ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹಗರಣ | ಅಕ್ರಮ ವ್ಯವಹಾರದ ಬಗ್ಗೆ ತನಿಖೆ ಆರಂಭಿಸಿದ ED: ವರದಿ

Date:

ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿ ಆರ್‌ಬಿಐ ರದ್ದುಗೊಳಿಸುವ ಆದೇಶ ಹೊರಡಿಸಿದ ಎರಡು ವಾರಗಳ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸಲು ಪ್ರಕರಣ ಕೈಗೆತ್ತಿಕೊಂಡಿರುವುದಾಗಿ ವರದಿಯಾಗಿದೆ.

ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಮೂಲಕ ಆಗಿರುವ ಅವ್ಯವಹಾರ ಆಗಿರುವ ಶಂಕೆಯ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಪ್ರಾಥಮಿಕ ತನಿಖೆ ಕೈಗೆತ್ತಿಕೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಬಿಸಿ-ಟಿವಿ18 ವರದಿ ಮಾಡಿದೆ.

ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ತಿಳಿಸಿದ ಎರಡು ವಾರದ ಬಳಿಕ ಈ ಬೆಳವಣಿಗೆ ನಡೆದಿದೆ. ಆದರೆ ಈ ಬಗ್ಗೆ ಇ ಡಿ ಅಧಿಕಾರಿಗಳಾಗಲೀ, ಪೇಟಿಎಂ ಆಗಲಿ ಹೇಳಿಕೆ ನೀಡಿಲ್ಲ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೆ.29ರ ನಂತರ ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದು
ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ಆದೇಶ ಹೊರಡಿಸಿತ್ತು. ವಾಲೆಟ್ ಹಾಗೂ ಫಾಸ್ಟ್‌ಟ್ಯಾಗ್‌ ಒಳಗೊಂಡು ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಪೇಟಿಎಂಗೆ ಆರ್‌ಬಿಐ ಆದೇಶದಲ್ಲಿ ತಿಳಿಸಿತ್ತು.

ಪೇಟಿಎಂನ ಪೇಮೆಂಟ್‌ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಆರ್‌ಬಿಐ, “ಬ್ಯಾಂಕ್‌ನಲ್ಲಿ ನಿರಂತರ ಉಲ್ಲಂಘನೆಗಳು ಮುಂದುವರಿದ ಕಾರಣದಿಂದ ಮಹತ್ವದ ಮೇಲ್ವಿಚಾರಣಾ ಕಾಳಜಿಗಳಿಗಾಗಿ ಹಾಗೂ ಬಾಹ್ಯ ಸಂಸ್ಥೆಗಳಿಂದ ಸಮಗ್ರ ಲೆಕ್ಕಪರಿಶೋಧನೆ ಕೈಗೊಂಡ ನಂತರವೇ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಆರ್‌ಬಿಐ ಸ್ಪಷ್ಟಪಡಿಸಿತ್ತು.

2022 ಮಾರ್ಚ್‌ 11ರಲ್ಲೇ  ನೂತನ ಗ್ರಾಹಕರನ್ನು ಹೊಂದುವುದನ್ನು ನಿಲ್ಲಿಸಬೇಕು ಎಂದು ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಸಂಸ್ಥೆಗೆ ತಿಳಿಸಿರುವುದನ್ನು ಆರ್‌ಬಿಐ ತನ್ನ ಆದೇಶದಲ್ಲಿ ಉಲ್ಲೇಖಿಸಿತ್ತು. ಈ ಆದೇಶದ ಬೆನ್ನಲ್ಲೇ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ನಿರ್ದೇಶಕ ಮಂಜು ಅಗರ್ವಾಲ್ ರಾಜೀನಾಮೆ ನೀಡಿದ್ದರು.

ಇ.ಡಿ ಮೌನ ಪ್ರಶ್ನಿಸಿದ್ದ ಕಾಂಗ್ರೆಸ್

ಪೇಟಿಎಂ ಪೇಮೆಂಟ್ ಬ್ಯಾಂಕ್‌ ಸೇವೆಗಳನ್ನು ಆರ್‌ಬಿಐ ರದ್ದುಗೊಳಿಸಿದ್ದ ನಂತರ ಜಾರಿ ನಿರ್ದೇಶನಾಲಯದ ಮೌನದ ಬಗ್ಗೆ ವಿಪಕ್ಷ ಕಾಂಗ್ರೆಸ್ ಪ್ರಶ್ನಿಸಿತ್ತು.

ಇದನ್ನು ಓದಿದ್ದೀರಾ? ಪೇಟಿಎಂ ಪಾವತಿ ಬ್ಯಾಂಕ್ | ಅಕ್ರಮ ಹಣ ವ್ಯವಹಾರದ ಬಗ್ಗೆ ಇ.ಡಿ ತನಿಖೆಯ ಅಗತ್ಯವೇಕಿದೆ?

ಈ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ, “ಈ ಹಗರಣದ ಬಗ್ಗೆ ಕೇಂದ್ರದ ನಿಲುವು ಏನು? ಕಳೆದ ಏಳು ವರ್ಷಗಳಿಂದ ತಪ್ಪು ನಡೆಯುತ್ತಿದ್ದರೂ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಮೇಲೆ ಏಕೆ ಕ್ರಮ ಜರುಗಿಸಿಲ್ಲ? ಪೇಟಿಎಂ ಪೇಮೆಂಟ್‌ ಬ್ಯಾಂಕಿನ ಮುಖ್ಯಸ್ಥ ಪ್ರಧಾನಿ ಮೋದಿ ಭಕ್ತ. ಅವರೊಂದಿಗೆ ಸೆಲ್ಫಿ ಪಡೆದಿದ್ದಾರೆ. ಪ್ರಧಾನಿಯಿಂದ ಅನುಕೂಲ ಪಡೆಯಲು ಜಾಹೀರಾತುಗಳನ್ನು ಪ್ರಕಟಿಸಿದ್ದಾರೆ” ಎಂದು ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...