ಮಾನನಷ್ಟ ಪ್ರಕರಣಗಳಲ್ಲಿ ಪಕ್ಷವನ್ನೂ ಆರೋಪಿಯಾಗಿ ಮಾಡಬಹುದು: ಕರ್ನಾಟಕ ಹೈಕೋರ್ಟ್

Date:

ಮಾನನಷ್ಟ ಮೊಕದ್ದಮೆಗಳಲ್ಲಿ ಒಬ್ಬ ವ್ಯಕ್ತಿ ಮಾತ್ರವಲ್ಲ, ರಾಜಕೀಯ ಪಕ್ಷಗಳಂತಹ ಸಂಸ್ಥೆಗಳು ಸೇರಿದಂತೆ ಯಾವುದೇ ವ್ಯಕ್ತಿಗಳ ಸಂಘವನ್ನೂ ಕ್ರಿಮಿನಲ್ ಆರೋಪಿಗಳಾಗಿ ಹೆಸರಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ. ಮಾನನಷ್ಟ ಮೊಕದ್ದಮೆ ಪ್ರಕರಣ ರದ್ದತಿಗಾಗಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಕಾಂಗ್ರೆಸ್‌ ಶಾಸಕ ರಿಜ್ವಾನ್ ಹರ್ಷದ್ ಅವರು ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಮೊದದ್ದಮೆಯಲ್ಲಿ, ‘2019ರಲ್ಲಿ ತಮ್ಮ ವಿರುದ್ಧ ಬಿಜೆಪಿ ಮಾಡಿದ್ದ ಅವಹೇಳನಕಾರಿ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದರು.

ರಿಜ್ವಾನ್ ದಾಖಲಿಸಿದ್ದ ಮೊಕದ್ದಮೆಯನ್ನು ಪ್ರಶ್ನಿಸಿದ್ದ ಬಿಜೆಪಿಯ ಹಿಂದಿನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, “ಮಾನನಷ್ಟ ಮೊಕದ್ದಮೆ ಹೂಡಲು ಇದೊಂದು ರಾಜಕೀಯ ಪಕ್ಷವೇ ಹೊರತು ವ್ಯಕ್ತಿಯಲ್ಲ. ಅದೊಂದು ವ್ಯಕ್ತಿಗಳ ಸಂಘ ಆಗಿರುವುದರಿಂದ ‘ಯಾರು’ ರಂಬ ಪದಕ್ಕೆ ಸಂಘವು ಹೊಂದಿಕೆಯಾಗುವುದಿಲ್ಲ. ಹೀಗಾಗಿ, ಮೊಕದ್ದಮೆಯನ್ನು ರದ್ದುಗೊಳಿಸಬೇಕು” ಎಂದು ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌ ದೀಕ್ಷಿತ್ ಅರ್ಜಿಯನ್ನು ವಜಾಗೊಳಿಸಿದ್ದಾರೆ. “ಮಾನನಷ್ಟ ಮೊಕದ್ದಮೆಯಗಳಲ್ಲಿ ಐಪಿಸಿಯ 499 ಮತ್ತು 500 ಸೆಕ್ಷನ್‌ಗಳಲ್ಲಿ ‘ಯಾರು’ ಎಂಬ ಪದವು ವ್ಯಕ್ತಿಗಳನ್ನಷ್ಟೇ ಅಲ್ಲ, ಅವರ ಸಂಘವನ್ನೂ ಕೂಡ ಸೂಚ್ಯವಾಗಿ ಒಳಗೊಂಡಿರುತ್ತದೆ ಎಂದು ನಾನು ಪರಿಗಣಿಸುತ್ತೇನೆ. ಇಲ್ಲಿ ಅರ್ಜಿದಾರರಂತೆ (ಕಟೀಲ್) ಸಂಘಟಿತರಾಗಿದ್ದರೂ ಅಥವಾ ಇಲ್ಲದಿದ್ದರೂ ಅಂತಹ ಸಂಸ್ಥೆ-ಸಂಘ-ಪಕ್ಷಗಳನ್ನು ಕ್ರಿಮಿನಲ್ ಮೊಕದ್ದಮೆಗಳಲ್ಲಿ ಆರೋಪಿಗಳಾಗಿ ಹೆಸರಿಸಬಹುದು” ಎಂದು ನ್ಯಾಯಮೂರ್ತಿ ದೀಕ್ಷಿತ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸಂದೇಶ್‌ಖಾಲಿ ಪ್ರಕರಣ | ಟಿಎಂಸಿ ವಿರುದ್ಧ ಮತ ಚಲಾಯಿಸಿದ್ದಕ್ಕೆ ಆದಿವಾಸಿಗಳಿಗೆ ಚಿತ್ರಹಿಂಸೆ; ಎನ್‌ಸಿಎಸ್‌ಟಿ ವಿವರ

“ಖಾಸಗಿ ವ್ಯಕ್ತಿಗಳಿಗಿಂತ ಭಿನ್ನವಾಗಿ, ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳು ಪ್ರಜ್ಞಾಪೂರ್ವಕವಾಗಿ ಸಾರ್ವಜನಿಕರಿಂದ ನಿಕಟ ಪರಿಶೀಲನೆಗೆ ತಮ್ಮನ್ನು ಒಡ್ಡಿಕೊಳ್ಳುತ್ತಾರೆ. ಅವರು ಹೆಚ್ಚಿನ ಮಟ್ಟದ ಸಹಿಷ್ಣುತೆಯನ್ನು ಪ್ರದರ್ಶಿಸಬೇಕು. ಅವರ ಚಿತ್ರಣ ಮತ್ತು ಖ್ಯಾತಿಯು ಚುನಾವಣಾ ಪ್ರಕ್ರಿಯೆ ಮತ್ತು ಫಲಿತಾಂಶದ ಮೇಲೆ ಪ್ರಭಾವ ಬೀರುತ್ತದೆ. ಅವರ ಚಿತ್ರಣವನ್ನು ವಿವಾದಕ್ಕೆ ಸಿಲುಕಿಸಬಾರದು” ಎಂದು ನ್ಯಾಯಧೀಶರು ಹೇಳಿದ್ದಾರೆ.

“ನಮ್ಮಂತಹ ಪ್ರಜಾಪ್ರಭುತ್ವ ವ್ಯವಸ್ಥೆಯು ರಾಜಕೀಯ ಪಕ್ಷಗಳು ಮತ್ತು ಚುನಾಯಿತ ಪ್ರತಿನಿಧಿಗಳ ಖ್ಯಾತಿಗೆ ಸಮಂಜಸವಾದ ರಕ್ಷಣೆಯನ್ನು ಖಾತರಿಪಡಿಸುತ್ತದೆ. ಮಾನನಷ್ಟದ ಹಿಂಸೆ ಅಥವಾ ಅಪರಾಧವನ್ನು ತುಂಬಾ ತೆಳುವಾಗಿ ನೋಡಲಾಗುವುದಿಲ್ಲ. ಐಪಿಸಿ ಸೆಕ್ಷನ್ 499 ಮತ್ತು 500ರ ವ್ಯಾಪ್ತಿಯಿಂದ ರಾಜಕೀಯ ಪಕ್ಷಗಳನ್ನು ಹೊರಗಿಡುವುದು ಈ ದೃಷ್ಟಿಕೋನವನ್ನು ಮರೆಮಾಚುತ್ತದೆ. ಹೀಗಾಗಿ, ಪ್ರಕರಣವು ವಿಚಾರಣೆಗೆ ಅರ್ಹವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...