ಪೇಮೆಂಟ್ ಸೀಟ್‌ನಲ್ಲಿ ರಾಜ್ಯಧ್ಯಕ್ಷ ಆಗಿದ್ದು ಯಾಕೆ?; ವಿಜಯೇಂದ್ರಗೆ ಕುಟುಕಿದ ಬಿ.ಕೆ ಹರಿಪ್ರಸಾದ್

Date:

ಬಿಜೆಪಿಯೊಳಗೆ ಕಾರ್ಯಕರ್ತ ಸ್ಥಾನವೇ ಅತೀ ಮುಖ್ಯ ಎನ್ನುವುದೇ ಆದರೆ, ನೀವು ಪೇಮೆಂಟ್‌ ಸೀಟ್‌ ಪಡೆದು ರಾಜ್ಯಧ್ಯಕ್ಷ ಹುದ್ದೆ ಗಿಟ್ಟಿಸಿಕೊಂಡಿದ್ದು ಯಾಕೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಕಾಂಗ್ರೆಸ್‌ ನಾಯಕ ಬಿ.ಕೆ ಹರಿಪ್ರಸಾದ್ ಕುಟುಕಿದ್ದಾರೆ.

ಇತ್ತೀಚೆಗೆ, ‘ಬಿಜೆಪಿಯಲ್ಲಿ ಕಾರ್ಯಕರ್ತ ಸ್ಥಾನೇ ಮುಖ್ಯ’ ಎಂದಿದ್ದ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯ ವಿಚಾರವಾಗಿ ಹರಿಪ್ರಸಾದ್ ಚೇಡಿಸಿದ್ದಾರೆ. “ವಿಜಯೇಂದ್ರ ಅವರೇ, ಗಲಿಬಿಲಿಯಾಗಬೇಡಿ. ಇದು ನಾನು ಮಾಡುತ್ತಿರುವ ಆರೋಪವಲ್ಲ, ನಿಮ್ಮದೇ ಪಕ್ಷದ ನಾಯಕರು ಕೊಡುತ್ತಿರುವ ಬಿರುದು-ಬಾವಲಿಗಳು” ಎಂದಿದ್ದಾರೆ.

“ನಾನು ಹಿಂಬಾಗಿಲಿನಿಂದ ವಿಧಾನಸಭೆಗೆ ಪ್ರವೇಶ ಮಾಡಿದ್ದು ನಿಜವೇ ಆಗಿದ್ದರೆ ನಿಮ್ಮ ತಂದೆ ಬಿ.ಎಸ್ ಯಡಿಯೂರಪ್ಪನವರು ಶಿಕಾರಿಪುರದಲ್ಲಿ ಸೋತು ಸುಣ್ಣವಾಗಿ 2000ರಿಂದ 2004ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದದ್ದು ಹಿಂಬಾಗಿಲಿನಿಂದಲೊ ಅಥವಾ ‘ಶೋಭಾ’ಯಾತ್ರೆ ಮೂಲಕವೂ ರಾಜ್ಯದ ಜನರಿಗೆ ತಿಳಿಸಿ” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಪಕ್ಷದ ಶಿಸ್ತು-ಸಂಸ್ಕಾರದ ಬಗ್ಗೆ ಮಾತಾಡಲು ಪದಗಳು ಸಾಲದು. ನಿಘಂಟು, ಗ್ರಂಥಾಲಯಗಳನ್ನೇ ಸಂಶೋಧಿಸಬೇಕು. ನಿಮ್ಮ ಪಕ್ಷದ ಶಿಸ್ತು-ನಿಮ್ಮ ಕುಟುಂಬದ ತ್ಯಾಗ ಬಲಿದಾನ, ಹೊಂದಾಣಿಕೆ ರಾಜಕೀಯದ ಬಗ್ಗೆ ಇತ್ತೀಚಿಗೆ ದಾವಣಗೆರೆಯಲ್ಲಿ ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ಜನ್ಮದಿನದ ಕಾರ್ಯಕ್ರಮದಲ್ಲಿ ನಿಮ್ಮ ಪಕ್ಷದ ಅತಿರಥ ಮಹಾರಥರು ಹಾಡಿ ಹೊಗಳಿದ್ದಾರೆ ಸಾಧ್ಯವಾದ್ರೆ ಕೇಳಿ” ಎಂದಿದ್ದಾರೆ.

“ಮಹಾಭಾರತದ ಕತೆಗಳನ್ನು ಹೇಳಿ ಕೈಗೆ ದೊಣ್ಣೆ ಕೊಟ್ಟು ಬಡಿಸಿಕೊಳ್ಳಬೇಡಿ. ಧರ್ಮರಾಯನಂತೆ ಆಸ್ತಿ-ಅಧಿಕಾರಕ್ಕಾಗಿ ದ್ರೌಪದಿಯನ್ನೇ ಜೂಜಿನಲ್ಲಿಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಂತೂ ಇಲ್ಲ, ನಿಮಿಗೂ ಅಂತಹ ದಾರಿದ್ರ್ಯ ಬರದೇ ಇರಲಿ. ಮಹಿಳೆಯರಿಗೆ ಕಾಂಗ್ರೆಸ್ ಪಕ್ಷ ಅಧ್ಯಕ್ಷೆಯನ್ನಾಗಿಯೂ, ದೇಶದ ಮೊದಲ ಪ್ರಜೆಯಾಗಿಯೂ ನೀಡಿದ ಪರಂಪರೆ ಇದೆ. ಇತಿಹಾಸವೇ ಗೊತ್ತಿಲ್ಲದೇ ಎಳಸು ರಾಜಕಾರಣಿ ಎಂದು ಸಾಬೀತು ಪಡಿಸಿಕೊಳ್ಳಬೇಡಿ” ಎಂದು ಹೇಳಿದ್ದಾರೆ.

“ಅಷ್ಟಕ್ಕೂ ಮಹಿಳೆಯರ ಬಗ್ಗೆ ಬೊಗಳೆ ಮಾತಾಡುತ್ತಾ ಅನಗತ್ಯ ಮಾನ ಹರಾಜು ಮಾಡಿಕೊಳ್ಳಬೇಡಿ.ನಿಮ್ಮ ಪಕ್ಷದ ನಾಯಕರು ಜನಪ್ರತಿನಿಧಿಗಳು ಮಹಿಳಾ ರಾಜಕಾರಣಿಗಳನ್ನು, ಉನ್ನತ ಅಧಿಕಾರಿಗಳಿಗೆ ನೀಡಿದ ಗೌರವ ರಾಜ್ಯದ ಜನರು ನೋಡಿದ್ದಾರೆ. ನಾನು ಕ್ಷಮೆ‌ ಕೇಳುವುದು ನಂತರದ್ದೂ, ಮೊದಲು ಪೋಕ್ಸೋ ಕೇಸಿನಲ್ಲಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ತಂದೆಯವರ ಕ್ಷಮೆ ಕೇಳಿಸಿ ಪಾಪ ಪ್ರಾಯಶ್ಚಿತ್ತ ಮಾಡಿಕೊಳ್ಳಿ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...