ಪೆನ್‌ಡ್ರೈವ್‌ ಕೇಸು| ಮಹತ್ವದ ತಿರುವು: ಬಿಜೆಪಿ ನಾಯಕನ ವಿರುದ್ಧ ಎಚ್‌ಡಿಕೆ ಆರೋಪ

Date:

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವೊಂದು ಸಿಕ್ಕಿದ್ದು, ಈ ಪ್ರಕರಣದ ಹಿಂದೆ ಬಿಜೆಪಿ ನಾಯಕನೋರ್ವನ ಕೈವಾಡ ಇದೆ ಎಂದು ಖುದ್ದು ಎಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆಯ ಜೊತೆಗೆ ಮಾತನಾಡುತ್ತಾ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ.

“ಚುನಾವಣೆಗೂ ಮುನ್ನ ಬಿಜೆಪಿ ನಾಯಕರೊಬ್ಬರು ಸೇರಿದಂತೆ ವಿರೋಧ ಪಕ್ಷದ ನಾಯಕರು ಹಾಸನದಲ್ಲಿ ತಾವು ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದ ಬಳಿಕ ಪೆನ್‌ಡ್ರೈವ್‌ ಅನ್ನು ಹಂಚಿದ್ದಾರೆ” ಎಂದು ಎಚ್‌ಡಿಕೆ ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆ ನಡೆಯುವ ಮೂರು ದಿನಕ್ಕೂ ಮುನ್ನ ನಮ್ಮ ವಿರೋಧಿ ಗುಂಪುಗಳ ಕೆಲವು ಜನರು, ವಿಶೇಷವಾಗಿ ಒಬ್ಬ ಬಿಜೆಪಿ ನಾಯಕ ಸೇರಿದಂತೆ ಕೆಲವು ಕಾಂಗ್ರೆಸ್ ನಾಯಕರು ಸೇರಿಕೊಂಡಿದ್ದಾರೆ. ಹಾಸನ ಕ್ಷೇತ್ರದಲ್ಲಿ ಅವರ ಪ್ರಚಾರ ವಿಫಲವಾಗಿದೆ. ಆಂತರಿಕವಾಗಿ ಬೆನ್ನಿಗೆ ಚೂರಿ ಹಾಕಿದ ನಂತರವೂ ಅವರಿಗೆ ಯಶಸ್ಸು ಸಿಗದು ಎಂದು ಸಾಬೀತಾಗಿದೆ. ಹೀಗಾಗಿ ಪೆನ್‌ಡ್ರೈವ್ ಹರಿಬಿಡುವ ನಿರ್ಧಾರ ಮಾಡಿದರು” ಎಂದು ಎಚ್‌ಡಿಕೆ ದೂರಿದರು.

ಇದನ್ನು ಓದಿದ್ದೀರಾ?  ವಿಜಯಪುರ | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೆಆರ್‌ಎಸ್ ಪಕ್ಷ ಆಗ್ರಹ

“ತಮಗೆ ಗೆಲುವು ಆಗಲ್ಲ ಎಂದು ತಿಳಿದ ಬಳಿಕ ಚುನಾವಣೆಗೂ ಮುನ್ನ ಪ್ರಜ್ವಲ್ ರೇವಣ್ಣ ಬಗ್ಗೆ ಕೆಲವು ಪೆನ್ ಡ್ರೈವ್ ಗಳನ್ನು ಹರಿಬಿಡಲು ಅವರು ನಿರ್ಧರಿಸಿದ್ದಾರೆ. ಆದರೆ ಅದು ನಕಲಿಯೋ ಅಸಲಿಯೋ ಗೊತ್ತಿಲ್ಲ” ಎಂದರು.

“ದೇವೇಗೌಡರು ಹಾಗೂ ನಮ್ಮ ಕುಟುಂಬದವರನ್ನು ನಿಂದಿಸುವ ಯತ್ನ ಮಾಡಿದ್ದಾರೆ. ನಮ್ಮ ಇಮೇಜ್ ಹಾಳು ಮಾಡುವ ಉದ್ದೇಶ ಹೊಂದಿದ್ದರು. ಅದಕ್ಕಾಗಿ ಸರ್ಕಾರದ ಅಧಿಕಾರವನ್ನು ದುರುಪಯೋಗ ಮಾಡಿದ್ದಾರೆ. ಇದರ ಹಿಂದೆ ಒಬ್ಬ ಸಚಿವ, ಅದರಲ್ಲೂ ಹಿರಿಯ ಸಚಿವರೊಬ್ಬರು ಇದ್ದಾರೆ. ಹಾಸನದ ಕೆಲವು ಬಿಜೆಪಿ ನಾಯಕರೂ ಇದ್ದಾರೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ‘ವಿಕೃತ ಕಾಮ ಪಿಶಾಚಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ’ ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

“ಸರ್ಕಾರ ಈಗಾಗಲೇ ಎಸ್‌ಐಟಿ ರಚನೆ ಘೋಷಿಸಿದೆ. ಈಗ ಅದು ಸರ್ಕಾರ ಮತ್ತು ಎಸ್‌ಐಟಿಯ ಜವಾಬ್ದಾರಿ. ಪ್ರಜ್ವಲ್ ರೇವಣ್ಣ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ತಪ್ಪು ಮಾಡಿದ್ದರೆ ಕಾನೂನನ್ನು ಎದುರಿಸಬೇಕಾಗುತ್ತದೆ. ಕಾನೂನು ಬಾಹಿರವಾಗಿ ಏನಾದರೂ ಮಾಡಿದ್ದರೆ ಅದಕ್ಕೆ ಶಿಕ್ಷೆ ಎದುರಿಸಬೇಕಾಗುತ್ತದೆ. ನಮ್ಮ ಕುಟುಂಬದ ಸದಸ್ಯನಾಗಿ ಅವರನ್ನು ರಕ್ಷಿಸಲು ನಾನು ಬಯಸುವುದಿಲ್ಲ” ಎಂದು ಹೇಳಿದರು.

“ಈ ಪೆನ್ ಡ್ರೈವ್‌ಗಳ ವೈರಲ್ ಮಾಡಿರುವುದು ಕೂಡಾ ಘೋರ ಅಪರಾಧ. ಇದರಿಂದಾಗಿ ಕೆಲವು ಅಮಾಯಕ ಮಹಿಳೆಯರ ಚಾರಿತ್ರ್ಯ ಹರಣವಾಗಿದೆ. ಇದನ್ನು ಮಾಡಿದವರು ಯಾರು ಎಂದು ಕಂಡುಹಿಡಿಯುವುದು ಎಸ್‌ಐಟಿಯ ಜವಾಬ್ದಾರಿಯಾಗಿದೆ. ನಮ್ಮ ಮೈತ್ರಿ ಮುರಿಯಲು ಮತ್ತು ನಮ್ಮ ಗೆಲುವಿನ ಸಾಧ್ಯತೆ ಕಡಿಮೆ ಮಾಡಲು ಆ ಪೆನ್‌ಡ್ರೈವ್‌ಗಳನ್ನು ಬಳಸಲಾಗಿದೆ. ಇದು ಅಭ್ಯರ್ಥಿಗಳ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಎಚ್‌ಡಿಕೆ ತಿಳಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು?

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದಲ್ಲಿ ಬಿಜೆಪಿಯು ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಈಗಾಗಲೇ 14 ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆಯು ಏ.26ರಂದು ನಡೆದಿದೆ. ಈ 14 ಕ್ಷೇತ್ರಗಳ ಪೈಕಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದ ಹಾಸನ ಜೊತೆಗೆ ಕೋಲಾರದಲ್ಲಿ ಮಲ್ಲೇಶ್ ಬಾಬು ಹಾಗೂ ಮಂಡ್ಯದಲ್ಲಿ ಕುಮಾರಸ್ವಾಮಿ ಅಭ್ಯರ್ಥಿಗಳಾಗಿ ನಿಂತಿದ್ದಾರೆ.

ಪ್ರಜ್ವಲ್ ಪ್ರಕರಣ ಈಗ ದೇಶಾದ್ಯಂತ ಸುದ್ದಿಯಾಗುತ್ತಿದೆ. ಈ ನಡುವೆಯೇ ಕುಮಾರಸ್ವಾಮಿಯವರು ರಾಷ್ಟ್ರೀಯ ಸುದ್ದಿಸಂಸ್ಥೆಗೆ ನೀಡಿರುವ ಈ ಹೇಳಿಕೆಯಿಂದ ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಬಿರುಕು ಉಂಟಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...