ವಿಧಾನ ಪರಿಷತ್‌ಗೆ 300ಕ್ಕೂ ಹೆಚ್ಚು ಆಕಾಂಕ್ಷಿಗಳು, ಹೈಕಮಾಂಡ್ ಅಂತಿಮ ನಿರ್ಧಾರ : ಡಿ ಕೆ ಶಿವಕುಮಾರ್

Date:

ವಿಧಾನ ಪರಿಷತ್ ಚುನಾವಣೆ ಟಿಕೆಟ್‌ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲಾ ವರ್ಗದಲ್ಲೂ ಆಕಾಂಕ್ಷಿಗಳಿದ್ದಾರೆ. ಈ ಬಾರಿ ಎಲ್ಲ ವರ್ಗದವರಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಎಲ್ಲರೂ ಬ್ಲಾಕ್, ಜಿಲ್ಲಾ, ರಾಜ್ಯಮಟ್ಟದಲ್ಲಿ ಪಕ್ಷಕ್ಕೆ ದುಡಿದಿದ್ದಾರೆ. ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿದಂತೆ ಎಲ್ಲಾ ಕಡೆಯಿಂದ ಅವಕಾಶ ನೀಡಬೇಕು ಎನ್ನುವ ಬೇಡಿಕೆ ಇದೆ. ಕೆಲವು ಸ್ಥಾನಗಳಲ್ಲಿ ಹಾಲಿ ಸದಸ್ಯರು ಇದ್ದಾರೆ. ಹೀಗಾಗಿ ಈ ಬಾರಿ ಕಷ್ಟಕರ ಪರಿಸ್ಥಿತಿ ಎದುರಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ, ಡಿಸಿಎಂ ಅವರೇ ಎಲ್ಲಾ ತೀರ್ಮಾನ ಮಾಡಬಾರದು ಎನ್ನುವ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಖಂಡಿತ, ನಾವು ಅವರ ಅಭಿಪ್ರಾಯವನ್ನು ಕೇಳುತ್ತೇವೆ” ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಬಗ್ಗೆ ಕೇಳಿದಾಗ, “ಈ ವಿಚಾರವನ್ನು ಪತ್ರಿಕೆಗಳಲ್ಲಿ ಓದಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ದೆಹಲಿ ಭೇಟಿ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗುತ್ತದೆಯೇ ಎಂದು ಕೇಳಿದಾಗ, “ಈ ಬಗ್ಗೆ ನಿಮಗೆ ಮಾತ್ರ ಮಾಹಿತಿ ಇರಬಹುದು” ಎಂದಷ್ಟೇ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...