ಮತ್ತೆ ಕೋವಿಡ್ ಆತಂಕ | 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ವೈರಸ್ ರೂಪಾಂತರಿ ಜೆಎನ್​-1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಹಾಗಾಗಿ, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತನಾಡಿದ ಅವರು, “60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಹೃದಯ ಸಂಬಂಧಿ ಸಮಸ್ಯೆ ಇದ್ದವರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ” ಎಂದು ತಿಳಿಸಿದರು.

“ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ಮಾಡಿದ್ದಾರೆ. ಕೆಲವು ಸಲಹೆ ಮಾರ್ಗಸೂಚಿ ಪಡೆದಿದ್ದೇವೆ. 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇರಳದಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆದರೆ, ಯಾವುದೇ ನಿರ್ಬಂಧ ಹೇರುವ ಯೋಚನೆ ಸದ್ಯಕ್ಕಿಲ್ಲ. ಹೆಚ್ಚು ಪಾಸಿಟಿವ್ ಬಂದರಷ್ಟೇ ನಿಷೇಧ, ನಿರ್ಬಂಧ ಇತ್ಯಾದಿ ಕ್ರಮಗಳ ಬಗ್ಗೆ ಯೋಚನೆ ಮಾಡುತ್ತೇವೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ. ಶೀತ, ಜ್ವರ, ಕೆಮ್ಮು ಇರುವವರು ಕೋವಿಡ್ ಟೆಸ್ಟ್​​ ಮಾಡಿಸಿಕೊಳ್ಳಬೇಕು. ಇನ್ನೂ 2-3 ದಿನಗಳಲ್ಲಿ ಅದರ ತೀವ್ರತೆ ಗೊತ್ತಾಗಲಿದೆ. ಗುಂಪಿನಲ್ಲಿ ಓಡಾಟ ಮಾಡಬೇಡಿ” ಎಂದು ಆರೋಗ್ಯ ಸಚಿವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

Dinesh Gundu Rao 1

“ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜಾಗುವಂತೆಯೂ ಸೂಚನೆ ನೀಡಲಾಗಿದೆ. ಹಾಗೆಯೇ, ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚನೆ ನೀಡಿದ್ದೇವೆ. ಕೇರಳದಿಂದ ಬರುವವರನ್ನು ಪರೀಕ್ಷೆ ಮಾಡುವಂತೆ ಆದೇಶ ಮಾಡಿದ್ದೇವೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...