ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ; ಡ್ರಗ್ಸ್ ಜಾಲಕ್ಕೆ ಸಿಲುಕುತ್ತಿರುವ ಜನ: ವಿಜಯೇಂದ್ರ ಆರೋಪ

Date:

ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಗೊಂಡಿರುವ ಕಾನೂನು ಸುವ್ಯವಸ್ಥೆಯ ನೆರಳಿನಲ್ಲಿ ಬೆಳಕಿಗೆ ಬಾರದ ಅದೆಷ್ಟು ಜನರು ಡ್ರಗ್ಸ್ ಜಾಲಕ್ಕೆ ಸಿಲುಕಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೋ ಎಂಬ ಆತಂಕದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಬೆಂಗಳೂರಿನ ಬನಶಂಕರಿಯಲ್ಲಿ ಡ್ರಗ್ಸ್ ಅಮಲಿನಲ್ಲಿ ಇಬ್ಬರು ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ರಾಜ್ಯದಲ್ಲಿ ಮೇರೆ ಮೀರಿರುವ ಕ್ರಿಮಿನಲ್ ಚಟುವಟಿಕೆಗಳ ಬೆನ್ನಲೇ ನಿಷೇಧಿತ ಡ್ರಗ್ಸ್ ಮಾದರಿಯ ಮಾತ್ರೆಗಳ ಮಾರಾಟದ ದಂಧೆ ಅನೇಕ ಔಷಧ ಮಳಿಗೆಗಳಲ್ಲೇ ರಾಜಾರೋಷವಾಗಿ ನಡೆಯುತ್ತಿದ್ದು ಡ್ರಗ್ಸ್, ಗಾಂಜಾ ಪದಾರ್ಥಗಳ ವಹಿವಾಟೂ ಸಹ ಎಗ್ಗಿಲ್ಲದೆ ನಡೆಯುತ್ತಿದೆ, ಇದರ ಪರಿಣಾಮ ಇಬ್ಬರು ಅಮಾಯಕರು ಡ್ರಗ್ಸ್ ವ್ಯಸನಿಯೊಬ್ಬನಿಂದ ಕೊಲೆಗೀಡಾಗಿ ಪ್ರಾಣ ಕಳೆದು ಕೊಂಡಿದ್ದಾರೆ” ಎಂದಿದ್ದಾರೆ.

“ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದಾಗಿ ಕಾಳಸಂತೆಕೋರರು, ಕೊಲೆಗಡುಕರ ಹಾಗೂ ಡ್ರಗ್ಸ್ ಮಾಫಿಯಾದ ಚಟುವಟಿಕೆಗಳು ಸ್ವೇಚ್ಛೆಯಾಗಿ ನಡೆಯುತ್ತಿದೆ. ಸಮಾಜ ಹಾಗೂ ದೇಶದ ಭವಿಷ್ಯ ಬೆಳಗಬೇಕಾದ ವಿದ್ಯಾರ್ಥಿಗಳು, ಯುವಜನರನ್ನು ದಿಕ್ಕು ತಪ್ಪಿಸುವ ವಿದ್ರೋಹಿ ಮಾಫಿಯಾ ಶಕ್ತಿಗಳು ರಾಜ್ಯದಲ್ಲಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬರುತ್ತಿದ್ದು ಈ ಸರ್ಕಾರ ಪ್ರಜೆಗಳಿಗೆ ಯಾವ ಭಾಗ್ಯ ಕರುಣಿಸುತ್ತದೋ ಇಲ್ಲವೋ ಗೊತ್ತಿಲ್ಲ ಆದರೆ ‘ರಕ್ಷಣೆಯ ಭಾಗ್ಯವನ್ನಾದರೂ ಕಲ್ಪಿಸಿ ನಾಗರಿಕ ಸಮಾಜದಲ್ಲಿ ಸುರಕ್ಷತಾ ಭಾವ ಮೂಡಿಸಲಿ’. ಆ ಮೂಲಕ ಜನರ ಶಾಪದಿಂದ ಮುಕ್ತಿಕಾಣಲಿ” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೇವ್ ಪಾರ್ಟಿಗಳು ಹಾಗೂ ಹಾದಿ-ಬೀದಿಗಳಲ್ಲಿ ಡ್ರಗ್ಸ್ ಮಾಫಿಯಾ ಜಾಲ ಹರಡುತ್ತಿರುವುದರ ಹಾಗೂ ಕಳಪೆ ಔಷಧ ಪೂರೈಸಿ ಜನರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿರುವ ಜಾಲದ ವಿರುದ್ಧ ಈ ಕೂಡಲೇ ಸರ್ಕಾರ ಕಾರ್ಯಾಚರಣೆ ಆರಂಭಿಸದಿದ್ದರೆ ನಾಗರಿಕ ಸಮಾಜದ ಸುಭದ್ರತೆಗಾಗಿ ಬಿಜೆಪಿ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾದೀತು” ಎಂದು ಎಚ್ಚರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...