ಸಂಸತ್ ಭದ್ರತಾ ಲೋಪ | ರಾಜ್ಯಕ್ಕೆ ಕಾಲಿಟ್ಟರೂ ಮಾಧ್ಯಮಗಳಿಗೆ ಒಂದೇ ಒಂದು ಹೇಳಿಕೆ ನೀಡದ ಸಂಸದ ಪ್ರತಾಪ್ ಸಿಂಹ!

Date:

ಡಿಸೆಂಬರ್ 13ರಂದು ಸಂದರ್ಶಕರ ಸೋಗಿನಲ್ಲಿ ಸಂಸತ್ತಿಗೆ ಬಂದಿದ್ದ ಇಬ್ಬರು ಯುವಕರು ಏಕಾಏಕಿ ಲೋಕಸಭೆಯ ಹಾಲ್‌ಗೆ ಜಿಗಿದು ಸ್ಮೋಕ್‌ ಬಾಂಬ್‌ ಸಿಡಿಸಿ, ಭದ್ರತಾ ಲೋಪ ಎಸಗಿದ್ದ ಪ್ರಕರಣದಲ್ಲಿ ಪಾಸ್ ನೀಡಿದ್ದ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಾಜ್ಯಕ್ಕೆ ಆಗಮಿಸಿದ್ದಾರೆ.

ಪ್ರತಿಯೊಂದು ರಾಜಕೀಯ ಬೆಳವಣಿಗೆಗೆ ಸೋಷಿಯಲ್ ಮೀಡಿಯಾ ಸೇರಿದಂತೆ ಮಾಧ್ಯಮಗಳಲ್ಲಿ ಹೇಳಿಕೆ ನೀಡಲು ಮುಂಚೂಣಿಯಲ್ಲಿರುತ್ತಿದ್ದ ಬಿಜೆಪಿ ಸಂಸದ, ಸಂಸತ್ ಭದ್ರತಾ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ಈವರೆಗೆ ಒಂದೇ ಒಂದು ಅಧಿಕೃತ ಹೇಳಿಕೆಯನ್ನು ಎಲ್ಲೂ ನೀಡಿಲ್ಲ. ಡಿಸೆಂಬರ್ 13ರಂದು ಘಟನೆ ನಡೆದಿದ್ದರೂ ಈವರೆಗೆ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದ ಪ್ರತಾಪ್ ಸಿಂಹ, ನಿನ್ನೆ(ಡಿ.22) ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಆದರೆ, ‘ನೋ ರಿಯಾಕ್ಷನ್’ ಎನ್ನುವ ಮೂಲಕ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ.

ಮಾಧ್ಯಮಗಳ ಪ್ರತಿನಿಧಿಗಳನ್ನು ಕಂಡೊಡನೆಯೇ, ‘ನೋ ರಿಯಾಕ್ಷನ್’ ಎಂದು ಕೈ ಸನ್ನೆ ಮಾಡಿದ ಪ್ರತಾಪ್ ಸಿಂಹ ಅವರಲ್ಲಿ ಎಷ್ಟೇ ವಿನಂತಿಸಿದರೂ ಕೂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನೂ ಕೂಡ ಬಹಳಷ್ಟು ವರ್ಷ ಜರ್ನಲಿಸಂ ಮಾಡಿದ್ದೇನೆ. ದಯವಿಟ್ಟು ನನ್ನನ್ನು ಚೇಸ್ ಮಾಡಬೇಡಿ. ನಾನೂ ಕೂಡ ಜರ್ನಲಿಸ್ಟ್ ಆಗಿದ್ದೆ” ಎಂದಷ್ಟೇ ಹೇಳಿದ್ದಾರೆ. ಈ ನಡುವೆ ಖಾಸಗಿ ಚಾನೆಲ್‌ನ ಪ್ರತಿನಿಧಿಯೋರ್ವನಿಗೆ, “ನೀನು ಈ ವೃತ್ತಿಗೆ ಹೊಸಬ. ನಾನು ಐದು ವರ್ಷ ಜರ್ನಲಿಸಂ ಓದಿದ್ದೀನಿ. ಸುಮ್ಮನಿದ್ದು ಬಿಡು” ಎಂದು ಕೈಬೆರಳು ತೋರಿಸುವ ಮೂಲಕ ಸುಮ್ಮನಾಗಿಸಿ, ಅಲ್ಲಿಂದ ತೆರಳಿದ್ದಾರೆ. ಇದೆಲ್ಲವೂ ಕ್ಯಾಮರಾದಲ್ಲಿ ಸೆರೆಯಾಗಿದೆ.

146 ಸಂಸದರ ಅಮಾನತಾಗಿದ್ದರೂ, ಅಮಾನತ್ತಾಗದ ಬಿಜೆಪಿ ಸಂಸದ!
ಸಂಸತ್ ಭದ್ರತಾ ಲೋಪ ಘಟನೆ ನಡೆದಿದ್ದು ಡಿ.13ರಂದು. ಇದು ಡಿ.22ರವರೆಗೆ ನಡೆಯಬೇಕಿದ್ದ ಚಳಿಗಾಲದ ಅಧಿವೇಶನವನ್ನೇ ನುಂಗಿ ಹಾಕಿತ್ತು. ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಸದನದಲ್ಲಿ ಬಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಉತ್ತರಿಸಬೇಕೆಂದು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸದಸ್ಯರು ಆಗ್ರಹಿಸಿ, ಗದ್ದಲವೆಬ್ಬಿಸಿದ್ದರು. ಆದರೆ ಈ ಬಗ್ಗೆ ಒಂದೇ ಒಂದು ಹೇಳಿಕೆಯನ್ನು ನೀಡಿರಲಿಲ್ಲ. ಬದಲಾಗಿ ಲೋಕಸಭೆಯಿಂದ 100 ಮಂದಿ ಹಾಗೂ ರಾಜ್ಯಸಭೆಯಿಂದ 46 ಮಂದಿ ಸೇರಿ ಒಟ್ಟು 146 ಮಂದಿ ಸಂಸದರನ್ನು ಅಮಾನತು ಮಾಡಲಾಗಿತ್ತು. ಆದರೆ, ವಿಪರ್ಯಾಸ ಏನೆಂದರೆ, ಪಾಸ್ ನೀಡಿದ್ದ ಸಂಸದ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡಲೇ ಇಲ್ಲ.

ಪ್ರತಾಪ್ ಸಿಂಹ ಹೇಳಿಕೆ ದಾಖಲು
ಸಂಸತ್ ಭದ್ರತಾ ಲೋಪ ಘಟನೆಯ ಆರೋಪಿಗಳಿಗೆ ಸಂಸದ ಪ್ರತಾಪ್‌ ಸಿಂಹ, ಸಂದರ್ಶಕರ ಪಾಸ್‌ ನೀಡಿದ್ದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲಾಗಿದೆ. ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಖಚಿತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...