ಯಾರೂ ಹೇಳಿಕೊಡಬೇಕಾಗಿಲ್ಲ” ಎಂದು ವ್ಯಂಗ್ಯವಾಡಿದರು.

ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ

ತಮಿಳುನಾಡಿನ ಕೃಷ್ಣಗಿರಿ ಸೇರಿದಂತೆ ಇತರೆಡೆಯಿಂದ ಬಂದು ಬಾಂಬ್ ಇಡುತ್ತಾರೆ ಎನ್ನುವ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಉನ್ನತ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಬಳಿ ಇವೆ. ಭಯೋತ್ಪಾದಕರು ಎಲ್ಲೆಲ್ಲಿ ಇದ್ದಾರೆ ಎನ್ನುವುದು ಅವರಿಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುವುದು ಬಿಟ್ಟು ಕೇಂದ್ರ ಸರ್ಕಾರದ ಬಳಿ ಪ್ರಶ್ನೆ ಮಾಡಲಿ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...