ಪಂಚಮಸಾಲಿ ಸಮುದಾಯ ಬಿಎಸ್‌ವೈ ಜೊತೆಗಿಲ್ಲ, ಅವರ ನಾಯಕತ್ವ ನಾವು ಒಪ್ಪಲ್ಲ: ಯತ್ನಾಳ್‌ ಕಿಡಿ

Date:

ಬಿ ಎಸ್​ ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಮುಳುಗಿ ಹೋಗುತ್ತೆ ಎಂದುಕೊಂಡಿರಬಹುದು. ನಾವಂತೂ ಯಡಿಯೂರಪ್ಪ ನಾಯಕತ್ವ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತೆ ಬಿಎಸ್‌ವೈ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.

ವಿಜಯಪುರ ತಾಲೂಕಿನ ತೊರವಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಲೋಕಸಭೆ ಚುನಾವಣೆ ಬಳಿಕ ಬಹಳ ದೊಡ್ಡ ಬದಲಾವಣೆಯಾಗುತ್ತದೆ. ಬದಲಾವಣೆಯಾಗಬೇಕೆಂಬ ಕೂಗು ಕರ್ನಾಟಕ ಬಿಜೆಪಿಯಲ್ಲಿ ಏಳುತ್ತೆ. ನಾಯಕರು, ಕಾರ್ಯಕರ್ತರ ಜತೆ ನಡೆದುಕೊಂಡ ರೀತಿ ಸರಿಯಿಲ್ಲ” ಎಂದರು.

“ಮೊದಲಿನಿಂದಲೂ ಬಿ ಎಸ್ ಯಡಿಯೂರಪ್ಪ ಜೊತೆಗೆ ಯಾವ ಸಮುದಾಯಗಳು ಇಲ್ಲ. ಪ್ರಮುಖವಾಗಿ ನಮ್ಮ ಪಂಚಮಸಾಲಿ ಸಮುದಾಯ ಜೊತೆಗಿಲ್ಲ. ನಮ್ಮ ಸಮುದಾಯಕ್ಕೆ ಬಿ ಎಸ್ ಯಡಿಯೂರಪ್ಪ ಮೋಸ ಮಾಡಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಅಡ್ಡಿ ಮಾಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಟಿಕೆಟ್ ಹಂಚಿಕೆಯಲ್ಲಿ ಭಿನ್ನಮತ ಅವರಿಂದಲೇ ಆಗುತ್ತಿದೆ. ತುಮಕೂರಿನಲ್ಲಿ ಬಿ.ಎಸ್​.ಯಡಿಯೂರಪ್ಪ ಶಿಷ್ಯ ಜೆ ಸಿ ಮಾಧುಸ್ವಾಮಿ. ಯಡಿಯೂರಪ್ಪ ಕೆಜೆಪಿ ಮಾಡಿದಾಗ ಚಂದ್ರಪ್ಪ ರಾಜೀನಾಮೆ ನೀಡಿ ಹೋಗಿದ್ದರು. ಈಗ ಅವರನ್ನು ಕರೆದು ಮಾತನಾಡಿಸದೆ ಟಿಕೆಟ್ ಘೋಷಣೆ ಮಾಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಸವಣ್ಣ, ಕುವೆಂಪು, ಶರೀಫರು ನಡೆದಾಡಿದ ಈ ನೆಲಕ್ಕೆ ಯೋಗಿ ಮಾದರಿಯ ಆಡಳಿತ ಬೇಕೇ ಭೈರಪ್ಪನವರೇ?

“ಚಿತ್ರದುರ್ಗದಲ್ಲಿ ಕಾರಜೋಳಗೆ ಕೊಡದಿದ್ದರೆ ಪ್ರಚಾರ ಮಾಡಲ್ಲ ಎಂದಿದ್ದಾರೆ. ಹೀಗಾಗಿ ಯಡಿಯೂರಪ್ಪ ಬ್ಲಾಕ್​ಮೇಲ್ ಮಾಡಿ ಕಾರಜೋಳಗೆ ಟಿಕೆಟ್ ಕೊಡಿಸಿದ್ದಾರೆ. ಈ ವಿಚಾರವನ್ನು ಶಾಸಕ ಚಂದ್ರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ರೇಣುಕಾಚಾರ್ಯ ಇದೇ ಯಡಿಯೂರಪ್ಪ ಶಿಷ್ಯ. ನನಗೂ ಬೇರೆ ಜಿಲ್ಲೆಗೆ ಹೋಗಿ ಲೋಕಸಭೆಗೆ ನಿಲ್ಲುವಂತೆ ಸೂಚಿಸಿದ್ದರು. ನಾವು ಬೇರೆ ಜಿಲ್ಲೆಗೆ ಹೋಗಿ ಅಲ್ಲಿಯ ಕಾರ್ಯಕರ್ತರಿಗೆ ತೊಂದರೆ ಕೊಡಬಾರದು” ಎಂದು ಮಾರ್ಮಿಕವಾಗಿ ಹೇಳಿದರು.

“ಶೆಟ್ಟರ್ ಬಲಿಕೊಡ್ತಾರೋ, ಹೆಬ್ಬಾಳ್ಕರ್ ಜತೆ ಒಳ ಒಪ್ಪಂದವಿದೆಯೋ ಗೊತ್ತಿಲ್ಲ. ಸಚಿವೆ ಹೆಬ್ಬಾಳ್ಕರ್​ಗೆ ಅನುಕೂಲ ಆಗುವಂತಹ ಕುತಂತ್ರವಿರಬಹುದು. ಇದನ್ನೆಲ್ಲ ಮಾಡುತ್ತಿರುವವರು ಅದೇ ಅಪ್ಪ ಮಕ್ಕಳು. ಅಪ್ಪ ಮಕ್ಕಳಿಗೆ ಕಳಕಳಿ ಇದ್ದರೆ ಕೆ.ಎಸ್.ಈಶ್ವರಪ್ಪಗೆ ಟಿಕೆಟ್​ ಕೊಡಬೇಕಿತ್ತು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...