ಬಿಜೆಪಿಗೆ ʼಮಾರಿ ಹಬ್ಬʼ ಮಾಡಲು ಜನ ʼಮತದಾನದ ದೊಣ್ಣೆʼ ಹಿಡಿದು ಕಾಯುತ್ತಿದ್ದಾರೆ: ಕೃಷ್ಣ ಬೈರೇಗೌಡ

Date:

  • ಅಕ್ರಮಕ್ಕೆ ಸಹಕರಿಸಲು ಅಧಿಕಾರಿಳಿಗೆ ಸಿಎಂ ಸೂಚಿಸಿದ್ದಾರೆನ್ನುವ ಆರೋಪ
  • ಚುನಾವಣಾ ಆಯೋಗಕ್ಕೆ ದೂರು ನೀಡಿದ ಮಾಜಿ ಸಚಿವ ಕೃಷ್ಣ ಬೈರೇಗೌಡ

ಅಕ್ರಮ ಅನ್ಯಾಯದ ಮೂಲಕವೇ ಅಧಿಕಾರ ಹಿಡಿದು ಆಡಳಿತ ಮಾಡಿದ್ದ ಬಿಜೆಪಿ ಗೆ ಜನ ಮುಂದಿನ ಬಾರಿ ʼಮಾರಿ ಹಬ್ಬʼ ಮಾಡಲು ಕಾಯುತ್ತಿದ್ದಾರೆ ಎಂದು ಕಾಂಗ್ರೆಸ್‌ ಮಾಜಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ನನ್ನ ಕ್ಷೇತ್ರದಲ್ಲಿ ಬಿಜೆಪಿಯ ಚುನಾವಣಾ ಅಕ್ರಮಗಳಿಗೆ ಅಧಿಕಾರಿಗಳು ಸಹಕರಿಸುತ್ತಿದ್ದಾರೆ. ದಾಖಲೆ ಸಲ್ಲಿಸಿದರೂ ಆ ಪಕ್ಷದ ವಿರುದ್ಧ ತನಿಖಾ ಜವಾಬ್ದಾರಿ ಹೊತ್ತವರು ಕ್ರಮ ತೆಗೆದುಕೊಳ್ಳುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಕಮಲ ಪಕ್ಷದ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವುದಾಗಿ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಯೋಗ ಕಚೇರಿ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಚುನಾವಣಾ ಅಕ್ರಮಗಳನ್ನು ನಡೆಸುತ್ತಿದೆ. ಇದಕ್ಕೆ ಅಧಿಕಾರಿಗಳು ಸಹಕರಿಸುತ್ತಿದ್ದಾರೆ.

ಬಿಜೆಪಿ ಮತದಾರರಿಗೆ ಹಂಚುತ್ತಿರುವ ವಸ್ತುಗಳನ್ನು ಅಧಿಕಾರಿಗಳು ವಶ ಪಡಿಸಿಕೊಳ್ಳುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಕ್ಷೇತ್ರದಲ್ಲಿ ದಾಖಲೆ ಸಹಿತ ಸಿಕ್ಕ 3.6 ಕೋಟಿ ಮೌಲ್ಯದ ಬಿಜೆಪಿಯ ಅಕ್ರಮ ಹಂಚಿಕೆಯ ಸಾಮಗ್ರಿಗಳನ್ನು ದಾಖಲೆ ಸಹಿತ ಹಿಡಿದುಕೊಡಲಾಗಿದೆ. ಇಷ್ಟಾದರೂ ಚುನಾವಣಾಧಿಕಾರಿಗಳು ತಾರತಮ್ಯ ಮಾಡುತ್ತಾ ಕಾನೂನು ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ.

ಪೂರ್ವಗ್ರಹ ಪೀಡಿತರಾಗಿ ಕಾಂಗ್ರೆಸ್ ವಿರುದ್ಧವೇ ಶಿಸ್ತುಕ್ರಮ ಜರುಗಿಸುತ್ತಿದ್ದಾರೆ. ಇಂತಹ ಕ್ರಮಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹ ಮಾಡಿರುವುದಾಗಿ ಕೃಷ್ಣ ಬೈರೇಗೌಡ ಹೇಳಿದರು.

ಬಿಜೆಪಿಯ ಅಭ್ಯರ್ಥಿ ಮೇಲೆ ಇಲ್ಲಿಯವರೆಗೆ ಎಫ್ಐಆರ್ ಆಗಿಲ್ಲ. ಅವರ ಹೆಸರು ಪ್ರಕರಣದಲ್ಲಿ ಬರುವುದಿಲ್ಲ, ಅಧಿಕಾರಿಗಳು ಬಿಜೆಪಿ ಅಕ್ರಮಕ್ಕೆ ರಕ್ಷಣೆ ಕೊಡುತ್ತಿದ್ದಾರೆ.

ಕಮಲ ಪಕ್ಷದ ಏಜೆಂಟರುಗಳಂತೆ ಕೆಲಸ ಮಾಡುತ್ತಿದ್ದಾರೆ. ಮಂತ್ರಿ, ಮುಖ್ಯಮಂತ್ರಿ, ಸಂತೋಷ್ ಅವರುಗಳ ಒತ್ತಡದಿಂದ ಆ ರೀತಿ ಮಾಡುತ್ತಿದ್ದಾರೆ ಎಂದು ಕೃಷ್ಣ ಬೈರೇಗೌಡ ಕಿಡಿಕಾರಿದರು.ಕೆಬಿಜಿ ಎಲೆಕ್ಷನ್‌ ಕಮಿಷನ್‌

ಸಿದ್ದರಾಮಯ್ಯ ಎರಡೂ ಕ್ಷೇತ್ರಗಳಲ್ಲೂ ಗೆಲ್ಲುತ್ತಾರೆ :

ನಮ್ಮ ನಾಯಕರಾದ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವುದನ್ನು ವರಿಷ್ಠ ನಾಯಕರು ತೀರ್ಮಾನಿಸುತ್ತಾರೆ.

ಕೋಲಾರದಲ್ಲಿ ಅವರು ಸ್ಪರ್ಧೆ ಮಾಡಬೇಕೆನ್ನುವುದು ಅಲ್ಲಿನ ಜನರ ಅಭಿಪ್ರಾಯ. ಅವರು ವರುಣಾದಲ್ಲೂ ಕೋಲಾರದಲ್ಲೂ ಗೆದ್ದೇ ಗೆಲ್ಲುತ್ತಾರೆ ಎಂದು ಕೃಷ್ಣ ಬೈರೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ವಿರುದ್ದ ವಾಗ್ದಾಳಿ :
ನಮ್ಮ ಬಗ್ಗೆ ಕನಿಕರದ ಮಾತನಾಡುವ ಬಿಜೆಪಿಯವರು ಈ ಬಾರಿಯ ಚುನಾವಣೆಯಲ್ಲಿ ಧೂಳೀಪಟ ಆಗುವುದನ್ನ ತಡೆಯುವುದರ ಬಗ್ಗೆ ಗಮನ ಹರಿಸಲಿ. ನಾಲ್ಕು ವರ್ಷಗಳಿಂದ 40% ಹೇಸಿಗೆ ತಿಂದಿರುವ ಇವರು 60 ಸ್ಥಾನ ಗೆಲ್ಲುವುದೂ ಕಷ್ಟ ಎಂದು ಬೈರೇಗೌಡ ಅಣಕವಾಡಿದರು.

ಈ ಸುದ್ದಿ ಓದಿದೀರಾ? : ರಾಜಕೀಯ ಅನುಭದಿಂದ ಹೇಳುವೆ, ಮುಂದಿನ ಬಾರಿ ಕಾಂಗ್ರೆಸ್ ಪಕ್ಷದ್ದೇ ಸರ್ಕಾರ: ಸಿದ್ದರಾಮಯ್ಯ

ಕಮಲ ಪಕ್ಷದ ದುರಾಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ. ಇವರಿಗೆ ಮಾರಿ ಹಬ್ಬ ಮಾಡಬೇಕು ಎಂದು ಜನ ಮತದಾನದ ದೊಣ್ಣೆ ಹಿಡಿದು ಕಾಯುತ್ತಾ ಕೂತಿದ್ದಾರೆ. ಯಡಿಯೂರಪ್ಪ ಅವರನ್ನು ಮೂಲೆ ಗುಂಪು ಮಾಡಿರುವ ಪಕ್ಷಕ್ಕೆ ಮಂಗಳಾರತಿ ಎತ್ತಲು ಕಾದು ನಿಂತಿದ್ದಾರೆ ಎಂದು ಮಾಜಿ ಸಚಿವರು ಚಾಟಿ ಬೀಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...