ಪೆನ್‌ಡ್ರೈವ್‌ ಪ್ರಕರಣ | ಪ್ರಜ್ವಲ್‌ ರೇವಣ್ಣ ಮೊದಲಿನಿಂದಲೂ ನನ್ನ ಸಂಪರ್ಕದಲ್ಲಿಲ್ಲ: ಎಚ್‌ ಡಿ ಕುಮಾರಸ್ವಾಮಿ

Date:

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಮೊದಲಿನಿಂದಲೂ ಪಕ್ಷದ ಚಟುವಟಿಕೆಗಳ ಸಂದರ್ಭದಲ್ಲಿ ನನ್ನ ಸಂಪರ್ಕದಲ್ಲಿ ಇರಲಿಲ್ಲ. ಪೆನ್‌ಡ್ರೈವ್‌ ಪ್ರಕರಣ ಬೆಳಕಿಗೆ ಬಂದ ಮೇಲೂ ನನ್ನ ಸಂಪರ್ಕದಲ್ಲಿಲ್ಲ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡುತ್ತ, “ರಾಜ್ಯದಲ್ಲಿದ್ದಾಗಲೇ ನನ್ನ ಸಂಪರ್ಕದಲ್ಲಿರದ ಪ್ರಜ್ವಲ್ ವಿದೇಶದಲ್ಲಿರುವಾಗ ಹೇಗೆ ನನ್ನ ಜೊತೆ ಸಂಪರ್ಕದಲ್ಲಿರುತ್ತಾನೆ” ಎಂದು ಪ್ರಶ್ನಿಸಿದರು.

“ಎಸ್ಐಟಿಯವರಿಗೆ ದೇವೇರಾಜೇಗೌಡರಿಂದ ಏನು ಮಾಹಿತಿ ಬೇಕಿದೆ? ಅವರ ವಿರುದ್ಧ ಪ್ರಕರಣ ದಾಖಲಾಗಿ ತಿಂಗಳು ಕಳೆದಿದ್ದರೂ ಈಗ ಏಕೆ ಬಂಧಿಸಿದ್ದಾರೆ? ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಮಾಹಿತಿನಾ? ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿನಾ? ಎಸ್‌ಐಟಿ ತನಿಖೆ ನೋಡಿದರೆ ಅನವಶ್ಯಕವಾಗಿ ಕೆಲವರನ್ನು ಬಂಧಿಸುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೆನ್‌ಡ್ರೈವ್‌ ಪ್ರಕರಣದಲ್ಲಿ ಎರಡು ಭಾಗ ಇದೆ. ಒಂದು ವಿಡಿಯೋ ಮಾಡಿಕೊಂಡವನ ಅಪರಾಧ. ಮತ್ತೊಂದು ಆ ವಿಡಿಯೋ ವೈರಲ್ ಮಾಡಿ ಕುಟುಂಬಗಳನ್ನು ಬೀದಿಗೆ ತಂದವರದ್ದು. ಇದು ಕೂಡ ಘೋರ ಅಪರಾಧ. ಆದರೆ ಎಸ್ಐಟಿ ವೈರಲ್ ಮಾಡಿದವರನ್ನು ಬಂಧಿಸುವಲ್ಲಿ ವಿಫಲವಾಗಿದೆ” ಎಂದು ಕಿಡಿಕಾರಿದರು.

“ವಿಡಿಯೋ ವೈರಲ್‌ ಮಾಡಿದ ಆರೋಪಿ ಖಾಸಗಿ ಚಾನೆಲ್‌ಗೆ ಸಂದರ್ಶನ ನೀಡುತ್ತಾನೆ. ಆದರೆ ಎಸ್ಐಟಿಗೆ ಸಿಗುತ್ತಿಲ್ಲ ಅಂದರೆ ಏನು ಅರ್ಥ? ಎಸ್ಐಟಿ ಸೂಕ್ತವಾದ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂಬುದು ಇದರಿಂದ ಅರ್ಥವಾಗುತ್ತೆ” ಎಂದರು.

ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿಲ್ಲ: ಜೆ ಟಿ ದೇವೇಗೌಡ

“ವಿದೇಶಕ್ಕೆ ಹೋಗಿರುವ ಪ್ರಜ್ವಲ್ ರೇವಣ್ಣ ಇದುವರೆಗೂ ಅವರ ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿಲ್ಲ. ಪ್ರಜ್ವಲ್ ಮಾಹಿತಿ ನನಗೂ ಸೇರಿದಂತೆ ಯಾರಿಗೂ ಇಲ್ಲ. ಆರೋಪ ಕೇಳಿಬಂದ ತಕ್ಷಣ ಪಕ್ಷ ಅವರ ವಿರುದ್ಧ ಕ್ರಮ ಕೈಗೊಂಡಿದೆ. ಈಗ ಏನಿದ್ದರೂ ಸರ್ಕಾರದ ಕೆಲಸ. ಆರೋಪಗಳ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲಿ” ಎಂದು ಜೆಡಿಎಸ್‌ ಪ್ರಮುಖರ ಸಮಿತಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...