10 ವರ್ಷಗಳ ನಂತರ ಪಾಕ್ ಸಚಿವ ಭಾರತಕ್ಕೆ ಭೇಟಿ; ಜೈಶಂಕರ್‌ ಆಹ್ವಾನ ಹಿನ್ನೆಲೆ ಆಗಮನ

Date:

  • ಗೋವಾದಲ್ಲಿ ನಡೆಯುವ ವಿದೇಶಾಂಗ ಸಚಿವರ ಸಭೆಯಲ್ಲಿ ಭೇಟಿ
  • 2014 ರಲ್ಲಿ ನವಾಜ್ ಷರೀಫ್ ನಂತರ ಪಾಕ್‌ ನಾಯಕರು ಭಾರತಕ್ಕೆ ಭೇಟಿ ನೀಡಿರಲಿಲ್ಲ

ಗೋವಾದಲ್ಲಿ ನಡೆಯುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಪಾಕ್‌ನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಅವರು ಮುಂದಿನ ತಿಂಗಳು(ಮೇ) ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಲಾವಲ್ ಭುಟ್ಟೋ ಜರ್ದಾರಿ ಅವರು 2023, ಮೇ 4 ಮತ್ತು 5 ರಂದು ಭಾರತದ ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಕಿಸ್ತಾನದ ನಿಯೋಗವನ್ನು ಮುನ್ನಡೆಸಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಆಹ್ವಾನ ನೀಡಿದ್ದರಿಂದ ಪಾಕಿಸ್ತಾನದ ಸಚಿವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ” ಎಂದು ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ತಿಳಿಸಿದ್ದಾರೆ.

“ಶಾಂಘೈ ಸಹಕಾರ ಸಂಘಟನೆಯ ಸಭೆಯಲ್ಲಿ ನಮ್ಮ ಭೇಟಿಯು ನಮ್ಮ ದೇಶದ ಹಕ್ಕುಗಳು ಮತ್ತು ಪ್ರಕ್ರಿಯೆಗಳಿಗೆ ಪಾಕಿಸ್ತಾನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ಪಾಕಿಸ್ತಾನವು ತನ್ನ ವಿದೇಶಾಂಗ ನೀತಿಯ ಆದ್ಯತೆಗಳಲ್ಲಿ ಭೇಟಿ ನೀಡುವ ದೇಶಕ್ಕೆ ನೀಡುವ ಪ್ರಾಮುಖ್ಯತೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಮುಮ್ತಾಜ್ ಜಹ್ರಾ ಬಲೋಚ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಎಫ್‌ಸಿಆರ್‌ಎ ಅಡಿ ಸಿಬಿಐ ಪ್ರಕರಣ

ಜರ್ದಾರಿ ಅವರ ಭಾರತ ಭೇಟಿಯು 2014 ರಲ್ಲಿ ನವಾಜ್ ಷರೀಫ್ ನಂತರ ಪಾಕಿಸ್ತಾನಿ ನಾಯಕರು ಆಗಮಿಸಿದ ಮೊದಲ ಭೇಟಿಯಾಗಿದೆ. ಶಾಂಘೈ ಸಹಕಾರ ಸಂಘಟನೆ ಒಂದು ಪ್ರಾದೇಶಿಕ ರಾಜಕೀಯ ಮತ್ತು ಭದ್ರತಾ ದೇಶಗಳ ಬಣವಾಗಿದ್ದು, ಈ ಸಂಘಟನೆಯ ಸದಸ್ಯರು ರಷ್ಯಾ, ಚೀನಾ, ಭಾರತ ಮತ್ತು ಪಾಕಿಸ್ತಾನವನ್ನು ಒಳಗೊಂಡಿದ್ದಾರೆ.

ಭಾರತವು ಜೂನ್ 9, 2017 ರಂದು ಎಸ್‌ಸಿಒದ ಪೂರ್ಣ ಸದಸ್ಯತ್ವವನ್ನು ಪಡೆದುಕೊಂಡಿದೆ. ಅಫ್ಘಾನಿಸ್ತಾನ್, ಬೆಲಾರಸ್, ಇರಾನ್ ಮತ್ತು ಮಂಗೋಲಿಯಾ ಎಂಬ ನಾಲ್ಕು ವೀಕ್ಷಕ ರಾಜ್ಯಗಳಿವೆ ಮತ್ತು ಅರ್ಮೇನಿಯಾ, ಅಜೆರ್ಬೈಜಾನ್, ಕಾಂಬೋಡಿಯಾ, ನೇಪಾಳ, ಶ್ರೀಲಂಕಾ ಮತ್ತು ಟರ್ಕಿ ದೇಶಗಳು ಸಂವಾದ ಪಾಲುದಾರರಾಗಿದ್ದಾರೆ. ಎಂಟು ಸದಸ್ಯರ ಶಾಂಘೈ ಸಹಕಾರ ಸಂಸ್ಥೆಯು ತನ್ನ ಸದಸ್ಯ ರಾಷ್ಟ್ರಗಳ ನಡುವೆ ಆರ್ಥಿಕ, ರಾಜಕೀಯ ಮತ್ತು ಮಿಲಿಟರಿ ಸಹಕಾರವನ್ನು ಉತ್ತೇಜಿಸುವ ಉದ್ದೇಶದಿಂದ ಎರಡು ದಶಕಗಳ ಹಿಂದೆ ಸ್ಥಾಪಿಸಲಾದ ಪ್ರಮುಖ ಪ್ರಾದೇಶಿಕ ಶಕ್ತಿ ಕೇಂದ್ರವಾಗಿದೆ. ಇದು ಪ್ರಪಂಚದ ಒಟ್ಟು ಜನಸಂಖ್ಯೆಯ ಸುಮಾರು ಶೇ. 42 ಮತ್ತು ಜಾಗತಿಕ ಜಿಡಿಪಿಯ ಶೇ 25 ರಷ್ಟನ್ನು ಪ್ರತಿನಿಧಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...