ರೈತ ಹೋರಾಟ | ಪೊಲೀಸರು ರಸ್ತೆಗೆ ಹಾಕಿದ್ದ ಸಿಮೆಂಟ್‌ ಬ್ಲಾಕ್‌ಗಳನ್ನು ನದಿಗೆ ಎಸೆದ ರೈತರು

Date:

ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ಫೆಬ್ರವರಿ 13ರಿಂದ ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ಪಂಜಾಬ್ ರೈತರು ದೆಹಲಿಯತ್ತ ಟ್ರ್ಯಾಕ್ಟರ್‌ಗಳಲ್ಲಿ ಪ್ರತಿಭಟನಾ ರ್‍ಯಾಲಿ ಹೊರಟಿದ್ದಾರೆ. ರೈತರ ಹೋರಾಟವನ್ನು ಹತ್ತಿಕ್ಕಲು ಹರಿಯಾಣ ಪೊಲೀಸರು ಪಂಜಾಬ್-ಹರಿಯಣ ಗಡಿ ಅಂಬಾಲಾ ಬಳಿಯ ಹೆದ್ದಾರಿಯಲ್ಲಿ ಸಿಮೆಂಟ್‌ ಬ್ಲಾಕ್‌ಗಳನ್ನು ಹಾಕಿದ್ದು, ಅವುಗಳನ್ನು ರೈತರು ಘಗ್ಗರ್‌ ನದಿಗೆ ಉರಿಳಿಸಿದ್ದಾರೆ. ದೆಹಲಿಯತ್ತ ಹೊರಟಿದ್ದಾರೆ.

ಫೆಬವರಿ 13ರ ಮಂಗಳವಾರ ಮುಂಜಾನೆ ಪಂಜಾಬ್ ರೈತರು ದೆಹಲಿಯತ್ತ ಹೊರಟ್ಟಿದ್ದರು. ಅವರನ್ನು ತಡೆಯಲು ಹರಿಯಾಣದ ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಅಂಬಾಲಾ ಬಳಿ ದೊಡ್ಡ ದೊಡ್ಡ ಸಿಮೆಂಟ್‌ ಬ್ಲಾಕ್‌ಗಳನ್ನು ಹಾಕಿದೆ. ಅವುಗಳನ್ನು ರೈತರೊಂದಿಗೆ ಸೇರಿದ ಸ್ಥಳೀಯ ಗ್ರಾಮಸ್ಥರು ನದಿಗೆ ಎದೆಸಿದ್ದಾರೆ. ಹರಿಯಾಣವನ್ನು ದಾಟಿ, ದೆಹಲಿ ಗಡಿಗೆ ಬರುವುದು ರೈತರಿಗೆ ಸವಾಲಾಗಿದೆ. ಆದರೂ, 2020ರಲ್ಲಿ ಸರ್ಕಾರದ ದಮನಕ್ಕೆ ಬಗ್ಗದೆ ದೆಹಲಿ ತಲುಪಿದ್ದ ರೈತರು, ಅದೇ ಉತ್ಸಾಹ ಮತ್ತು ಹೋರಾಟದ ಕಿಚ್ಚಿನೊಂದಿಗೆ ಮತ್ತೆ ದೆಹಲಿಯತ್ತ ಹೊರಟಿದ್ದಾರೆ.

ಇನ್ನು, ದೆಹಲಿ ಮತ್ತು ಉತ್ತರ ಪ್ರದೇಶದ ಗಡಿಯಲ್ಲಿ ಭಾನುವಾರದಿಂದಲೇ ದೆಹಲಿ ಪೊಲೀಸರು 144 ಸೆಕ್ಷನ್ ಜಾರಿ ಮಾಡಿದ್ದಾರೆ. ದೆಹಲಿಯ ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಕೆಲವು ಗಡಿ ಪ್ರದೇಶಗಳಲ್ಲಿ ರೈತರ ಟ್ರ್ಯಾಕ್ಟರ್‌ಗಳನ್ನು ತಡೆಯಲು ರಸ್ತೆಗಳ ಮೇಲೆ ದೊಡ್ಡ ಮೊಳೆಗಳನ್ನು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

2020ರಲ್ಲಿ ನಡೆದ ಒಂದು ವರ್ಷಗಳ ನಿರಂತರ ಹೋರಾಟಕ್ಕೆ ಮಣಿಸಿದ್ದ ಕೇಂದ್ರ ಸರ್ಕಾರ, ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಂಡಿತ್ತು. ಜೊತೆಗೆ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿ ಮತ್ತು ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ, ಮೂರು ವರ್ಷ ಕಳೆದರೂ, ಭರವಸೆಗಳು ಭರವಸೆಯಾಗಿಯೇ ಉಳಿದಿವೆ.

ತನ್ನ ಭರವಸೆಗಳನ್ನು ಮರೆತಿರುವ ಸರ್ಕಾರಕ್ಕೆ ಆ ಭರವಸೆಗಳನ್ನು ನೆನಪಿಸಲು ಪಂಜಾಬ್ ಮತ್ತು ಹರಿಯಾಣ ರೈತರು ದೆಹಲಿ ಚಲೋಗೆ ಕರೆಕೊಟ್ಟಿದ್ದಾರೆ. ಸುಮಾರು 200 ರೈತ ಸಂಘಟನೆಗಳು ಒಗ್ಗೂಡಿ ದೆಹಲಿಯತ್ತ ಹೊರಟಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...