ದೇಶಪ್ರೇಮಿ ಯುವಜನರ ಸಮಾವೇಶ | ಪಕೋಡಾ ಪ್ರದರ್ಶಿಸಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ

Date:

ದೇಶವನ್ನು ಅಭಿವೃದ್ಧ ಪತದಲ್ಲಿ ಕೊಂಡೊಯ್ಯುತ್ತೇವೆ ಎಂದಿದ್ದ ಮೋದಿ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆಂದು ಭರವಸೆ ನೀಡಿದ್ದರು. ಆದರೆ, ಉದ್ಯೋಗಗಳನ್ನು ಎಲ್ಲಿ ಸೃಷ್ಟಿಸಿದ್ದೀರಿ ಎಂದು ಹೇಳಿದರೆ, ಪಕೋಡಾ ಮಾರುವುದು ಉದ್ಯೋಗವೇ ಎಂದು ಹೇಳಿ, ಯುವಜನರನ್ನು ಕಡೆಗಣಿಸುವ ಮಾತನಾಡಿದ್ದಾರೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಸಂಚಾಲಕ ಸರೋವರ್ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೆವಿಎಸ್‌ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ‘ದೇಶಪ್ರೇಮಿ ಯುವಜನರ ಸಮಾವೇಶ’ವನ್ನು ಮೋದಿ ಹೇಳಿದ್ದ ‘ಪಕೋಡಾ’ ಪ್ರದರ್ಶಿಸುವ ಮೂಲಕ ಬಹುಭಾಷಾ ನಟ ಪ್ರಕಾಶ್ ರಾಜ್ ಉದ್ಘಾಟಿಸಿದರು.

ಉದ್ಘಾಟನೆ ವೇಳೆ ಮಾತನಾಡಿದ ಸರೋವರ್, “ಯುವಜನರಿಗೆ ಉದ್ಯೋಗ ಎಲ್ಲಿ ಅಂತ ಹೇಳಿದರೆ, ಪಕೋಡಾ ಮಾರುವುದು ಉದ್ಯೋಗವೆಂದು ಮೋದಿ ಹೇಳಿದ್ದಾರೆ. ಪಕೋಡಾ ಮಾರುವುದು ಅವಮಾನವಲ್ಲ. ಆದರೆ, ಪಕೋಡಾ ಮಾರಲು ಕೇಂದ್ರ ಸರ್ಕಾರ ಯಾವ ಯೋಜನೆಯನ್ನೂ ಕೊಟ್ಟಿಲ್ಲ. ಪಕೊಡಾ ಮಾರಿಯೇ ಜೀವನ ನಡೆಸೋಣ ಎಂದರೆ, ಅಡುಗೆ ಅನಿಲ, ಅಡುಗೆ ಎಣ್ಣೆಯ ಬೆಲೆಯನ್ನೂ ಪ್ರಧಾನಿ ಮೋದಿ ಸರ್ಕಾರ ಏರಿಸಿದೆ. ಪಕೋಡಾ ಮಾರುವುದೂ ಕಷ್ಟವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆಂದು 2014ರ ಚುನಾವಣೆಯಲ್ಲಿ ಹೇಳಿದ್ದರು. ಈಗ ಅವರು ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. 10 ವರ್ಷದಲ್ಲಿ ಸೃಷ್ಟಿಯಾಗಬೇಕಿದ್ದ 20 ಕೋಟಿ ಉದ್ಯೋಗಗಳು ಎಲ್ಲಿವೆ. ಆ 20 ಕೋಟಿ ಉದ್ಯೋಗಗಳು ನಮ್ಮ ಕಣ್ಣಿಗೆ ಕಾಣುತ್ತಿಲ್ಲ ಯಾಕೆ” ಎಂದು ಸರೋವರ್ ಪ್ರಶ್ನಿಸಿದರು.

“ಪದವಿ, ಸ್ನಾತಕೋತ್ತರ ಪದವಿ, ಡಿಪ್ಲಮಾ, ಎಂಜಿನಿಯರಿಂಗ್, ಎಂಬಿಬಿಎಸ್‌ ಸೇರಿದಂತೆ ನಾನಾ ವೃತ್ತಿಪರ ಕೋರ್ಸ್‌ಗಳಲ್ಲಿ ಶಿಕ್ಷಣ ಪಡೆದ ನಮಗೆ ಮೋದಿ ಅವರು ಪಕೋಡಾ ಮಾರಲು ಹೇಳಿದ್ದೇಕೆ? ಸರ್ಕಾರ ಯುವಜನರಿಗೆ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮೋದಿ ಆಡಳಿತದಲ್ಲಿ 60 ಲಕ್ಷ ಸರ್ಕಾರ ಹುದ್ದೆಗಳು ಖಾಲಿ ಉಳಿದಿವೆ. ಅವುಗಳನ್ನು ಭರ್ತಿ ಮಾಡಲು ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ದೇಶದಲ್ಲಿ 3.8 ಕೋಟಿ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಮೋದಿ ಆಡಳಿತದಲ್ಲಿ ಕಳೆದ 45 ವರ್ಷಗಳಲ್ಲಿಯೂ ಕಂಡರಿಯದಷ್ಟು ಪ್ರಮಾಣದಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಯುವಜನರಿಗೆ ಉದ್ಯೋಗ ನೀಡುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...