ಪಹಲ್ಗಾಮ್ ದಾಳಿ | ಪ್ರತೀಕಾರಕ್ಕಿಂತ ಮೊದಲು ಮೋದಿ-ಶಾ ರಾಜೀನಾಮೆ ಕೇಳಿ: ಬಿಜೆಪಿಯ ಸುಬ್ರಹ್ಮಣಿಯನ್ ಸ್ವಾಮಿ

Date:

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಕೇವಲ ಪ್ರತೀಕಾರ ಕೇಳಿದರೆ ಸಾಲದು, ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಕೇಳಬೇಕು ಎಂದು ಬಿಜೆಪಿ ನಾಯಕ ಸುಬ್ರಹ್ಮಣಿಯನ್‌ ಸ್ವಾಮಿ ಆಗ್ರಹಿಸಿದ್ದಾರೆ.

ಮಂಗಳವಾರ, ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿ 28 ಮಂದಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆ ದಾಳಿ ನಡೆಸಿ, ಹತ್ಯೆಗೈದಿದೆ ಎಂದು ಹೇಳಲಾಗಿದೆ. ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೆಗೆದುಕೊಳ್ಳಬೇಕೆಂಬ ಆಗ್ರಹಗಳೂ ಕೇಳಿಬರುತ್ತಿವೆ.

ಈ ನಡುವೆ, ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, “ಪ್ರತೀಕಾರ ಕೇಳುವ ಬದಲು, ಮೊದಲು ಮೋದಿ-ಶಾ ಅವರ ರಾಜೀನಾಮೆಯನ್ನು ಕೇಳಬೇಕು. ಅವರು ಏನೆಂದು ಹಲವು ಬಾರಿ ಗೊತ್ತಾಗಿದೆ. ಚೀನಾ, ಪಾಕಿಸ್ತಾನ, ಮಾಲ್ಡೀವ್ಸ್, ಬಾಂಗ್ಲಾದೇಶಗಳ ವಿಚಾರದಲ್ಲಿ ಇಬ್ಬರೂ ಶರಣಾಗಿದ್ದಾರೆ. ಅವರು ಭಾರತ ಮಾತೆಯನ್ನು ಅವಮಾನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...