ಕೈ ಪಾಳಯದಲ್ಲಿ ಡಿಸಿಎಂ ಸ್ಥಾನದ ಕಿಡಿ ಹೊತ್ತಿಸಿದ ಪರಮೇಶ್ವರ್‌

Date:

  • ಕೈ ಪಾಳಯದಲ್ಲಿ ಕಿಡಿ ಹೊತ್ತಿಸಿದ ಡಿಸಿಎಂ ಆಯ್ಕೆ ವಿಚಾರ
  • ಉಪಮುಖ್ಯಮಂತ್ರಿ ಪಟ್ಟಕ್ಕಾಗಿ ಜಿ ಪರಮೇಶ್ವರ್ ಬಿಗಿಪಟ್ಟು

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ರಚನೆ ಕಸರತ್ತು ಸಿಎಂ ಆಯ್ಕೆಯಷ್ಟೇ ಬಿಗಿಯಾಗುವ ಸಾಧ್ಯತೆ ಹುಟ್ಟುಹಾಕಿದೆ.

ಕಾಂಗ್ರೆಸ್ ನ ಐತಿಹಾಸಿಕ ಗೆಲುವಿನ ಅಲೆಯಲ್ಲಿ ಆಯ್ಕೆಯಾಗಿರುವ ಹಿರಿಕಿರಿಯ ನಾಯಕರುಗಳು ತಮ್ಮ ತಮ್ಮ ಸಾಧನೆ ಹಿನ್ನೆಲೆ ಮುಂದಿಟ್ಟು ತಮಗೆ ಮಂತ್ರಿ ಸ್ಥಾನ ಕೊಡುವಂತೆ ಪಕ್ಷ ನಾಯಕರನ್ನು ಒತ್ತಾಯಿಸುತ್ತಿದ್ದಾರೆ.

ಮತ್ತೊಂದು ಕಡೆ ಹೈ ಕಮಾಂಡ್ ಘೋಷಿಸಿದ ಏಕೈಕ ಡಿಸಿಎಂ ಪಟ್ಟವೂ ಪಕ್ಷದೊಳಗೆ ಅಸಮಾಧಾನದ ಕಿಡಿ ಹೊತ್ತಿಸಿದೆ. ಸಾಮೂಹಿಕ ನಾಯಕತ್ವದ ಮೇಲೆ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ವ್ಯಕ್ತಿ ಕೇಂದ್ರಿತ ಅಧಿಕಾರ ಹಂಚಿಕೆ ಸರಿಯಲ್ಲ ಎನ್ನುವುದು ಹಲವು ಕಾಂಗ್ರೆಸ್ ನಾಯಕರ ಅಭಿಮತ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಚಾರವನ್ನೇ ಮುನ್ನೆಲೆಗೆ ತಂದಿರುವ ಡಾ. ಜಿ ಪರಮೇಶ್ವರ್, ನಾನು ಈ ಹಿಂದೆ ಡಿಸಿಎಂ ಆಗಿದ್ದವನು. ದಲಿತ ಸಮುದಾಯಕ್ಕೆ ಸಿಎಂ ಪದವಿಯಂತೂ ಸಿಕ್ಕಿಲ್ಲ ಹೀಗಿದ್ದಾಗ, ಡಿಸಿಎಂ ಆದರೂ ಸಿಗಬೇಕು. ಅದನ್ನು ನಾನು ಕೇಳಬೇಕೆಂದೇನಿಲ್ಲ ಅವರೇ ಕೊಡಬೇಕು ಎಂದು ಹೇಳಿದ್ದಾರೆ.

ಈ ವಿಚಾರದಲ್ಲಿ ಇನ್ನೊಂದು ಹೆಜ್ಜೆ ಮುಂದೆ ಹೋಗಿರುವ ಪರಮೇಶ್ವರ್‌ “ಈ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ನಮ್ಮ ನಾಯಕತ್ವವು ನಿರ್ಧಾರ ತೆಗೆದುಕೊಳ್ಳಬೇಕು. ಅದು ಆಗದಿದ್ದರೆ ಸಹಜವಾಗಿಯೇ ಅದಕ್ಕೆ ಪ್ರತಿಕ್ರಿಯೆಗಳು ಬರುತ್ತವೆ. ಅದನ್ನು ನಾನು ಹೇಳುವ ಅಗತ್ಯವಿಲ್ಲ. ನಂತರ ಅದನ್ನು ಅರಿತುಕೊಳ್ಳುವ ಬದಲು ಈಗ ಅದನ್ನು ಸರಿಪಡಿಸದೆ ಇದ್ದಲ್ಲಿ ಪಕ್ಷಕ್ಕೆ ತೊಂದರೆಯಾಗಬಹುದು, ಅದನ್ನು ಅರ್ಥ ಮಾಡಿಕೊಳ್ಳುವಂತೆ ಹೇಳಲು ಬಯಸುತ್ತೇನೆ” ಎಂದು ಪರಮೇಶ್ವರ್‌ ಹೇಳಿದರು.

ಮತ್ತೊಂದು ಕಡೆ ಪಕ್ಷಕ್ಕೆ ಈ ಚುನಾವಣೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದ ಲಿಂಗಾಯತ ಹಾಗೂ ಅಲ್ಪಸಂಖ್ಯಾತ ಸಮುದಾಯಗಳೂ ತಮ್ಮ ಶಾಸಕರುಗಳಿಗೂ ಡಿಸಿಎಂ ಅವಕಾಶ ಕೊಡುವಂತೆ ಮನವಿ ಮಾಡಿಕೊಳ್ಳುತ್ತಿದೆ.

ಪರಮೇಶ್ವರ್ ಜೊತೆಗೆ ಈ ಹಿಂದೆಯೇ ಡಿಸಿಎಂ ವಿಚಾರದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದ ಎಂ ಬಿ ಪಾಟೀಲ್ ಅವಕಾಶ ಕೊಟ್ಟರೆ ನಾನು ಡಿಸಿಎಂ ಆಗುವೆ, ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ನಾನು ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ಈಗ ಅವಕಾಶ ಕೊಟ್ಟರೆ ಸಮುದಾಯಕ್ಕೆ ನ್ಯಾಯ ಸಲ್ಲಿಸಿದಂತೆ ಎಂದಿದ್ದರು.

ಇದೇ ಅಭಿಪ್ರಾಯವನ್ನು ಮಾಜಿ ಆರೋಗ್ಯ ಸಚಿವ ಯು ಟಿ ಖಾದರ್ ಕೂಡ ಹಂಚಿಕೊಂಡಿದ್ದರು. ಈ ಇಬ್ಬರು ನಾಯಕರುಗಳ ಅಭಿಪ್ರಾಯವನ್ನೇ ರಾಮಲಿಂಗಾರೆಡ್ಡಿ ಹಾಗೂ ಸತೀಶ್ ಜಾರಕಿಹೊಳಿ ಬೆಂಗಲಿಗರು ವ್ಯಕ್ತಪಡಿಸಿ ತಮ್ಮ ಸಮುದಾಯಗಳಿಗೂ ನ್ಯಾಯ ಒದಗಿಸಲು ಇವರಿಬ್ಬರನ್ನು ಡಿಸಿಎಂ ಮಾಡುವಂತೆ ಕಾಂಗ್ರೆಸ್‌ಗೆ ಒತ್ತಡ ಹೇರಿದ್ದವು.

ಈ ಸುದ್ದಿ ಓದಿದ್ದೀರಾ?:ರಾಜ್ಯ ರಾಜಕಾರಣದಲ್ಲಿ ಇನ್ನಾರು ತಿಂಗಳೊಳಗೆ ಭಾರೀ ಬದಲಾವಣೆ : ಎಚ್‌ಡಿಕೆ ಅಚ್ಚರಿ ಹೇಳಿಕೆ

ಇವೆಲ್ಲದರ ನಡುವೆ ಗುರುವಾರ ಸಂಜೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪರಮೇಶ್ವರ್ ತಮ್ಮ ಡಿಸಿಎಂ ಪದವಿ ಆಕಾಂಕ್ಷೆಯನ್ನು ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಒಟ್ಟಿನಲ್ಲಿ ಡಿಸಿಎಂ ಜೊತೆಗೆ ಸಚಿವ ಸ್ಥಾನಕ್ಕೆ ನೂತನ ಸರ್ಕಾರದಲ್ಲಿ ದೊಡ್ಡಮಟ್ಟದ ಲಾಬಿಯನ್ನು ಶಾಸಕರು ಆರಂಭಿಸಿದ್ದಾರೆ. ಸಿಎಂ ಹಾಗೂ ಡಿಸಿಎಂ ಜೊತೆ ಮೊದಲ ಪಟ್ಟಿಯಲ್ಲಿ ಪ್ರಮಾಣವಚನ ಸ್ವೀಕರಿಸುವ ಅದೃಷ್ಟಶಾಲಿಗಳು ಯಾರಾಗುತ್ತಾರೆನ್ನುವ ಕುತೂಹಲವನ್ನು ಹುಟ್ಟು ಹಾಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...